ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೈನಿಕರು

Public TV
1 Min Read
Indian army

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಹೊರ ವಲಯದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.

ಭಯೋತ್ಪಾದಕರು ಅಡಗಿಕೊಂಡಿರುವ ಕುರಿತು ಇಂದು ಬೆಳಗ್ಗೆ ಖಚಿತ ಮಾಹಿತಿ ಲಭ್ಯವಾಯಿತು. ಈ ಹಿನ್ನೆಲೆ ಭದ್ರತಾ ಸಿಬ್ಬಂದಿ ನಗರದ ಹೊರ ವಲಯದ ರಣಬಿರ್‍ಘರ್ ಪ್ರದೇಶದಲ್ಲಿ ಸುತ್ತುವರಿದು ಪರಿಶೀಲನಾ ಕಾರ್ಯಾಚರಣೆ ನಡೆರಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಪರಿಶೀಲನಾ ಕಾರ್ಯಾಚರಣೆ ನಡೆಸುವ ವೇಳೆ ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ಇದಕ್ಕೆ ಪ್ರತಿಯಾಗಿ ಸೈನಿಕರು ಸಹ ಗುಂಡು ಹಾರಿಸಿದರು. ಈ ವೇಳೆ ಗುಂಡಿನ ಚಕಮಕಿ ನಡೆಯಿತು ಎಂದು ತಿಳಿಸಿದ್ದಾರೆ.

ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ. ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದು ಸಹ ತಿಳಿದಿಲ್ಲ. ಹುಡುಕುವ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *