ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ರೈತ ಸಾವು

Public TV
0 Min Read
hvr death

ಹಾವೇರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತ ಸಾವನ್ನಪ್ಪಿರುವ ದುರ್ಘಟನೆ ಹಾವೇರಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು 45 ವರ್ಷದ ಹಾಲಪ್ಪ ಕಲ್ಯಾಣಪ್ಪ ಬಂಕಾಪುರ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಜಮೀನಿನಲ್ಲಿ ಮೆಕ್ಕೆಜೋಳದ ಮೇವು ತೆಗೆಯುತ್ತಿದ್ದ ವೇಳೆ ಹಾವು ಕಚ್ಚಿದೆ. ಹಾವು ಕಚ್ಚಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Haveri hospital HVR 2

ಚಿಕಿತ್ಸೆ ಫಲಕಾರಿಯಾಗದೆ ಹಾಲಪ್ಪ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *