ಛತ್ತೀಸ್‍ಗಢದಲ್ಲಿ ನಕ್ಸಲ್ ದಾಳಿಗೆ 20 ಯೋಧರು ಹುತಾತ್ಮ – ಹಲವರು ನಾಪತ್ತೆ

Public TV
1 Min Read
army 2

ರಾಯ್‍ಪುರ: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದೊಡ್ಡ ದಾಳಿಗೆ 20 ಯೋಧರು ಹುತಾತ್ಮರಾಗಿದ್ದಾರೆ.

crpf

ಛತ್ತೀಸ್‍ಗಢದ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಿಡುಬಿಟ್ಟಿರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್‍ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ನಡೆಸಿತ್ತು. ಸಿಆರ್‍ಪಿಎಫ್‍ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆಗಿಳಿದು, ನಕ್ಸಲರ ಅಡಗುತಾಣದ ಮೇಲೆ ಶನಿವಾರ ದಾಳಿ ನಡೆಸಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಒಟ್ಟು 4 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ 20 ಜನ ಯೋಧರು ಈಗಾಗಲೇ ಹುತಾತ್ಮರಾಗಿದ್ದು, ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದ್ದು ನಾಪತ್ತೆಯಾಗಿರುವ ಯೋಧರಿಗಾಗಿ ತೀವ್ರ ಹುಡುಕಾಟ ಆರಂಭಿಸಿದೆ. ಈ ದಾಳಿಯಲ್ಲಿ 15 ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ 23 ಮಂದಿ ಯೋಧರನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್‍ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಛತ್ತೀಸ್‍ಗಢ ಪೊಲೀಸ್ ಮೂಲಗಳು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದೆ.

ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಸಂತಾಪ ಸೂಚಿಸಿ, ನಮ್ಮ ದೇಶವು ಯೋಧರ ಬಲಿದಾನವನ್ನು ಯಾವತ್ತು ಮರೆಯುವುದಿಲ್ಲ. ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ಶತ್ರುಗಳ ವಿರುದ್ಧ ಹೋರಾಟ ಮುಂದುವರಿಯಲಿ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *