ಹುಬ್ಬಳ್ಳಿ: ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಅಪರಾಧಿಗೆ ಐದನೇ ಜೆ.ಎಂ.ಎಫ್.ಸಿ ಹೆಚ್ಚುವರಿ ನ್ಯಾಯಾಲಯು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡವನ್ನು ವಿಧಿಸಲಾಯಿತು.
ಖಾದರಸಾಬ್ ಮನಿಯೂರ ಎಂಬವನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2017ರ ಸೆಪ್ಟೆಂಬರ್ 25 ರಂದು ಆರೋಪಿಯು ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ನೀಲವ್ವ ತಿಪ್ಪಣ್ಣವರ ಎಂಬವರನ್ನ ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಅಪರಾಧಿ ಖಾದರಸಾಬ್ ಮನಿಯೂರಗೆ ಐದನೇ ಜೆ.ಎಂ.ಎಫ್.ಸಿ ಹೆಚ್ಚುವರಿ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಕಲಂ 302 ಅಡಿಯಲ್ಲಿ ಅಪರಾಧ ಸಾಬೀತಾಗಿದ್ದು, ನ್ಯಾಯಾಧೀಶರಾದ ಕೆ.ಎನ್.ಗಂಗಾಧರ್ ಶಿಕ್ಷೆಯ ತೀರ್ಪು ನೀಡಿದ್ದಾರೆ. ಇನ್ನೂ ಸರ್ಕಾರಿ ಅಭಿಯೋಜಕರಾದ ಸುಮಿತ್ರಾ ಅಂಚಟಗೇರಿ ವಾದವನ್ನು ಮಂಡಿಸಿದ್ದಾರೆ.