Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ

Bengaluru City

ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ

Public TV
Last updated: December 31, 2020 4:43 pm
Public TV
Share
3 Min Read
PIB Webniar dr ravi
SHARE

ಬೆಂಗಳೂರು: ಜನರ ಬೇಜವಾಬ್ದಾರಿಯಿಂದಾಗಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು ಎಂದು ನಿಮ್ಹಾನ್ಸ್‌ ನಿವೃತ್ತ ವೈರಾಣು ತಜ್ಞ ಹಾಗೂ ರಾಜ್ಯ ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಡಾ. ರವಿ ಅಭಿಪ್ರಾಯಪಟ್ಟರು.

ಪ್ರೆಸ್ ಇನ್ಫ್‌ರ್ಮೇಷನ್‌ ಬ್ಯುರೊ ಹಾಗೂ ಕರ್ನಾಟಕ ಪತ್ರಕರ್ತೆಯರ ಸಂಘ `ಕೊವಿಡ್‍ನ ವಿಭಿನ್ನ ಆಯಾಮ’ಗಳ ಕುರಿತು ಗುರುವಾರ ಜಂಟಿಯಾಗಿ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಅವರು ಮಾತನಾಡಿದರು.

ಯುರೋಪ್‍ನ ಹಲವು ದೇಶಗಳು ಹಾಗೂ ಅಮೆರಿಕದ ಸನ್ನಿವೇಶವನ್ನು ಗಮನಿಸಿದಾಗ ಮೊದಲ ಅಲೆ ಮುಕ್ತಾಯಗೊಂಡ ನಾಲ್ಕೈದು ತಿಂಗಳ ನಂತರ ಎರಡನೇ ಅಲೆ ಶುರುವಾಗಿದೆ. ಇಲ್ಲಿಯೂ ಹಾಗೆ ಆಗುವ ಸಂಭವವಿದೆ. ಕೊವಿಡ್ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಜನ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ, ಸಾನಿಟೈಸರ್ ಬಳಸದೇ ಇದ್ದಲ್ಲಿ ಈ ಸಾಧ್ಯತೆ ಹೆಚ್ಚು. ಮಾರುಕಟ್ಟೆಗೆ ಹೋದಾಗ, ಅಥವಾ ಸಮಾರಂಭಗಳಿಗೆ ಹೋದಾಗ ಅಂತರ ಕಾಯ್ದುಕೊಳ್ಳಬೇಕು. ಕೊವಿಡ್ ಮುಗಿಯಿತು ಎಂದು ಮದುವೆಯಂತಹ ಸಮಾರಂಭಗಳಿಗೆ ಹೆಚ್ಚು ಜನ ಸೇರುವುದು ತಪ್ಪು. ಅಲ್ಲಿ ಒಂದಿಬ್ಬರು ರೋಗಲಕ್ಷಣ ಇಲ್ಲದೇ ಕೊವಿಡ್ ಸೋಂಕಿಗೆ ಒಳಗಾಗಿರಬಹುದು. ಅಂತಹವರಿಂದ ವೈರಸ್ ಹಬ್ಬುತ್ತದೆ. ಹಾಗೆಯೇ ಹಳೆಯ ವೈರಸ್ ತನ್ನ ರೂಪ ಬದಲಿಸಿಕೊಂಡೂ ಸೋಂಕುಂಟುಮಾಡಬಹುದು ಎಂದು ಅವರು ಎಚ್ಚರಿಸಿದರು.

PIB Webniar dr ravi 2

ಬ್ರಿಟನ್‍ನಲ್ಲಿ ಈಗ ರೂಪ ಬದಲಿಸಿಕೊಂಡು ಹಬ್ಬುತ್ತಿರುವ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಸದ್ಯಕ್ಕೆ ಬ್ರಿಟನ್‍ನಿಂದ ಮರಳಿದವರಲ್ಲಿ ಮಾತ್ರ ಈ ವೈರಸ್ ಇರುವುದರಿಂದ ಭಯಪಡುವ ಅಗತ್ಯವಿಲ್ಲ. ಬ್ರಿಟನ್‍ನಲ್ಲಿ ಈ ಮಾರ್ಪಟ್ಟಿರುವ ವೈರಸ್ ವೇಗವಾಗಿ ಹಬ್ಬುತಿದ್ದರೂ ಅದರಿಂದ ಸಾವಿಗೀಡಾದವರ ಪ್ರಮಾಣವೂ ಕಡಿಮೆಯಿದೆ. ವೇಗವಾಗಿ ಹಬ್ಬುವ ವೈರಸ್‍ಗಳು ಕಡಿಮೆ ಅಪಾಯಕಾರಿಯಾಗಿರುತ್ತವೆ ಎಂದೂ ಅವರು ತಿಳಿಸಿದರು.

`ಕೊವಿಡ್-19′ ಗೆ ಸಿದ್ಧಪಡಿಸಿರುವ ಲಸಿಕೆ ರೂಪಾಂತರಗೊಂಡಿರುವ ವೈರಸ್‍ಗಳ ಸೋಂಕನ್ನು ತಡೆಯಬಲ್ಲದು. ಆ ಬಗ್ಗೆ ಭಯ ಬೇಡ. ಹಾಗೆಯೇ ಇದು ಜೈವಿಕ ಅಸ್ತ್ರವಾಗಿ ಸಿದ್ಧಪಡಿಸಿರುವ ಕೃತಕ ವೈರಸ್ ಅಲ್ಲ. ಬಾವಲಿಯಿಂದ ಮನುಷ್ಯರಿಗೆ ಹಬ್ಬಿರುವ ವೈರಸ್ ಎಂದು ಡಾ. ರವಿ ಸ್ಪಷ್ಟಪಡಿಸಿದರು.

ಪರಿಸರ ನಾಶ ಹಾಗೂ ಮಾನವನ ದುರಾಸೆಯಿಂದಾಗಿ ಪ್ರಾಣಿಜನ್ಯ ವೈರಸ್‍ಗಳು ಮನುಷ್ಯರಿಗೆ ಹಬ್ಬುತ್ತವೆ. 15 ವರ್ಷಗಳ ಹಿಂದೆ ಆಗ್ನೇಯ ಏಷ್ಯಾ ದೇಶಗಳಲ್ಲಿ ಕಾಣಿಸಿಕೊಂಡ ಸಾರ್ಸ್- ಕೊವಿಡ್ ವೈರಸ್ ಬಾವಲಿಯಿಂದ ಇರುವೆ ತಿನ್ನುವ ಒಂದು ಪ್ರಬೇಧದ ಸಸ್ತನಿಯ ಮೂಲಕ ಮನುಷ್ಯರಿಗೆ ಹಬ್ಬಿತ್ತು. ಎಂಟು ವರ್ಷಗಳ ಹಿಂದೆ ಮಧ್ಯಪ್ರಾಚ್ಯದಲ್ಲಿ ಕಾಣಿಸಿಕೊಂಡಿದ್ದ `ಮರ್ಸ್’ ವೈರಸ್ ಬಾವಲಿಯಿಂದ ಒಂಟೆಗೆ ಹಬ್ಬಿ ಆ ಮೂಲಕ ಮನುಷ್ಯರಲ್ಲಿ ಸೋಂಕುಂಟುಮಾಡಿತ್ತು. ಮುಂದೆಯೂ ಈ ಬಗೆಯ ವೈರಸ್‍ಗಳು ಮನುಷ್ಯರಲ್ಲಿ ಸೋಂಕುಂಟು ಮಾಡುತ್ತವೆ. ಕಾಡು ಪ್ರಾಣಿಗಳನ್ನು ತಿನ್ನುವ ಚೀನಾ, ಕಾಂಬೋಡಿಯಾ, ವಿಯೆಟ್ನಾಂ ದೇಶಗಳ `ವೆಟ್ ಮಾರ್ಕೆಟ್’ ಅಥವಾ ದಕ್ಷಿಣ ಅಮೆರಿಕ ಖಂಡದ ಅಮೆಜಾನ್ ಅರಣ್ಯ ಪ್ರದೇಶದ ದೇಶಗಳು ಹಾಗೂ ಆಫ್ರಿಕಾದಿಂದ ಇಂತಹ ವೈರಸ್‍ಗಳು ಹಬ್ಬುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದರು.

