Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ನಡೆಸಿ – ದಾಖಲೆಯೊಂದಿಗೆ ಸಿಎಂಗೆ ಸಂಬರಗಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಮೀರ್ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ನಡೆಸಿ – ದಾಖಲೆಯೊಂದಿಗೆ ಸಿಎಂಗೆ ಸಂಬರಗಿ ದೂರು

Bengaluru City

ಜಮೀರ್ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ನಡೆಸಿ – ದಾಖಲೆಯೊಂದಿಗೆ ಸಿಎಂಗೆ ಸಂಬರಗಿ ದೂರು

Public TV
Last updated: September 22, 2020 6:50 pm
Public TV
Share
2 Min Read
Prashant Sambaragi Zameer
SHARE

ಬೆಂಗಳೂರು: ಮಾಜಿ ಮಂತ್ರಿ, ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ವಿರುದ್ಧ ದೂರು ನೀಡಿ ತನಿಖೆ ನಡೆಸಬೇಕೆಂದು ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ವಿಧಾನ ಸೌಧಕ್ಕೆ ಯಡಿಯೂರಪ್ಪನವರನ್ನು ಭೇಟಿಯಾಗಲು ಸಂಬರಗಿ ಬಂದಿದ್ದರು. ಆದರೆ ಅವರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಯಡಿಯೂರಪ್ಪನವರಿಗೆ ಕಾರಿಡರ್‌ನಲ್ಲಿ ದೂರು ನೀಡಿದರು. ಸಂಬರಗಿ ದೂರಿಗೆ ಸಿಎಂ ತಲೆಯಾಡಿಸಿ ಹೊರಟು ಹೋದರು.

ಬಳಿಕ ಮಾತನಾಡಿದ ಸಂಬರಗಿ, ಶಾಸಕ ಜಮೀರ್ ಅಹಮದ್ ಕಾನೂನು ಬಾಹಿರವಾದ ಪ್ರಯಾಣ ಮಾಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಯಾವುದೇ ದಾಖಲೆ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ ಎಂದು ತಿಳಿಸಿದರು.

zameer sanjana

ದೂರಿನ ಪತ್ರದಲ್ಲಿ ಏನಿದೆ?
ಪ್ರಶಾಂತ್ ಸಂಬರಗಿ ಆದ ನಾನು, ಒಬ್ಬ ಉದ್ಯಮಿಯಾಗಿ ಮತ್ತು ಜವಾಬ್ದಾರಿಯುತ ನಾಗರೀಕನಾಗಿ ಹಲವು ವರ್ಷಗಳಿಂದ ಸಮಾಜ ಸೇವೆ ಮತ್ತು ಸಾರ್ವಜನಿಕ ಜೀವನದಲ್ಲಿದ್ದೇನೆ. ಇತ್ತೀಚೆಗೆ ಡ್ರಗ್ಸ್ ದಂಧೆಗೂ ಕನ್ನಡ ಚಿತ್ರರಂಗಕ್ಕೂ ಇರುವ ಲಿಂಕ್ ಅನ್ನು ಬಯಲಿಗೆಳೆದಿದ್ದೇನೆ.

ಈ ಪತ್ರದ ಮೂಲಕ ನಾನು, ಕಾಂಗ್ರೆಸ್​ನ ಶಾಸಕ ಮತ್ತು ಮಾಜಿ ಸಚಿವರೊಬ್ಬರು ಗಂಭೀರವಾದ ಮತ್ತು ಅಪಾಯಕಾರಿಯಾದ ನಡೆಯ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ.

ನಿಮಗೂ ಗೊತ್ತಿರಬಹುದು. ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿಗಳ ನಡಾವಳಿ ಮತ್ತು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ನಿಯಮಗಳ ಪ್ರಕಾರ ಯಾವುದೇ ಸಚಿವರು ಅಥವಾ ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವ ಮುನ್ನ ಮುಖ್ಯ ಕಾರ್ಯದರ್ಶಿಗಳು ಅಥವಾ ಮುಖ್ಯಮಂತ್ರಿಗಳ ಕಚೇರಿಯಿಂದ ಅಥವಾ ರಾಜ್ಯ ಶಿಷ್ಟಾಚಾರ ಅಧಿಕಾರಿಯ ಅನುಮತಿ ಪಡೆದುಕೊಳ್ಳಬೇಕು.

sri lanka casino

ಈ ವಿಚಾರವಾಗಿ ಚಾಮರಾಜಪೇಟೆಯ ಹಾಲಿ ಶಾಸಕ ಮತ್ತು ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಕಳೆದ ಐದು ವರ್ಷಗಳಲ್ಲಿ ಹಲವು ವಿದೇಶಿ ಪ್ರವಾಸಗಳನ್ನ ಮಾಡಿದ್ದಾರೆ. ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಯಾವುದೇ ವಿದೇಶ ಪ್ರವಾಸಕ್ಕೂ ಜಮೀರ್ ಅಹಮದ್ ಖಾನ್ ಅನುಮತಿಯನ್ನು ಪಡೆದುಕೊಂಡಿಲ್ಲ.

ಜಮೀರ್ ಅಹಮದ್ ಖಾನ್ ಅವರು ಕೇವಲ ಶಾಸಕರಲ್ಲ. 2018 ಜೂನ್ 6 ರಿಂದ 2019 ಜುಲೈ 9 ರ ವರೆಗೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದಾರೆ.

ಈ ಮೂಲಕ ನಾನು ನಿಮ್ಮ ಗಮನಕ್ಕೆ ತರುವುದೇನೆಂದರೆ, ಜಮೀರ್ ಅಹಮದ್ ಖಾನ್ ಅವರು 2019ರ ಜೂನ್ 8 ರಿಂದ 10 ರ ವರೆಗೆ ವಿದೇಶ ಪ್ರವಾಸ ಮಾಡಿರುತ್ತಾರೆ. ಯಾಕೆ ಅವರು ಈ ಪ್ರವಾಸದ ವಿಚಾರವನ್ನ ಸಂಬಂಧಿತ ಅಧಿಕಾರಿಗಳಿಂದ ಮುಚ್ಚಿಟ್ಟಿದ್ದಾರೆ ಎನ್ನುವುದಕ್ಕೆ ಸ್ಪಷ್ಟತೆಯಿಲ್ಲ. ನಿಮಗೆ ಗೊತ್ತಿರಬಹುದು ಇತ್ತೀಚೆಗೆ ಜಮೀರ್ ಅಹಮದ್ ಅವರ ಹೆಸರು ಕನ್ನಡ ಮಾಧ್ಯಮಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ.

India China

ಇತ್ತೀಚಿನ ಅಂತಾರಾಷ್ಟ್ರೀಯ ತನಿಖಾ ಏಜೆನ್ಸಿಯ ವರದಿಯೊಂದು ಬಹಿರಂಗಪಡಿಸಿರುವಂತೆ, ಚೀನಾ 10 ಸಾವಿರಕ್ಕೂ ಹೆಚ್ಚು ಭಾರತೀಯರ ಮೇಲೆ ಗೂಡಾಚಾರಿಕೆ ಮಾಡುತ್ತಿದೆ. ಇಂಥಾ ಸಂದರ್ಭದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ ಕಾನೂನು ಪಾಲನೆ ಮಾಡಬೇಕಾಗಿದ್ದ ಜಮೀರ್ ಅಹಮದ್ ಖಾನ್ ಅವರು ತಮ್ಮ ವಿದೇಶಿ ಪ್ರವಾಸಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ. ಇದು ಅವರ ಉದ್ದೇಶಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ನಾಗರೀಕನಾಗಿ ನಾನು ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜಮೀರ್ ಅಹಮದ್ ಖಾನ್ ಅವರ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ಮಾಡಬೇಕೆಂದು ಮನವಿಮಾಡಿಕೊಳ್ಳುತ್ತೇನೆ.

ಈ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ನಾನು ನಿಮ್ಮ ಗಮನಕ್ಕೆಂದು ಲಗತ್ತಿಸಿರುತ್ತೇನೆ.

TAGGED:foreign tripsPrashanth SambargiSandalwood DrugsYediyurappazameer ahmedಜಮೀರ್ ಅಹಮದ್ಡ್ರಗ್ಸ್ಪ್ರಶಾಂತ್ ಸಂಬರಗಿಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
4 minutes ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
49 minutes ago
car hits ksrtc bus on bengaluru mysuru expressway elderly couple saved by seat belts
Crime

ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Public TV
By Public TV
1 hour ago
Fire at Janardhan Reddys model house in Ballari
Bellary

ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ನಲ್ಲಿ ಅಗ್ನಿ ಅವಘಡ – ಕಾಂಗ್ರೆಸ್‌ನವರ ಕೃತ್ಯ ಎಂದ ಸೋಮಶೇಖರ ರೆಡ್ಡಿ

Public TV
By Public TV
1 hour ago
Jammu Kashmir Encounter Jaish Terrorist Dead
Crime

ಜಮ್ಮು ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ಜೈಶ್ ಉಗ್ರ ಬಲಿ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?