ಚಿಕ್ಕಬಳ್ಳಾಪುರ: ಜಕ್ಕಲಮಡುಗು ಜಲಾಶಯಕ್ಕೆ ಹಾರಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಗೌರಿಬಿದನೂರು ತಾಲೂಕಿನ ಬೊಮ್ಮಸಂದ್ರ ಗ್ರಾಮದ ಶಿಕ್ಷಕ ಶ್ರೀನಾಥ್ ರೆಡ್ಡಿಗೆ ಸೇರಿದ ಬೈಕ್ ಹಾಗೂ ಮೊಬೈಲ್ ಜಲಾಶಯದ ಬಳಿ ಪತ್ತೆಯಾಗಿದೆ. ಜಲಾಶಯದ ನೀರಿನಲ್ಲಿ ಶ್ರೀನಾಥ್ ರೆಡ್ಡಿ ಚಪ್ಪಲಿಗಳು ಸಹ ಪತ್ತೆಯಾಗಿವೆ. ಹೀಗಾಗಿ ಶಿಕ್ಷಕ ಶ್ರೀನಾಥ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅನುಮಾನ ವ್ಯಕ್ತವಾಗಿದ್ದು ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ಆಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದು, ನಂದಿಗಿರಿಧಾಮ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ತಿಳಿದು ಬಂದಿಲ್ಲ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತೆ.