Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಲ್ಲೆಯಲ್ಲಿ ರೈಲ್ವೆ, ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಕ್ರಮ: ಬಿ.ವೈ ರಾಘವೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಿಲ್ಲೆಯಲ್ಲಿ ರೈಲ್ವೆ, ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಕ್ರಮ: ಬಿ.ವೈ ರಾಘವೇಂದ್ರ

Districts

ಜಿಲ್ಲೆಯಲ್ಲಿ ರೈಲ್ವೆ, ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಕ್ರಮ: ಬಿ.ವೈ ರಾಘವೇಂದ್ರ

Public TV
Last updated: August 26, 2020 6:41 pm
Public TV
Share
3 Min Read
SMG 17
SHARE

ಶಿವಮೊಗ್ಗ: ರೈಲ್ವೇ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ರಿಯವಾಗಿದ್ದು, ಮುಂಬರುವ ದಿನಗಳಲ್ಲಿ ತಜ್ಞರ ಸಲಹೆ ಪಡೆದು ಜಿಲ್ಲೆಯನ್ನು ಪ್ರವಾಸಿಗರ ಆಕರ್ಷಕ ತಾಣವನ್ನಾಗಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈಲ್ವೆ ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿಗೆ ಈಗಾಗಲೇ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಜಿಲ್ಲೆಯ ಆಯ್ದ ನಾಲ್ಕು ಸ್ಥಳಗಳಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ರಾಜ್ಯದಲ್ಲಿ ಆಯ್ದ 5 ಸ್ಥಳಗಳಲ್ಲಿ ರೈಲ್ವೆ ಕೋಚಿಂಗ್ ಮತ್ತು ಟರ್ಮಿನಲ್ ಸೆಂಟರ್ ಗಳಿದ್ದು, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿಯೂ ಟರ್ಮಿನಲ್ ನಿರ್ಮಾಣಗೊಳ್ಳಲಿದೆ. ಅದಕ್ಕಾಗಿ 75 ಕೋಟಿ ಅನುದಾನ ಮಂಜೂರಾಗಿದೆ. ಈ ಸಂಬಂಧ ಭೂಸ್ವಾದೀನ ಪ್ರಕ್ರಿಯೆ ಇನ್ನೂ ಒಂದು ವಾರದೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

by raghavendra

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಸರ್ವೇ ಕಾರ್ಯವು 2 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಶಿಕಾರಿಪುರ ಮತ್ತು ಶಿವಮೊಗ್ಗ ಹಾಗೂ ಎರಡನೇ ಹಂತದಲ್ಲಿ ಶಿಕಾರಿಪುರ ಮತ್ತು ರಾಣೆಬೆನ್ನೂರು ಮಾರ್ಗದ ಸರ್ವೇ ಕಾರ್ಯ ನಡೆಯಲಿದೆ. ಈಗಾಗಲೇ ಮೊದಲ ಹಂತದಲ್ಲಿ ಬರುವ 14 ಹಳ್ಳಿಗಳಲ್ಲಿ ಕಂದಾಯ ಮತ್ತು ರೈಲ್ವೆ ಇಲಾಖೆಗಳ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. 8 ಗ್ರಾಮಗಳಿಗೆ ಅಂತಿಮ ಹಂತದ ನೋಟಿಫಿಕೇಶನ್ ಕೂಡ ಆಗಿದೆ. ಮುಂದಿನ ಒಂದು ತಿಂಗಳಲ್ಲಿ ಭೂ ಪರಿಹಾರ ನೀಡಿ ಈ ಭಾಗದ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅನೇಕ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಗ್ಯವಾಗಿವೆ. ಅವುಗಳಲ್ಲಿ ಪ್ರಮುಖವಾದ ಕೆಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು 150 ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾಗೋಪುರ, ಕಾರಂಜಿ ನಿರ್ಮಾಣ, ವಿಶ್ರಾಂತಿ ಗೃಹ, ಉದ್ಯಾನವನ, ಮಳೆಗಾಲವನ್ನು ಹೊರತುಪಡಿಸಿ ವರ್ಷ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಜಲಪಾತಕ್ಕೆ ನೀರು ಹರಿಸುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸರ್ಕಾರವು ಮುಂದಿನ ಬಜೆಟ್‍ನಲ್ಲಿ ಘೋಷಿಸುವ ನಿರೀಕ್ಷೆ ಇದೆ ಎಂದರು.

BY Raghavendra 1

25 ಕೋಟಿ ರೂ.ಗಳ ವೆಚ್ಚದಲ್ಲಿ ಉಡುತಡಿಯ ಅಕ್ಕಮಹಾದೇವಿ ಜನ್ಮಸ್ಥಳವನ್ನು ದೆಹಲಿಯ ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದು ಅಭಿವೃದ್ದಿಯ ನಂತರ 12 ನೇ ಶತಮಾನದ ಅಕ್ಕನ ಇತಿಹಾಸ ಸಾರುವಂತೆ ಸೃಷ್ಠಿಗೊಳ್ಳಲಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆ ಬಿಡಾರವನ್ನು ಸುಮಾರು 25 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ 5 ಹೆದ್ದಾರಿಗಳಿವೆ. ನಗರದಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಇವುಗಳನ್ನು ಒಳಗೊಂಡು 34 ಕಿ.ಮೀ. ಉದ್ದದ ವರ್ತುಲ ರಸ್ತೆ ನಿರ್ಮಾಣಗೊಳ್ಳಲಿದೆ. ಈ ಪೈಕಿ 15 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಸೇರಿದೆ. 15 ಕಿ.ಮೀ. ಶಿವಮೊಗ್ಗ-ತುಮಕೂರು ಹೆದ್ದಾರಿ ಸೇರಿದೆ. ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 560 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ. ಈ ಕಾಮಗಾರಿಗೆ ರಾಜ್ಯದಿಂದ 100 ಕೋಟಿ ರೂ. ಹಾಗೂ ಕೇಂದ್ರದಿಂದ 430 ಕೋಟಿ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ಉಳಿದಂತೆ ವಿಮಾನ ನಿಲ್ದಾಣ ಕಾಮಗಾರಿಗೆ 2 ನೇ ಹಂತದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಂಕಿಪಾರ್ಕ್ ಸ್ಥಾಪನೆಗೆ ಸ್ಥಳ ನಿಗದಿಪಡಿಸಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಜ್ಞರ ಅಭಿಪ್ರಾಯ ಪಡೆದು, ಯಾರಿಗೂ ತೊಂದರೆಯಾಗದಂತೆ ಮಂಕಿಪಾರ್ಕ್ ಸ್ಥಾಪಿಸಲಾಗುವುದು ಎಂದರು.

bs raghavendra

ವಿಶೇಷವಾಗಿ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ಕೈಗಾರಿಕೆಗಳಾದ ಮೈಸೂರು ಕಾಗದ ಕಾರ್ಖಾನೆ ಹಾಗೂ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ 1000 ಜನರಿಗೆ ಉದ್ಯೋಗಾವಕಾಶ ಒದಗಿಸುವ ಹಾಗೂ ಪರೋಕ್ಷವಾಗಿ 1000 ಜನರಿಗೆ ಉದ್ಯೋಗ ಒದಗಿಸುವ ಷರತ್ತಿಗೊಳಪಟ್ಟು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಉಳಿದಂತೆ ಕಾರ್ಖಾನೆಯ 1 ಲಕ್ಷ ಎಕರೆ ಅರಣ್ಯಭೂಮಿಯನ್ನು ಕಾರ್ಖಾನೆಗೆ ಉಳಿಸಿಕೊಳ್ಳಲಾಗುವುದು ಎಂದು ನುಡಿದರು.

TAGGED:BY RaghavendraPublic TVshivamoggaಪಬ್ಲಿಕ್ ಟಿವಿಬಿ.ವೈ.ರಾಘವೇಂದ್ರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
27 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
35 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
37 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
59 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?