Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಪಾಲಿಗೆ ಶಾಪಗ್ರಸ್ತವಾದ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರ ಪಾಲಿಗೆ ಶಾಪಗ್ರಸ್ತವಾದ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು: ದಿನೇಶ್ ಗುಂಡೂರಾವ್

Bengaluru City

ಜನರ ಪಾಲಿಗೆ ಶಾಪಗ್ರಸ್ತವಾದ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು: ದಿನೇಶ್ ಗುಂಡೂರಾವ್

Public TV
Last updated: June 14, 2021 4:37 pm
Public TV
Share
3 Min Read
Dinesh gundu rao 643x400 1
SHARE

ಬೆಂಗಳೂರು: ದೇಶವೇ ಕೋವಿಡ್ ಎರಡನೇ ಅಲೆಯ ಬೇಗುದಿಯಲ್ಲಿದೆ. ಲಾಕ್‍ಡೌನ್‍ನಿಂದಾಗಿ ಸೇವಾ ವಲಯ ಮತ್ತು ಉತ್ಪಾದನಾ ವಲಯ ನೆಲಕಚ್ಚಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಲಾಕ್‍ಡೌನ್ ಪರಿಣಾಮ ಲಕ್ಷಾಂತರ ಜನರಿಗೆ ಉದ್ಯೋಗ ನಷ್ಟವಾಗಿದೆ. ಈ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗಬೇಕಾದ ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರಗಳು ಬೆಲೆಯೇರಿಸಿ ಜನರ ಹಸಿ ಗಾಯದ ಮೇಲೆ ಬರೆ ಎಳೆದಿವೆ ಎಂದು ಕಿಡಿಕಾರಿದರು.

BJP Flag Final 6

ಮೋದಿಯವರ ಸರ್ಕಾರ ಜನಹಿತ ಮರೆತಿದೆ. ಕೋವಿಡ್ ಸಂಕಷ್ಟದ ಮಧ್ಯೆ ನಿರಂತರವಾಗಿ ತೈಲ ಬೆಲೆ ಏರಿಸುತ್ತಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 1 ಲೀಟರ್ ಪೆಟ್ರೋಲ್ 30 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಪೆಟ್ರೋಲ್ ಸಾರ್ವಕಾಲಿಕ ಹೆಚ್ಚಳ ಕಂಡು ಸೆಂಚುರಿ ಬಾರಿಸಿದೆ. ಡಿಸೇಲ್ ಕೂಡ ಶತಕದ ಗಡಿ ಸಮೀಪಿಸಿದೆ. ಮನ್‍ಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾ ತೈಲದ ಬೆಲೆ 125 ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ 70 ರೂಪಾಯಿಯಷ್ಟಿತ್ತು. ಈಗ ಕಚ್ಛಾತೈಲದ ಬೆಲೆ 70 ಡಾಲರ್ ಇದ್ದರೂ ಪೆಟ್ರೋಲ್ ಬೆಲೆ 100 ದಾಟಿದೆ. ಜೊತೆಗೆ ಈಗಿನ ಕೇಂದ್ರ ಸರ್ಕಾರ ಲೀಟರ್ ಪೆಟ್ರೋಲ್ ಮೇಲೆ 31.84 ಹಾಗೂ ಡಿಸೇಲ್ ಮೇಲೆ 32.84 ಅಬಕಾರಿ ಸುಂಕ ವಿಧಿಸಿ ಜನರ ಸುಲಿಗೆ ಮಾಡುತ್ತಿದೆ. 1 ಲೀಟರ್ ಪೆಟ್ರೋಲ್ ಮೂಲಬೆಲೆ 35 ರೂಪಾಯಿ ಇದ್ದರೂ ಜನರು 65 ರೂಪಾಯಿ ತೆರಬೇಕು. ಪ್ರಪಂಚದಲ್ಲಿ ಒಂದು ಲೀಟರ್ ಪೆಟ್ರೋಲ್‍ಗೆ ಶೇ.65 ರಷ್ಟು ತೆರಿಗೆ ಪಾವತಿಸುತ್ತಿರುವುದು ಭಾರತದಲ್ಲಿ ಮಾತ್ರ ಎಂದರು.

Petrol

ತೈಲಬೆಲೆ ಏರಿಕೆಯ ನೇರ ಪರಿಣಾಮ ಅಗತ್ಯ ವಸ್ತುಗಳ ಮೇಲೆ ಬಿದ್ದಿದೆ. ಸಾಗಾಣಿಕೆ ವೆಚ್ಚ ಹೆಚ್ಚಾಗಿದೆ. ವರ್ಷದ ಹಿಂದೆ ಸಾಮಾನ್ಯ ಕುಟುಂಬ ಮಾಸಿಕ 4 ಸಾವಿರದಲ್ಲಿ ಮನೆ ಖರ್ಚು ನಿಭಾಯಿಸುತಿತ್ತು. ಈಗ ಅದೇ ಕುಟುಂಬಕ್ಕೆ ತಿಂಗಳಿಗೆ ಹತ್ತು ಸಾವಿರ ಬೇಕು. 80 ರೂಪಾಯಿ ಇದ್ದ ತೊಗರಿಬೇಳೆಗೆ ಇಂದು 160 ರೂಪಾಯಿ. ಅಡುಗೆ ಎಣ್ಣೆಯ ಬೆಲೆ 90 ರಿಂದ 200 ರೂಪಾಯಿಗೆ ಏರಿಕೆಯಾಗಿದೆ. ಈ ಮಧ್ಯೆ 2013-14 ರಲ್ಲಿ 400 ರೂಪಾಯಿ ಇದ್ದ ಒಂದು ಗ್ಯಾಸ್ ಸಿಲಿಂಡೆರ್‍ನ ಬೆಲೆ 850 ಕ್ಕೆ ತಲುಪಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪ್ರತಿ ಯೂನಿಟ್ ವಿದ್ಯತ್‍ಗೆ 30 ಪೈಸೆ ಏರಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ದರ ಏರಿಸುವ ಸರ್ಕಾರದ ನಿರ್ಧಾರ ಸಂವೇದನಾರಹಿತಾ ನಡೆ. ವಿದ್ಯುತ್ ದರ ಏರಿಕೆಯಿಂದ ಜನಸಾಮಾನ್ಯರ ಜೊತೆ ಕೈಗಾರಿಕಾ ಕ್ಷೇತ್ರಕ್ಕೂ ದೊಡ್ಡ ಹೊಡೆತ ನೀಡಲಿದೆ. ಈಗಾಗಲೇ ಕೈಗಾರಿಕೆಗಳು ಲಾಕ್‍ಡೌನ್‍ನಿಂದಾಗಿ ಉತ್ಪಾದನೆ ನಿಲ್ಲಿಸಿವೆ. ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಬಾಗಿಲು ಮುಚ್ಚಿದರೆ ಆಗುವ ಉದ್ಯೋಗ ನಷ್ಟಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

POWER

ರಾಜ್ಯ ಸರ್ಕಾರದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯಕ್ಕೆ ರಾಜ್ಯದ ಜನ ಕೊರೊನಾ 2ನೇ ಅಲೆಯ ಭೀಕರ ಪರಿಣಾಮ ಎದುರಿಸುವಂತಾಯಿತು. ಚಾಮರಾಜನಗರದ ದುರಂತ ರಾಜ್ಯ ಸರ್ಕಾರದ ಪಾಪದ ಫಲ. ರಾಜ್ಯ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಯಿತು. ಲಾಕ್‍ಡೌನ್ ನಂತರ ಜನರ ಜೀವನದ ಮೇಲಾಗುವ ಪರಿಣಾಮದ ಬಗ್ಗೆ ಸರ್ಕಾರ ಯೋಚಿಸಲೇ ಇಲ್ಲ. ಲಾಕ್‍ಡೌನ್‍ನಿಂದ ಲಕ್ಷಾಂತರ ಜನರ ಬದುಕು ಮೂರಾಬಟ್ಟೆಯಾಯಿತು. ನಮ್ಮ ಪಕ್ಷ ನಿರಂತರವಾಗಿ ಒತ್ತಡ ಹೇರಿದ ಮೇಲೆ ಮುಖ್ಯಮಂತ್ರಿಯವರು ಕಾಟಾಚಾರಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸಿದರು. ಆದರೆ ಅದೊಂದು ಎಲ್ಲರನ್ನೂ ಒಳಗೊಳ್ಳದ ಕಣ್ಣೊರೆಸುವ ಪ್ಯಾಕೇಜ್ ಎಂದರು.

