ಕಾರವಾರ: ಜಿಲ್ಲಾ ಪಂಚಾಯತ್ ಅಭಿಲೇಖಾಲಯ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಅಮೂಲ್ಯ ದಾಖಲೆಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
- Advertisement 2
ಕಾರವಾರದ ಎಂ.ಜಿ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ್ ಅಭಿಲೇಖಾಲಯದಲ್ಲಿ ಇಂದು ಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದ್ದು, ಕಟ್ಟಡದ ಕೆಳಭಾಗದಲ್ಲಿ ಇದ್ದ ಪೀಠೋಪಕರಣಗಳು ಮತ್ತು ಕಚೇರಿಯ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಭಾರೀ ಗಾತ್ರದ ನಾಗರಹಾವಿನ ರಕ್ಷಣೆ- ಐತಾಳರ ಕಾರ್ಯಾಚರಣೆ ಬಹಳ ರೋಚಕ
- Advertisement 3
- Advertisement 4
ಕೆಲಭಾಗದ ಎರಡು ಅಂತಸ್ಥಿನಲ್ಲಿ ಬೆಂಕಿ ಹೊತ್ತಿಕೊಂಡಂತೆ, ಕೆಲ ಸಮಯದಲ್ಲಿಯೇ ಮೂರನೇ ಅಂತಸ್ಥಿಗು ಬೆಂಕಿ ಆವರಿಸಿದ್ದು ಅಲ್ಪ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ ಅಂದಾಜು 2 ಲಕ್ಷ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಪ್ರಿಯಾಂಗ ರವರು ಮಾಹಿತಿ ನೀಡಿದ್ದಾರೆ.