Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚೀನಾ ದಿಢೀರ್ ಆಗಿ ಭಾರತದ ವಿರುದ್ಧ ಸಂಘರ್ಷಕ್ಕೆ ಇಳಿದಿದ್ದು ಯಾಕೆ? ಗಡಿಯಲ್ಲಿ ಭಾರತ ಏನು ಮಾಡುತ್ತಿದೆ?

Public TV
Last updated: May 27, 2020 7:09 pm
Public TV
Share
4 Min Read
INDIA CHINA
SHARE

ಇಡೀ ವಿಶ್ವವೇ ಕೋವಿಡ್ 19 ವಿಚಾರದ ಬಗ್ಗೆ ತಲೆಕೆಡಿಸಿಕೊಂಡಿರುವಾಗ ಈ ವೈರಸ್ಸಿನ ತವರು ಮನೆ ಚೀನಾ ಈಗ ಭಾರತದ ಜೊತೆ ಗಡಿ ವಿಚಾರಕ್ಕೆ ಜಗಳಕ್ಕೆ ನಿಂತಿದೆ. ಅಷ್ಟೇ ಅಲ್ಲದೇ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಯುದ್ಧಕ್ಕೆ ಸನ್ನದ್ಧರಾಗಿ ಎಂದು ಕರೆ ನೀಡಿದ್ದಾರೆ. ಹೀಗಾಗಿ ಚೀನಾದ ವರ್ತನೆ ದಿಢೀರ್ ಬದಲಾಗಿದ್ದು ಯಾಕೆ? ಏನಿದು ವಿವಾದ ಇತ್ಯಾದಿ ಮಾಹಿತಿಗಳನ್ನು ನೀಡಲಾಗಿದೆ.

ಗಡಿ ಎಲ್ಲಿದೆ?
ಭಾರತ ಮತ್ತು ಚೀನಾದ ನಡುವೆ ಒಟ್ಟು 3,488 ಕಿ.ಮೀ ಗಡಿ ಇದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಮತ್ತು ರಾಜ್ಯಗಳಾದ ಉತ್ತರಾಖಂಡ್, ಹಿಮಾಚಲ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶಗಳು ಚೀನಾದ ಜೊತೆ ಗಡಿಯನ್ನು ಹಂಚಿಕೊಂಡಿವೆ.

indian army

ಏನಿದು ಎಲ್‍ಎಸಿ?
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಪದೇ ಪದೇ ಗುಂಡಿನ ಚಕಮಕಿ ಬಂದಾಗ ಎಲ್‍ಒಸಿ(ಗಡಿ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಕಂಟ್ರೋಲ್) ಪದ ಬರುತ್ತದೆ. ಭಾರತ ಮತ್ತು ಪಾಕಿಸ್ತಾನವನ್ನು ಜಮ್ಮು ಕಾಶ್ಮೀರದಲ್ಲಿ ಬೇರ್ಪಡಿಸುವ ಅಂತಾರಾಷ್ಟ್ರೀಯ ಗಡಿಯನ್ನು ಎಲ್‍ಒಸಿ ಎಂದು ಕರೆಯಲಾಗುತ್ತದೆ. ಅದೇ ರೀತಿಯಾಗಿ ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಕಾಶ್ಮೀರದಲ್ಲಿ ಭಾರತ ಮತ್ತು ಚೀನಾವನ್ನು ಬೇರ್ಪಡಿಸುವ ಗಡಿಯನ್ನು ಎಲ್‍ಎಸಿ(ಗಡಿ ವಾಸ್ತವಿಕ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಎಂದು ಕರೆಯಲಾಗುತ್ತದೆ. 1962ರಲ್ಲಿ ಭಾರತ ಚೀನಾ ನಡುವೆ ಯುದ್ಧದ ನಡೆಯಿತು. ಈ ಯುದ್ಧದ ಬಳಿಕ ಮುಂದೆ ಎರಡು ರಾಷ್ಟ್ರಗಳು ತಮ್ಮ ಭೂ ಪ್ರದೇಶವನ್ನು ಗುರುತಿಸಲು ಎಲ್‍ಎಸಿಯನ್ನು ಬಳಸುತ್ತಿವೆ. ಈ ಎಲ್‍ಎಸಿ ಅಂತರಾಷ್ಟ್ರೀಯ ಗಡಿ ರೇಖೆಯಲ್ಲ. ಈ ಲಡಾಖ್ ಪೂರ್ವ ಭಾಗದಲ್ಲಿರುವ ಅಕ್ಸಾಯ್ ಚೀನಾ ನಮ್ಮದು ಎನ್ನುವುದು ಭಾರತದ ವಾದ.