Corona 7

ಕೊವಿಡ್ ನಂತರದ ಆರೋಗ್ಯ ಸಮಸ್ಯೆಗಳ ಕುರಿತು ಮಾತನಾಡಿದ ಎಂ. ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಕೆ. ಸುಜನಿ, ಮಧುಮೇಹ ಹಾಗೂ ರಕ್ತದೊತ್ತಡ ಇರುವ ಗರ್ಭಿಣಿಯರಲ್ಲಿ ಕೊವಿಡ್ ಸೋಂಕು ಹೆಚ್ಚು ತೀವ್ರವಾಗಿರುತ್ತದೆ ಎಂದರು. ಸಾಮಾನ್ಯವಾಗಿ ಕೊವಿಡ್ ಸೋಂಕು 50 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚು ದುಷ್ಪರಿಣಾಮ ಬೀರುತ್ತದೆ. ಗರ್ಭಿಣಿಯರು ಈ ವಯೋಮಾನದಲ್ಲಿ ಬರದೇ ಇರುವುದರಿಂದ ತಮ್ಮ ರೋಗಿಗಳಲ್ಲಿ ಅಂತಹ ಸಂಕೀರ್ಣ ಸಮಸ್ಯೆಗಳು ಈವರೆಗೆ ಕಂಡುಬಂದಿಲ್ಲ ಎಂದು ತಿಳಿಸಿದರು.

ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಸ್ವಾಗತಿಸಿದರು. ಪಿಐಬಿ ಅಧಿಕಾರಿ ಕೆ. ವೈ. ಜಯಂತಿ, ಪತ್ರಕರ್ತೆಯರ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆಯರಾದ ಎಂ.ಪಿ. ಸುಶೀಲಾ, ಕೆ. ಎಚ್. ಸಾವಿತ್ರಿ, ಆಯೇಷಾ ಖಾನಂ, ಅಫ್ಸಾ ಯಾಸ್ಮೀನ್, ಸುನೀತಾ ರಾವ್, ವಾಣಿಶ್ರೀ ಪತ್ರಿ, ಭಾರತಿ ಸಾಮಗ, ಚಿತ್ರಾ ಫಾಲ್ಗುಣಿ ಮತ್ತಿತರರು ವೆಬಿನಾರ್‌ನಲ್ಲಿ ಪಾಲ್ಗೊಂಡಿದ್ದರು.

TAGGED:CoronaCorona VirusCovid 19PIBWebinarಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಬ್ರಿಟನ್ ಕೊರೊನಾ
Share This Article
Facebook Whatsapp Whatsapp Telegram

Cinema news

Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema
gilli Ashwini Gowda BBK12
ಕೆಲ್ಸ ಮಾಡದೇ ಕೆಲ್ಸ ಮಾಡ್ಸೋಕೆ ನಿಂತ ಗಿಲ್ಲಿ – ಕಿಚನ್ ವಾರ್‌ನಲ್ಲಿ ಕ್ಯಾಪ್ಟನ್‌ Vs ಅಶ್ವಿನಿ
Cinema Latest Sandalwood Top Stories TV Shows
Alpha Men Love Violence Rawa Rawa Video Song released Hemanth Kumar Anand Kumar Vijay Anoop Seelin J 2
ಆಲ್ಫಾ ಚಿತ್ರದ ರಾವ ರಾವ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Sandalwood
1 1
ಹಿನ್ನೋಟ: ಧುರಂಧರ್‌, ಕಾಂತಾರದಿಂದ ಹೌಸ್‌ಫುಲ್‌ವರೆಗೆ – 2025ರಲ್ಲಿ ತೆರೆಕಂಡ 10 ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾಗಳಿವು!
Cinema Latest Main Post Special

You Might Also Like

DVG DRUGS ARREST
Crime

ದಾವಣಗೆರೆಯಲ್ಲಿ ಮಾದಕ ಮಾರ್ಜಾಲ – ಸಚಿವರ ಆಪ್ತರ ಬಂಧನ

Public TV
By Public TV
16 seconds ago
pub party
Bengaluru City

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಗೈಡ್‌ಲೈನ್ಸ್ – ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ

Public TV
By Public TV
32 minutes ago
Tourists coming to Chikkamagaluru for New Year celebrations Temporary restrictions on 22 tourist spots 1
Chikkamagaluru

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

Public TV
By Public TV
40 minutes ago
NANDIHILLS
Chikkaballapur

ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ

Public TV
By Public TV
40 minutes ago
Chalavadi narayanaswamy
Bengaluru City

ನಮ್ಮ ಗೃಹ ಇಲಾಖೆ ಸತ್ತು ಹೋಗಿದ್ಯಾ? ಇದೆಂಥಾ ಗುಲಾಮಗಿರಿ ಸರ್ಕಾರ? – ಛಲವಾದಿ ನಾರಾಯಣಸ್ವಾಮಿ ನಿಗಿನಿಗಿ

Public TV
By Public TV
54 minutes ago
DEVESHWARA DEVEGOWDA
Districts

ಹುಟ್ಟೂರಲ್ಲಿ ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ದೊಡ್ಡಗೌಡ್ರು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?