Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಲ್ಲಾ, ತಾಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಲ್ಲಾ, ತಾಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್

Bengaluru City

ಜಿಲ್ಲಾ, ತಾಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್

Public TV
Last updated: July 18, 2021 8:31 pm
Public TV
Share
3 Min Read
R ASHOK 2
SHARE

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇ ಗೆಲ್ಲಬೇಕಿದೆ. ಇದಕ್ಕಾಗಿ ಯುವ ಮೋರ್ಚಾವು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ರಾಜ್ಯದ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಕರೆನೀಡಿದ್ದಾರೆ.

E6jyCDVUUAAqdMQ

ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಆರ್. ಅಶೋಕ್ ಅವರು, ಚುನಾವಣೆಯ ಪರೀಕ್ಷೆಯಲ್ಲಿ ಗೆದ್ದು ನಿಮ್ಮ ನಾಯಕತ್ವವನ್ನು ದೃಢಪಡಿಸಿಕೊಳ್ಳಿ. ಬಿಜೆಪಿಯನ್ನು ಈಗ ಪ್ರಪಂಚವೇ ದೊಡ್ಡ ಪಕ್ಷವಾಗಿ ಗುರುತಿಸುತ್ತಿದೆ. ಅದನ್ನು ನಾವು ಉಳಿಸಿಕೊಳ್ಳಬೇಕು. ಪ್ರಧಾನಿಯವರು 18 ರಿಂದ 20 ಗಂಟೆ ಕೆಲಸ ಮಾಡುತ್ತಾರೆ. ಕೋವಿಡ್ ನಿಂದ ಹೊರಬರಲು ನರೇಂದ್ರ ಮೋದಿ ಅವರ ಶ್ರಮವೂ ಕಾರಣವಾಗುತ್ತಿದೆ. ಅಯೋಧ್ಯೆ, ಕಾಶ್ಮೀರದ ವಿಚಾರ, ಭಯೋತ್ಪಾದನೆ ಮೊದಲಾದ ವಿಚಾರಗಳಲ್ಲಿ ದಿಟ್ಟ ನಿರ್ಧಾರವನ್ನು ಪ್ರಧಾನಿಯವರು ಕೈಗೊಂಡಿದ್ದಾರೆ. ಅಂಥ ಚಮತ್ಕಾರವನ್ನು ಬಿಜೆಪಿ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯವರೇ 56 ಇಂಚಿನ ಎದೆ ಇದ್ದರೆ ಸಾಲದು: ಸಿದ್ದರಾಮಯ್ಯ

ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಆಡ್ವಾಣಿ ಅವರ ದೂರದೃಷ್ಟಿಯ ಯೋಜನೆಗಳಿಂದ ಪಕ್ಷ ಬಲಿಷ್ಠವಾಗಿದೆ. ನಮ್ಮ ಸರ್ಕಾರಗಳ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಎಲ್ಲಾ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜೊತೆಗೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಬಿಜೆಪಿ ಈ ದೇಶಕ್ಕೆ ಅನಿವಾರ್ಯ. ಮತಬ್ಯಾಂಕ್ ಗಾಗಿ ದೇಶವನ್ನು ಬಲಿ ಕೊಡುವ ಪರಿಸ್ಥಿತಿ ಬರದಂತೆ ಕೆಲಸ ಮಾಡಬೇಕು. ನಾನೂ ಇಲ್ಲಿಂದಲೇ ಬಂದವನು. ಅದಕ್ಕೇ ನನಗೆ ಯುವ ಮೋರ್ಚಾ ವೇದಿಕೆ ಅತ್ಯಂತ ಇಷ್ಟವಾದುದು. ಕಾವೇರಿ ನದಿಯ ಮಾದರಿಯಲ್ಲಿ ಬಿಜೆಪಿ ಹರಿಯುವ ನದಿ. ಆ ಹರಿಯುವ ನದಿಗೆ ಯುವ ಮೋರ್ಚಾ ಒಂದು ಕವಲಾಗಿ ಸೇರುತ್ತದೆ. ದೊಡ್ಡ ನದಿ ಸೇರುವ ದೊಡ್ಡ ತೊರೆ ಇದಾಗಿದೆ. ಯು ಮೋರ್ಚಾ ಸಂಘಟನೆಯಿಂದ ಬಂದವರಿಗೆ ಹೆಚ್ಚಿನ ಅವಕಾಶಗಳು ಲಭಿಸುತ್ತದೆ. ನಾನು ಕೂಡ ತುರ್ತು ಪರಿಸ್ಥಿತಿ ಜೈಲಿಗೆ ಹೋಗಿ ಬಂದ ಬಳಿಕ ಒಂದು ವರ್ಷ ಅಜ್ಞಾತವಾಸದಲ್ಲಿದ್ದೆ. ನಾನು ಪೆಟ್ರೋಲ್ ಬಂಕ್ ನಲ್ಲಿ ಸ್ಕೂಟರ್ ಗೆ ಪೆಟ್ರೋಲ್ ಹಾಕಿಸ್ತಾ ಇದ್ದೆ. ಅಲ್ಲಿಂದ ಕರೆದುಕೊಂಡು ಹೋಗಿ ದೊಡ್ಡಬಳ್ಳಾಪುರದಲ್ಲಿ ಯುವ ಮೋರ್ಚಾ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿಯಾಗಿ ಮಾಡಿದರು. ಅಲ್ಲಿಂದ ಬೆಳೆದು ಈಗ ಸಚಿವನಾಗಿ ನಿಮ್ಮೆದುರು ನಿಂತಿದ್ದೇನೆ ಎಂದು ವಿವರಿಸಿದರು.

R ASHOK

ಯುವ ಮೋರ್ಚಾ ಛಾಪು ಬೆಳೆಸಲು ಮುಂದಾಗಿ. ಸಿಂಹಕ್ಕೆ ಯಾರೂ ಪಟ್ಟಾಭಿಷೇಕ ಮಾಡುವುದಿಲ್ಲ. ಹೋರಾಟದ ಮೂಲಕ ಗುರುತಿಸಿಕೊಂಡರೆ ಯುವ ಮೋರ್ಚಾಗೆ ಶಕ್ತಿ ಬರುತ್ತದೆ. ಯುವ ಮೋರ್ಚಾಗೆ ಮಾರ್ಗದರ್ಶನ ಮಾಡುವ ನಾಯಕರಿಗೆ ಕೊರತೆ ಇಲ್ಲ. ನಿಮ್ಮ ವೈಯಕ್ತಿಕ ನಾಯಕತ್ವವನ್ನು ಬೆಳೆಸುವ ಕೆಲಸವನ್ನು ನೀವೇ ಮಾಡಬೇಕು ಎಂದು ನುಡಿದರು.

ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಂಸದರೂ ಆದ ತೇಜಸ್ವಿ ಸೂರ್ಯ ಅವರು ಮಾತನಾಡಿ, ಯುವ ಮೋರ್ಚಾವು ನಿರಂತರವಾಗಿ ಅನೇಕ ನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನು ಸ್ಫೂರ್ತಿಯ ವಿಷಯವನ್ನಾಗಿ ಯುವ ಮೋರ್ಚಾದ ಪದಾಧಿಕಾರಿಗಳು ಮಾಡಿಕೊಂಡು ಬೆಳೆಯಬೇಕು. ಯುವ ಮೋರ್ಚಾವು ಮಾದರಿ ಸಂಘಟನೆ. ಅದು ಎಲ್ಲ ರೀತಿಯ ಯುವಕರನ್ನು ಪ್ರತಿನಿಧಿಸುವ ಸಂಘಟನೆಯಾಗಿ ಬೆಳೆಯಬೇಕು. ಯುವ ಮೋರ್ಚಾವು ರಾಜಕೀಯದಲ್ಲಿ ಹೊಸ ಪ್ರಯತ್ನ ಅಳವಡಿಸಿಕೊಳ್ಳುವಂತಾಗಬೇಕು. ಮೂಲ ತತ್ವ, ಸಿದ್ಧಾಂತಗಳಲ್ಲಿ ಸ್ಥಿರತೆ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಬದಲಾವಣೆ ನಮ್ಮದಾಗಿರಬೇಕು ಎಂದು ಅಭಿಪ್ರಾಯಪಟ್ಟರು.

R ASHOK 4

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟರು. ಕೊರೊನಾ ಎರಡು ಅಲೆಗಳು ಬಂದು ಹೋಗಿವೆ. ಮೂರನೇ ಅಲೆ ಬರುವಂತಿದೆ. ಆದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ. ರಾಜ್ಯದ ಯುವ ಕಾಂಗ್ರೆಸ್‍ನಲ್ಲೂ ಸಮಸ್ಯೆ ಮುಂದುವರಿದಿದೆ. ಗೆದ್ದವರು ಒಬ್ಬರು, ಇನ್ನೊಬ್ಬರಿಗೆ ಅಧ್ಯಕ್ಷತೆ, ಅದರಲ್ಲೂ ಗುಂಪುಗಾರಿಕೆ, ಹೊಡೆದಾಟ ಮುಂದುವರಿದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಬಿಎಸ್‍ವೈ ಬದಲಾವಣೆ ವಿಚಾರ – ಒಂದು ವಾರ ಕಾಯಿರಿ: ಡಿಕೆಶಿ

ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ನಮ್ಮದೇ ಸರ್ಕಾರವಿದೆ. ಯುವ ಮೋರ್ಚಾವು ಸಮಾಜದ ನೊಂದವರ ತೊಂದರೆಗೆ ಒಳಗಾದವರಿಗೆ ನೇರವಾಗಿ ಹೋರಾಟಕ್ಕೂ ಸೈ, ಸೇವೆಗೂ ಸೈ ಎಂದು ಸಾಬೀತುಪಡಿಸಿದೆ. ಯುವ ಮೋರ್ಚಾ ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಮತ್ತು ಆಹ್ವಾನಿತ ಪದಾಧಿಕಾರಿಗಳು ಭಾಗವಹಿಸಿದ್ದರು.

TAGGED:bjpcongressnarendra modiPublic TVr ashokTejasvi SuryaYuva Morchaಆರ್ ಅಶೋಕ್ಕಾಂಗ್ರೆಸ್ತೇಜಸ್ವಿ ಸೂರ್ಯನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಯುವ ಮೋರ್ಚಾ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Fatal attack on Congress leader Gopalakrishna naik in Ankola
Crime

ಅಂಕೋಲ | ಕಾಂಗ್ರೆಸ್‌ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ – ಹತ್ಯೆಗೆ ಯತ್ನ

Public TV
By Public TV
9 minutes ago
RSS Karnataka State Open University
Latest

ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ

Public TV
By Public TV
19 minutes ago
lpg cylinders
Bengaluru City

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ಕೇಂದ್ರ ಸ್ಪಷ್ಟನೆ

Public TV
By Public TV
22 minutes ago
Bidar petrol Bunk
Bidar

ಯಾರು ಗಾಬರಿಯಾಗೋದು ಬೇಡ, ಎಂದಿನಂತೆ ಪೆಟ್ರೋಲ್, ಡಿಸೇಲ್ ಸ್ಟಾಕ್ ಇದೆ – ಬಂಕ್ ಮಾಲೀಕರು ಸ್ಪಷ್ಟನೆ

Public TV
By Public TV
52 minutes ago
North Sikkim Landslide
Latest

ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಚುಂಗ್‌ಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

Public TV
By Public TV
53 minutes ago
Congress Party Office
Latest

ಅಕ್ಬರ್‌ ರಸ್ತೆಯಲ್ಲಿರೋ ಕಚೇರಿ ತೆರವುಗೊಳಿಸಿ: ಕಾಂಗ್ರೆಸ್‌ಗೆ ನೋಟಿಸ್‌‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?