LOCKDOWN 2 3

ಲಾಕ್‍ಡೌನ್ ಪರಿಣಾಮ ರಾಜ್ಯದ ರೈತರ ಬದುಕು ಬೀದಿಗೆ ಬಂದಿದೆ. ಲಾಕ್‍ಡೌನ್‍ನಿಂದಾಗಿ ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ಸಿಗದೆ ನಷ್ಟ ಅನುಭವಿಸಿದ್ದಾರೆ. ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರೂ ಬಿತ್ತನೆ ಬೀಜ ಸಿಗದೆ, ಸಕಾಲಕ್ಕೆ ರಸಗೊಬ್ಬರ ಸಿಗದೆ ಹೈರಾಣಾಗಿದ್ದಾರೆ. ಸರ್ಕಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‍ನಲ್ಲಿ ರೈತರಿಗೆ ನಯಾಪೈಸೆಯ ನೆರವು ಸಿಗಲಿಲ್ಲ. ಕೇವಲ ಹೂವು ಬೆಳೆಗಾರರಿಗೆ ಹತ್ತು ಸಾವಿರ ಘೋಷಣೆ ಮಾಡಿ ಸರ್ಕಾರ ಕೈ ತೊಳೆದುಕೊಂಡಿದೆ ಎಂದು ಗರಂ ಆದರು.

corona virus medium

ಸರ್ಕಾರ ಸುಳ್ಳು ಭರವಸೆಗಳ ಮೂಲಕ ಜನರನ್ನು ವಂಚಿಸುವ ಕೆಲಸ ಬಿಡಬೇಕು. ಕೋವಿಡ್ ವಿಷಮ ಗಳಿಗೆಯಲ್ಲಿ ಬೆಲೆ ಏರಿಸುವ ನಿರ್ದಯತೆ ಸರ್ಕಾರಕ್ಕಿರಬಾರದು. ಕೇಂದ್ರ ಸರ್ಕಾರ ತೈಲಬೆಲೆ ಇಳಿಸಿ, ಅಗತ್ಯ ವಸ್ತುಗಳ ಬೆಲೆ ಇಳಿಸಲಿ ಇನ್ನು ಸರ್ಕಾರಕ್ಕೆ ನನ್ನ ಆಗ್ರಹವೇನೆಂದರೆ, ಸರ್ಕಾರ ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ರೂಪಾಯಿಗಳ ಸಹಾಯಧನ ನೀಡಬೇಕು. ಆಸ್ತಿ ತೆರಿಗೆಯಲ್ಲಿ ಶೇ. 50 ರಷ್ಟು ವಿನಾಯಿತಿ ನೀಡಬೇಕು. ಜೊತೆಗೆ ಈ ಕೂಡಲೆ ವಿದ್ಯುತ್ ದರ ಇಳಿಸಿ ಯಥಾಸ್ಥಿತಿ ಕಾಪಾಡಬೇಕೆಂದು ಆಗ್ರಹಿಸುವುದಾಗಿ ಗುಂಡೂರಾವ್ ಹೇಳಿದ್ದಾರೆ.

TAGGED:bengalurubjpCentral govtcongressdinesh gunduraoPublic TVstate govtಕಾಂಗ್ರೆಸ್ಕೇಂದ್ರ ಸರ್ಕಾರದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
7 seconds ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
6 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
21 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
21 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
31 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?