india china map 2

 

ಭಾರತ ಏನು ಮಾಡಿದೆ?
ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ ಭಾಗವಾಗಿರುವ ಗ್ಯಾಲ್ವಾನ್ ಪ್ರದೇಶದಲ್ಲಿ ಸ್ಥಳಿಯರಿಗೆ ಸಹಾಯ ಮಾಡಲು ರಸ್ತೆ ನಿರ್ಮಾಣಕ್ಕೆ ಕೈ ಹಾಕಿದೆ. ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು ಚೀನಾದ ಅಸಮಾಧಾನಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೇ ಲಡಾಖ್ ಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಿದೆ.

IndianArmy 1

ಚೀನಾ ಕಿರಿಕ್ ಮೊದಲೆನಲ್ಲ:
ಚೀನಾ ಭಾರತದ ಜೊತೆ ಗಡಿ ವಿಚಾರದಲ್ಲಿ ಗಲಾಟೆ ಮಾಡುವುದು ಇದು ಮೊದಲೆನಲ್ಲ. ಸಾಕಷ್ಟು ಬಾರಿ ಕಿತ್ತಾಟ ನಡೆಸಿದೆ. ಆದರೆ ಈಗ ಒಂದೇ ತಿಂಗಳಿನಲ್ಲಿ ಮೂರು ಬಾರಿ ಗಡಿಯಲ್ಲಿ ಕಿರಿಕ್ ಮಾಡಿದೆ. ಮೇ 5 ರಂದು ಪಾಂಗೊಂಗ್ ಸರೋವರದ ಮೇಲೆ ಹೆಲಿಕಾಪ್ಟರ್ ಹಾರಿಸಿತ್ತು. ಇದಕ್ಕೆ ಭಾರತ ಪ್ರತಿಭಟಿಸಿತ್ತು. ಇದಾದ ಬಳಿಕ ಸಿಕ್ಕಿಂನ ನಕು ಲಾ ಪಾಸ್ ನಲ್ಲಿ ಚೀನಾ- ಭಾರತ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಕೈ ಕೈ ಮಿಲಾಯಿಸಿದ್ದಕ್ಕೆ ಭಾರತೀಯ ಸೈನಿಕರು ಸರಿಯಾಗಿ ಪ್ರತ್ಯುತ್ತರ ನೀಡಿದ್ದರು. ಸ್ಥಳೀಯ ಮಾತುಕತೆಯಿಂದ ಇದನ್ನು ಪರಿಹಾರ ಮಾಡಿದ ಬಳಿಕ ಈಗ ಗ್ಯಾಲ್ವನ್ ನದಿ ಕಣಿವೆಯ ಗಡಿಯಲ್ಲಿ ಸಂಘರ್ಷ ಆರಂಭವಾಗಿದೆ.

ಚೀನಾ ಈಗ ಏನು ಮಾಡುತ್ತಿದೆ?
ಭಾರತ ಅಭಿವೃದ್ಧಿಗೆ ಕೈ ಹಾಕಿದ್ದನ್ನೇ ನೆಪವಾಗಿರಿಸಿಕೊಂಡು ಚೀನಾ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ. ಪಂಗೊಂಗ್ ಸರೋವರದ ಹತ್ತಿರ ಟಿಬೆಟ್ ನಿಂದ 200 ಕಿಲೋ ಮೀಟರ್ ದೂರದಲ್ಲಿ ನಗಾರಿ ಗುನ್ಸ ವಾಯುನೆಲೆ ಹತ್ತಿರ ಬೃಹತ್ ಪ್ರಮಾಣದ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಲಡಾಖ್ ಬಳಿ ವಾಯುನೆಲೆ ವಿಸ್ತರಿಸುತ್ತಿರುವ ದೃಶ್ಯಗಳು ಉಪಗ್ರಹ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ಚೀನಾ ಅತಿ ಎತ್ತರದಿಂದ ನಿಗಾ ಇಡುವ, ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಡ್ರೋನ್ ನಿಯೋಜಿಸಿದೆ.

India China

ಭಾರತ ಏನು ಮಾಡುತ್ತಿದೆ?
ಚೀನಾ ಹಿಂದಿನಿಂದಲೂ ಗಡಿಯಲ್ಲಿ ಕಿರಿಕ್ ಮಾಡುತ್ತಲೇ ಇದೆ. ಸಂಯಮದಿಂದಲೇ ಇರುವ ಭಾರತೀಯ ಸೈನಿಕರು ಈಗ ಚೀನಿಯರ ಈ ಆಟಕ್ಕೆ ಬ್ರೇಕ್ ಹಾಕಿದ್ದಾರೆ. ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ಜಮಾವಣೆ ಮಾಡಿದೆಯೋ ಆ ಪ್ರದೇಶಲ್ಲಿ ಭಾರತವೂ ಸಮಬಲ ಎಂಬಂತೆ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಯನ್ನು ಜಮಾವಣೆ ಮಾಡಿದೆ. ಚೀನಾ ಡ್ರೋನ್ ಗೆ ಪ್ರತಿಯಾಗಿ ಭಾರತವೂ ಡ್ರೋನ್ ಕ್ಯಾಮೆರಾ ನಿಯೋಜಿಸಿದೆ.

CHINA ARMY

ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸೇನೆಯ ಮೂರೂ ಮುಖ್ಯಸ್ಥರು ಹಾಗೂ ಮೂರೂ ಸೇನೆಗಳಿಗೆ ಮುಖ್ಯಸ್ಥರಾಗಿರುವ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಬಿಪಿನ್ ರಾವತ್ ಅವರ ಜತೆ ಮಂಗಳವಾರ ಮಹತ್ವದ ಸಭೆ ನಡೆಸಿದ್ದಾರೆ. ಚೀನಾ ಯಾವುದೇ ಪ್ರತಿಭಟನೆ ನಡೆಸಿದರೂ ಆರಂಭಗೊಳಿಸಿರುವ ರಸ್ತೆ ಕಾಮಗಾರಿಯನ್ನು ಮುಂದುವರಿಸಬೇಕು. ಮಾತುಕತೆಯ ಮೂಲಕ ಸಂಘರ್ಷಕ್ಕೆ ಪೂರ್ಣ ವಿರಾಮ ಬರುವವರೆಗೆ ಸೈನಿಕರನ್ನು ಹಿಂದಕ್ಕೆ ಕರೆಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ.

china virus Wuhan corona

ಚೀನಾ ಈಗ ಕಿರಿಕ್ ಮಾಡಿದ್ದು ಯಾಕೆ?
ಚೀನಾ ಭಾರತದ ಜೊತೆಗಿನ ಗಲಾಟೆಗೆ ಸುಮಾರು 50 ವರ್ಷಗಳ ಹಿಂದಿನ ಇತಿಹಾಸವಿದೆ. 1950ರಲ್ಲಿ ಟಿಬೆಟ್ ಆಕ್ರಮಿಸಿದ ಬಳಿಕ ಭಾರತ ದಲೈ ಲಾಮಾ ಅವರಿಗೆ ಆಶ್ರಯ ನೀಡಿದ್ದಕ್ಕೆ ಆಕ್ಷೇಪವಿದೆ. ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್(ಸಿಪಿಇಸಿ) ಯೋಜನೆಗೆ ಭಾರತದಿಂದ ವಿರೋಧವಿದೆ. ಈಗ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವದ ಹಲವು ಕಂಪನಿಗಳು ಚೀನಾ ತೊರೆದು ಭಾರತದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾಗುತ್ತಿದೆ. ಈ ವಿಚಾರವನ್ನು ಚೀನಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಉದ್ಯಮ ಸ್ಥಾಪಿಸಲು ಮುಂದಾಗುತ್ತಿರುವ ಕಂಪನಿಗಳಿಗೆ ಭಾರತದಲ್ಲಿ ಅಭದ್ರತೆ ಇದೆ ಎಂದು ತೋರಿಸಲು ಚೀನಾ ಕ್ಯಾತೆ ತೆರೆದಿದೆ.

ಚೀನಾ ಮೊದಲಿನಿಂದಲೂ ರಾಷ್ಟ್ರೀಯವಾದಿ ದೇಶ. ಕೊರೊನಾ ವಿಚಾರದಲ್ಲಿ ಸುಳ್ಳು ಹೇಳಿರುವ ವಿಚಾರ ಈಗಾಗಲೇ ಬಹಿರಂಗವಾಗಿದೆ. ಈ ಕಾರಣಕ್ಕೆ ಜನರನ್ನು ಈ ವಿಚಾರದಿಂದ ವಿಮುಖರನ್ನಾಗಿಸಿ ರಾಷ್ಟ್ರೀಯತೆ ವಿಚಾರದತ್ತ ಸೆಳೆಯಲು ಚೀನಾ ದಿಢೀರ್ ಭಾರತದ ವಿರುದ್ಧ ಕ್ಯಾತೆ ತೆಗೆದಿದೆ.

#WATCH China&India are each other's opportunities&pose no threat to each other. We need to see each other's development in a correct way…&correctly view our differences&never let differences shadow overall situation of bilateral cooperation: Chinese Envoy to India, Sun Weidong pic.twitter.com/iescP9dFpM

— ANI (@ANI) May 27, 2020

ಯುದ್ಧ ನಡೆಯುತ್ತಾ?
ಕೋವಿಡ್ 19ನಿಂದಾಗಿ ವಿಶ್ವವೇ ತಲ್ಲಣಗೊಂಡಿದೆ. ಭಾರತ ಮತ್ತು ಚೀನಾಗೂ ಭಾರೀ ನಷ್ಟವಾಗಿದೆ. ಪರಿಸ್ಥಿತಿ ಹೀಗಿರುವಾಗ ಎರಡು ದೇಶಗಳು ಯುದ್ಧ ಮಾಡಲಾರದು. “ನಾವು ಯಾವತ್ತೂ  ಮೊದಲು ದಾಳಿ ನಡೆಸುವುದಿಲ್ಲ. ಆದರೆ ಬೇರೆಯವರು ದಾಳಿ ನಡೆಸಿದರೆ ನಾವು ಸುಮ್ಮನಿರುವುದಿಲ್ಲ” ಎಂಬ ನೀತಿಯನ್ನು ಭಾರತೀಯ ಸೇನೆ ಅಳವಡಿಸಿಕೊಂಡಿದೆ. ಈಗಾಗಲೇ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವದ ಹಲವು ರಾಷ್ಟ್ರಗಳು ಚೀನಾ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿವೆ. ಪರಿಸ್ಥಿತಿ ಹೀಗಿರುವಾಗ ಚೀನಾ ಈ ದುಸ್ಸಾಹಸಕ್ಕೆ ಕೈ ಹಾಕಲಾರದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

We have informed both India and China that the United States is ready, willing and able to mediate or arbitrate their now raging border dispute. Thank you!

— Donald J. Trump (@realDonaldTrump) May 27, 2020

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಈ ವಿವಾದ ಬಗೆ ಹರಿಸಲು ಭಾರತ ಮತ್ತು ಚೀನಾದ ನಡುವೆ ಮಧ್ಯಸ್ಥಿಕೆ ನಡೆಸುವುದಾಗಿ ಟ್ವೀಟ್ ಮಾಡಿದ್ದಾರೆ.

TAGGED:chinaindiaLadakhnarendra modixi jinpingಕೋವಿಡ್ 19ಕ್ಸಿ ಜಿನ್‍ಪಿಂಗ್ಚೀನಾಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಭಾರತಲಡಾಖ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Bidar rain
Bidar

ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

Public TV
By Public TV
7 minutes ago
Amith Shah
Karnataka

ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

Public TV
By Public TV
12 minutes ago
Tamil Nadu CRPF Woman Home gold theft
Crime

CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

Public TV
By Public TV
24 minutes ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
37 minutes ago
Muslim Marriage
Bengaluru City

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

Public TV
By Public TV
1 hour ago
dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?