ವಿಜಯಪುರ: ಜಮೀನಿನಲ್ಲಿದ್ದ 80 ಕ್ವಿಂಟಲ್ ನಷ್ಟು ಕಡಲೆ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದಲ್ಲಿ ನಡೆದಿದೆ.
ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದ ರೈತ ಸಂಗಪ್ಪ ತೋಟದ ಅವರಿಗೆ ಸೇರಿದ ಕಡಲೆ ಇದಾಗಿದ್ದು, ಸುಮಾರು 12 ಎಕರೆಯಲ್ಲಿನ ಅಂದಾಜು 5 ಲಕ್ಷ ಮೌಲ್ಯದ ಕಡಲೆ ಬೆಳೆ ಅಗ್ನಿಗಾಹುತಿಯಾಗಿದೆ. ಇದರಿಂದ ರೈತ ಸಂಗಪ್ಪ ಅವರು ಕಂಗಾಲಾಗಿದ್ದಾರೆ.
- Advertisement 2
- Advertisement 3
ಸಾಲ ಮಾಡಿ ಕಡಲೆ ಬೆಳೆ ಬೆಳೆದಿದ್ದ ರೈತ ಸಂಗಪ್ಪ ರಾಶಿ ಮಾಡಲೆಂದು ಕಡಲೆ ಕೂಡಿಟ್ಟಿದ್ದರು. ಇದನ್ನ ಸಹಿಸದ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕಡಲೆ ಬೆಳೆಗೆ ಬೆಂಕಿ ಹಚ್ಚಿದ್ದಾರೆಂದು ರೈತ ಸಂಗಪ್ಪ ಆರೋಪಿಸುತ್ತಿದ್ದಾರೆ.
- Advertisement 4
ನಾಲ್ಕೈದು ವರ್ಷಗಳಿಂದ ತನ್ನ ಬೆಳೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದಲ್ಲದೇ, ಜಮೀನಿನಲ್ಲಿದ್ದ ಕೃಷಿ ಉಪಕರಣಗಳನ್ನು ಸಹ ಕಳ್ಳತನ ಮಾಡಿದ್ದಾರೆ. ಆದ್ದರಿಂದ ಈ ಖದೀಮರನ್ನ ಆದಷ್ಟು ಬೇಗ ಪೊಲೀಸರು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.