ಜಮೀರ್ ಅಹ್ಮದ್ ಪೊಲಿಟಿಕಲ್ ಟ್ರಯಲ್- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿ

Public TV
1 Min Read
Saleem Ahmed 1

ಉಡುಪಿ: ಸಾಂಕ್ರಾಮಿಕ ರೋಗ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡಿಜೆಹಳ್ಳಿ ಮತ್ತು ಡ್ರಗ್ಸ್ ಜಾಲದ ಕಾರ್ಯಾಚರಣೆ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ದೂರಿದರು.

ಡ್ರಗ್ಸ್ ಬೆಳವಣಿಗೆಯನ್ನು ಚರ್ಚೆಗೆ ತಂದು ಉಳಿದೆಲ್ಲಾ ವೈಫಲ್ಯ ಮರೆ ಮಾಚಿಸುವ ಯತ್ನ ನಡೆಯುತ್ತಿದೆ. ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ. ಸಿಟಿ ರವಿಗೆ ಯಾರಿಂದ ಒತ್ತಡ ಇದೆ ಹೇಳಲಿ. ನೀವು ಸಿಎಂ ಅಲ್ಲ, ಗೃಹ ಸಚಿವ ಕೂಡಾ ಅಲ್ಲ. ಕಾಂಗ್ರೆಸ್ ಒತ್ತಡ ಯಾವತ್ತೂ ಹೇರಲ್ಲ. ಕೇಂದ್ರ ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ ತನಿಖೆ ಮಾಡಿ. ತನಿಖೆಗೆ ಬೆಂಬಲ ಕೊಡುತ್ತೇವೆ. ಕೇವಲ ಹೇಳಿಕೆಯಿಂದ ವ್ಯವಸ್ಥೆ ಸರಿ ಮಾಡಲು ಸಾಧ್ಯವಿಲ್ಲ. ರಾಗಿಣಿ ಬಿಜೆಪಿಯ ಕಾರ್ಯಕರ್ತೆ. ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

Saleem Ahmed

ನೆರೆ ಹಾವಳಿ ಪರಿಹಾರ ಬಂದಿಲ್ಲ. ನಮ್ಮ ರಾಜ್ಯದ ಎಂಪಿಗಳು ಇಲ್ಲಿ ಹುಲಿಯಂತೆ ವರ್ತಿಸುತ್ತೀರಿ. ಮೋದಿ ಮುಂದೆ ಬೆಕ್ಕಿನ ನಿಲ್ಲುತ್ತೀರಿ. ಮೊದಲು ಮಾತನಾಡಲು ಕಲಿಯಿರಿ. ರಾಜ್ಯದ ಹಿತಾಸಕ್ತಿ ಕಾಪಾಡಿ ಪಲಾಯನ ವಾದ ಮಾಡುದರಲ್ಲಿ ಕಾಲ ಕಳೆಯಬೇಡಿ. ರಾಜ್ಯ ಸರ್ಕಾರದ ಹಗರಣ, ವೈಫಲ್ಯ ವಿಚಾರದಲ್ಲಿ ಜೆಡಿಎಸ್ ಮೌನದ ಬಗ್ಗೆ ಅವರನ್ನೇ ಕೇಳಿ. ಯಡಿಯೂರಪ್ಪ ಕುಮಾರಸ್ವಾಮಿ ಭೇಟಿ ಬಗ್ಗೆ ಅವರೇ ಬಹಿರಂಗಪಡಿಸಲಿ ಎಂದರು.

CT RAVI ZAMEER

ಕಾಂಗ್ರೆಸ್ ಸರ್ಜರಿ ನ್ಯಾಚುರಲ್ ಪ್ರಾಸೆಸ್. ಬದಲಾವಣೆ ಆಗುತ್ತಿರಬೇಕು. ಹೊಸಬರ ಆಗಮನ ಆಗಬೇಕು. ಹಿರಿಯರ ಮಾರ್ಗದರ್ಶನ ಜೊತೆಗಿರಬೇಕು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಮ್ಮ ಶಾಸಕ. ಅವರ ತಂದೆ ಕೂಡಾ ಕಾಂಗ್ರೆಸ್ ಮುಖಂಡ. ಅವರಿಗೆ ಕಾಂಗ್ರೆಸ್ ಮುಂದೆನೂ ಸಪೋರ್ಟ್ ಮಾಡುತ್ತದೆ. ಅವರು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದರು.

ZAMEER AHMED

ಜಮೀರ್ ವಿಚಾರದಲ್ಲಿ ಮಾಧ್ಯಮಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಮೀಡಿಯಾ ಟ್ರಯಲ್ ಸರಿಯಲ್ಲ. ಡ್ರಗ್ಸ್ ಪೊಲಿಟಿಕಲ್ ಟ್ರಯಲ್ ಆಗಬಾರದು. ಬಿಜೆಪಿ ನಾಯಕರು ಪೊಲೀಸರ ತರ, ತನಿಖಾಧಿಕಾರಿಗಳ ತರ ವರ್ತಿಸುತ್ತಾರೆ. ಸ್ಟೇಟ್ ಮೆಂಟ್ ಸಾಕು, ಕೆಲಸ ಮಾಡಿ ಎಂದು ಸಲೀಂ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *