Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಎಸ್‍ಟಿ ದರ ಕಡಿತದ ಬೊಮ್ಮಾಯಿ ಮನವಿಗೆ ನಿರ್ಮಲಾ ಸೀತಾರಾಮನ್ ಸಮ್ಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಎಸ್‍ಟಿ ದರ ಕಡಿತದ ಬೊಮ್ಮಾಯಿ ಮನವಿಗೆ ನಿರ್ಮಲಾ ಸೀತಾರಾಮನ್ ಸಮ್ಮತಿ

Bengaluru City

ಜಿಎಸ್‍ಟಿ ದರ ಕಡಿತದ ಬೊಮ್ಮಾಯಿ ಮನವಿಗೆ ನಿರ್ಮಲಾ ಸೀತಾರಾಮನ್ ಸಮ್ಮತಿ

Public TV
Last updated: June 12, 2021 7:50 pm
Public TV
Share
2 Min Read
basavaraj bommai gst meeting
SHARE

– ಕೊರೊನಾ ಟೆಸ್ಟಿಂಗ್ ಕಿಟ್, ರೆಮ್‍ಡಿಸಿವಿರ್, ಆಮ್ಲಜನಕ ಉತ್ಪಾದನಾ ಉಪಕರಣಗಳ ಮೇಲಿನ ಜಿಎಸ್‍ಟಿ ಕಡಿತ

– 44ನೇ ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಶಿಫಾರಸು

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ 44ನೇ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಪರಿಷತ್ತಿನ ಮಹತ್ವದ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಗ್ರೂಪ್ ಆಫ್ ಮಿನಿಸ್ಟರ್ಸ್ ಸಲ್ಲಿಸಿದ ಕೋವಿಡ್ ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್‍ಟಿ ದರಗಳಲ್ಲಿ ರಿಯಾಯಿತಿ, ವಿನಾಯಿತಿಗೆ ಸಂಬಂಧಿಸಿದ ವರದಿಯ ಕುರಿತು ಚರ್ಚೆ ನಡೆಯಿತು. ಈ ವೇಳೆ ರಾಜ್ಯದ ಜಿಎಸ್‍ಟಿ ಪ್ರತಿನಿಧಿ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜಿಎಸ್‍ಟಿ ದರ ಕಡಿತಕ್ಕೆ ಮನವಿ ಮಾಡಿದ್ದು, ಇದಕ್ಕೆ ನಿರ್ಮಲಾ ಸೀತಾರಾಮನ್ ಅವರು ಸಭೆಯಲ್ಲಿಯೇ ಅನುಮೋದನೆ ನೀಡಿದರು.

Contents
  • – ಕೊರೊನಾ ಟೆಸ್ಟಿಂಗ್ ಕಿಟ್, ರೆಮ್‍ಡಿಸಿವಿರ್, ಆಮ್ಲಜನಕ ಉತ್ಪಾದನಾ ಉಪಕರಣಗಳ ಮೇಲಿನ ಜಿಎಸ್‍ಟಿ ಕಡಿತ
  • – 44ನೇ ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಶಿಫಾರಸು

Nirmala

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದ ರಾಜ್ಯದ ಜಿಎಸ್‍ಟಿ ಪ್ರತಿನಿಧಿ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗ್ರೂಪ್ ಆಫ್ ಮಿನಿಸ್ಟರ್ಸ್ ಶಿಫಾರಸುಗಳನ್ನು ಸ್ವಾಗತಿಸಿದರು. ಅದರ ಜೊತೆಗೆ ಇನ್ನಷ್ಟು ತೆರಿಗೆ ಕಡಿತಕ್ಕಾಗಿ ಕೇಂದ್ರ ಹಣಕಾಸು ಸಚಿವರನ್ನು ಕೋರಿದರು.

ತಾಪಮಾನ ಪರೀಕ್ಷಾ ಉಪಕರಣ, ಶವಾಗಾರಗಳಿಗಾಗಿ ಬಳಕೆಯಾಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೆಸ್ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.18 ರಿಂದ 5ಕ್ಕೆ ಮತ್ತು ಅಂಬುಲೆನ್ಸ್ ವಾಹನಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.12ಕ್ಕೆ ಇಳಿಸುವಂತೆ ಮನವಿ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರ ಈ ಮನವಿಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯಲ್ಲಿಯೇ ಅನುಮೋದನೆ ನೀಡಿದರು.

GST revenue falls 12 in August at ₹86449 cr

ಈ ರಿಯಾಯಿತಿಗಳನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲು ಅವರು ಮಾಡಿಕೊಂಡ ಮನವಿಗೂ ಜಿಎಸ್‍ಟಿ ಮಂಡಳಿ ಒಪ್ಪಿಗೆ ನೀಡಿತು. ಇದಕ್ಕಾಗಿ ಸಚಿವ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸಿದರು.

2022ರ ನಂತರದ ಜಿಎಸ್‍ಟಿ ಪರಿಹಾರಕ್ಕೆ ಸಂಬಂಧಿಸಿದ ವಿಷಯದ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಬೊಮ್ಮಾಯಿ ಅವರು ಕೋರಿದರು. ಇದಕ್ಕೆ ಸ್ಪಂದಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೀಘ್ರದಲ್ಲಿಯೇ ಸಭೆ ಕರೆಯಲು ಒಪ್ಪಿಕೊಂಡರು. ಅದರಂತೆ ಇಂದು ಸಭೆ ಕರೆದು ಚರ್ಚೆ ನಡೆಸಿದ್ದಾರೆ.

remdesivir

ಅಲ್ಲದೆ 2021- 22ನೇ ಸಾಲಿಗೆ 18,109 ಕೋಟಿ ರೂಪಾಯಿಗಳ ಜಿಎಸ್‍ಟಿ ಪರಿಹಾರ ಸಾಲಕ್ಕೆ ಅನುಮೋದನೆ ನೀಡಿದ್ದಕ್ಕೆ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು. ಇದು ಕೋವಿಡ್ ವಿರುದ್ಧದ ಸಮರದಲ್ಲಿ ಸಹಕಾರಿಯಾಗುತ್ತದೆ ಎಂದರು.

ಇದೇ ವೇಳೆ ಹಲವು ಔಷಧ ಸೇರಿದಂತೆ ವೈದ್ಯಕೀಯ ಪರಿಕರಗಳ ಮೇಲಿನ ಜಿಎಸ್‍ಟಿ ದರವನ್ನು ಕಡಿತಗೊಳಿಸಲು ನಿರ್ಧರಿಸಲಾಯಿತು. ಗ್ರೂಪ್ ಆಫ್ ಮಿನಿಸ್ಟರ್ಸ್ ಕೆಲವು ಔಷಧಗಳ ಮೇಲಿನ ಜಿಎಸ್ ಟಿಯನ್ನು ಶೇ.5ರಿಂದ ಶೂನ್ಯಕ್ಕೆ, ರೆಮ್‍ಡಿಸಿವಿರ್ ಮೇಲಿನ ಜಿಎಸ್‍ಟಿಯನ್ನು ಶೇ.12ರಿಂದ ಶೇ.5ಕ್ಕೆ, ಆಮ್ಲಜನಕ ಉತ್ಪಾದನಾ ಉಪಕರಣ ಹಾಗೂ ಕೋವಿಡ್ ಪರೀಕ್ಷಾ ಕೀಟ್‍ಗಳ ಮೇಲಿನ ಶೇ.12ರ ಜಿಎಸ್‍ಟಿ ದರವನ್ನು ಶೇ.5ಕ್ಕೆ ಕಡಿಮೆ ಮಾಡುವುದಕ್ಕೆ ಶಿಫಾರಸ್ಸು ಮಾಡಿದೆ. ತಾಪಮಾನ ಪರೀಕ್ಷಾ ಉಪಕರಣ ಹಾಗೂ ಶವಾಗಾರ ಗಳಿಗಾಗಿ ಬಳಕೆ ಆಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೇಸ್ ಗಳಿಗೆ ಸಂಬಂಧಿಸಿದಂತೆ ಜಿಎಸ್‍ಟಿ ಯನ್ನು ಶೇ.18 ರಿಂದ 12ಕ್ಕೆ ಕಡಿತಗೊಳಿಸಲು ಶಿಫಾರಸು ಮಾಡಿದೆ. ಅಂಬುಲೆನ್ಸ್ ಮೇಲೆ ಯಾವುದೇ ಕಡಿತವನ್ನು ಶಿಫಾರಸು ಮಾಡಿಲ್ಲ. ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್.ಶ್ರೀಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

Corona 1 1 medium

TAGGED:Basavaraj BommaiCorona VirusgstNirmala SitharamanPublic TVಕೊರೊನಾ ಪರಿಕರಗಳುಕೊರೊನಾ ವೈರಸ್ಜಿಎಸ್‍ಟಿನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
11 minutes ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
34 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
1 hour ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
3 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?