Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಮೀರ್ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ನಡೆಸಿ – ದಾಖಲೆಯೊಂದಿಗೆ ಸಿಎಂಗೆ ಸಂಬರಗಿ ದೂರು

Public TV
Last updated: September 22, 2020 6:50 pm
Public TV
Share
2 Min Read
Prashant Sambaragi Zameer
SHARE

ಬೆಂಗಳೂರು: ಮಾಜಿ ಮಂತ್ರಿ, ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ವಿರುದ್ಧ ದೂರು ನೀಡಿ ತನಿಖೆ ನಡೆಸಬೇಕೆಂದು ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ವಿಧಾನ ಸೌಧಕ್ಕೆ ಯಡಿಯೂರಪ್ಪನವರನ್ನು ಭೇಟಿಯಾಗಲು ಸಂಬರಗಿ ಬಂದಿದ್ದರು. ಆದರೆ ಅವರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಯಡಿಯೂರಪ್ಪನವರಿಗೆ ಕಾರಿಡರ್‌ನಲ್ಲಿ ದೂರು ನೀಡಿದರು. ಸಂಬರಗಿ ದೂರಿಗೆ ಸಿಎಂ ತಲೆಯಾಡಿಸಿ ಹೊರಟು ಹೋದರು.

ಬಳಿಕ ಮಾತನಾಡಿದ ಸಂಬರಗಿ, ಶಾಸಕ ಜಮೀರ್ ಅಹಮದ್ ಕಾನೂನು ಬಾಹಿರವಾದ ಪ್ರಯಾಣ ಮಾಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಯಾವುದೇ ದಾಖಲೆ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ ಎಂದು ತಿಳಿಸಿದರು.

zameer sanjana

ದೂರಿನ ಪತ್ರದಲ್ಲಿ ಏನಿದೆ?
ಪ್ರಶಾಂತ್ ಸಂಬರಗಿ ಆದ ನಾನು, ಒಬ್ಬ ಉದ್ಯಮಿಯಾಗಿ ಮತ್ತು ಜವಾಬ್ದಾರಿಯುತ ನಾಗರೀಕನಾಗಿ ಹಲವು ವರ್ಷಗಳಿಂದ ಸಮಾಜ ಸೇವೆ ಮತ್ತು ಸಾರ್ವಜನಿಕ ಜೀವನದಲ್ಲಿದ್ದೇನೆ. ಇತ್ತೀಚೆಗೆ ಡ್ರಗ್ಸ್ ದಂಧೆಗೂ ಕನ್ನಡ ಚಿತ್ರರಂಗಕ್ಕೂ ಇರುವ ಲಿಂಕ್ ಅನ್ನು ಬಯಲಿಗೆಳೆದಿದ್ದೇನೆ.

ಈ ಪತ್ರದ ಮೂಲಕ ನಾನು, ಕಾಂಗ್ರೆಸ್​ನ ಶಾಸಕ ಮತ್ತು ಮಾಜಿ ಸಚಿವರೊಬ್ಬರು ಗಂಭೀರವಾದ ಮತ್ತು ಅಪಾಯಕಾರಿಯಾದ ನಡೆಯ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ.

ನಿಮಗೂ ಗೊತ್ತಿರಬಹುದು. ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿಗಳ ನಡಾವಳಿ ಮತ್ತು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ನಿಯಮಗಳ ಪ್ರಕಾರ ಯಾವುದೇ ಸಚಿವರು ಅಥವಾ ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವ ಮುನ್ನ ಮುಖ್ಯ ಕಾರ್ಯದರ್ಶಿಗಳು ಅಥವಾ ಮುಖ್ಯಮಂತ್ರಿಗಳ ಕಚೇರಿಯಿಂದ ಅಥವಾ ರಾಜ್ಯ ಶಿಷ್ಟಾಚಾರ ಅಧಿಕಾರಿಯ ಅನುಮತಿ ಪಡೆದುಕೊಳ್ಳಬೇಕು.

sri lanka casino

ಈ ವಿಚಾರವಾಗಿ ಚಾಮರಾಜಪೇಟೆಯ ಹಾಲಿ ಶಾಸಕ ಮತ್ತು ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಕಳೆದ ಐದು ವರ್ಷಗಳಲ್ಲಿ ಹಲವು ವಿದೇಶಿ ಪ್ರವಾಸಗಳನ್ನ ಮಾಡಿದ್ದಾರೆ. ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಯಾವುದೇ ವಿದೇಶ ಪ್ರವಾಸಕ್ಕೂ ಜಮೀರ್ ಅಹಮದ್ ಖಾನ್ ಅನುಮತಿಯನ್ನು ಪಡೆದುಕೊಂಡಿಲ್ಲ.

ಜಮೀರ್ ಅಹಮದ್ ಖಾನ್ ಅವರು ಕೇವಲ ಶಾಸಕರಲ್ಲ. 2018 ಜೂನ್ 6 ರಿಂದ 2019 ಜುಲೈ 9 ರ ವರೆಗೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದಾರೆ.

ಈ ಮೂಲಕ ನಾನು ನಿಮ್ಮ ಗಮನಕ್ಕೆ ತರುವುದೇನೆಂದರೆ, ಜಮೀರ್ ಅಹಮದ್ ಖಾನ್ ಅವರು 2019ರ ಜೂನ್ 8 ರಿಂದ 10 ರ ವರೆಗೆ ವಿದೇಶ ಪ್ರವಾಸ ಮಾಡಿರುತ್ತಾರೆ. ಯಾಕೆ ಅವರು ಈ ಪ್ರವಾಸದ ವಿಚಾರವನ್ನ ಸಂಬಂಧಿತ ಅಧಿಕಾರಿಗಳಿಂದ ಮುಚ್ಚಿಟ್ಟಿದ್ದಾರೆ ಎನ್ನುವುದಕ್ಕೆ ಸ್ಪಷ್ಟತೆಯಿಲ್ಲ. ನಿಮಗೆ ಗೊತ್ತಿರಬಹುದು ಇತ್ತೀಚೆಗೆ ಜಮೀರ್ ಅಹಮದ್ ಅವರ ಹೆಸರು ಕನ್ನಡ ಮಾಧ್ಯಮಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ.

India China

ಇತ್ತೀಚಿನ ಅಂತಾರಾಷ್ಟ್ರೀಯ ತನಿಖಾ ಏಜೆನ್ಸಿಯ ವರದಿಯೊಂದು ಬಹಿರಂಗಪಡಿಸಿರುವಂತೆ, ಚೀನಾ 10 ಸಾವಿರಕ್ಕೂ ಹೆಚ್ಚು ಭಾರತೀಯರ ಮೇಲೆ ಗೂಡಾಚಾರಿಕೆ ಮಾಡುತ್ತಿದೆ. ಇಂಥಾ ಸಂದರ್ಭದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ ಕಾನೂನು ಪಾಲನೆ ಮಾಡಬೇಕಾಗಿದ್ದ ಜಮೀರ್ ಅಹಮದ್ ಖಾನ್ ಅವರು ತಮ್ಮ ವಿದೇಶಿ ಪ್ರವಾಸಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ. ಇದು ಅವರ ಉದ್ದೇಶಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ನಾಗರೀಕನಾಗಿ ನಾನು ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜಮೀರ್ ಅಹಮದ್ ಖಾನ್ ಅವರ ಅನುಮಾನಾಸ್ಪದ ನಡೆಯ ವಿರುದ್ಧ ತನಿಖೆ ಮಾಡಬೇಕೆಂದು ಮನವಿಮಾಡಿಕೊಳ್ಳುತ್ತೇನೆ.

ಈ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ನಾನು ನಿಮ್ಮ ಗಮನಕ್ಕೆಂದು ಲಗತ್ತಿಸಿರುತ್ತೇನೆ.

TAGGED:foreign tripsPrashanth SambargiSandalwood DrugsYediyurappazameer ahmedಜಮೀರ್ ಅಹಮದ್ಡ್ರಗ್ಸ್ಪ್ರಶಾಂತ್ ಸಂಬರಗಿಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
6 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
7 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
8 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
9 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
9 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?