Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿ.ಮಾದೇಗೌಡರ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಿ.ಮಾದೇಗೌಡರ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ

Public TV
Last updated: July 17, 2021 10:34 pm
Public TV
Share
4 Min Read
BSY Meeting 3
SHARE

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾಂಧಿವಾದಿಯಾಗಿ, ಗಾಂಧೀಜಿಯವರ ತತ್ವ, ಆದರ್ಶಗಳನ್ನು ಜೀವನದುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

G Madegowda 1 medium

ಅವರ ನಿಧನದಿಂದ ರೈತ ಹಾಗೂ ಜನಪರ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸಂತಾಪ ಸೂಚಿಸಿದ್ದು, ಕಾವೇರಿ ನದಿ ನೀರು ಮತ್ತು ಕನ್ನಡ ನಾಡಿನ ನೆಲ, ಜಲದ ವಿಚಾರದಲ್ಲಿ ರಾಜೀರಹಿತ ಹೋರಾಟ ನಡೆಸುತ್ತಿದ್ದ ರೈತ ಮತ್ತು ಶ್ರಮಿಕರ ಒಡನಾಡಿ ಜಿ.ಮಾದೇಗೌಡ ಅವರು ನನ್ನ ಅತ್ಯಂತ ಆತ್ಮೀಯರು. ಇವರ ನಿಧನ ನನಗೆ ಅಪಾರ ದುಃಖ ತಂದಿದೆ. ಜಿ.ಮಾದೇಗೌಡರು ತಮ್ಮ 94 ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಉಸಿರಿರುವವರೆಗೂ ಹೋರಾಟ ಮನೋಭಾವವನ್ನು ಬಿಟ್ಟಿರಲಿಲ್ಲ ಎಂದು ಸ್ಮರಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ಬದುಕನ್ನು ಅರ್ಪಿಸಿಕೊಂಡಿದ್ದ ಮಾಜಿ‌ ಸಂಸದ ಜಿ.ಮಾದೇಗೌಡರ ನಿಧನದಿಂದಾಗಿ ಹಳೆ ತಲೆಮಾರಿನ ಅಪರೂಪದ ರಾಜಕೀಯ ಹೋರಾಟಗಾರರೊಬ್ಬರನ್ನು ಕಳೆದುಕೊಂಡು‌ ನಾಡು ಬಡವಾಗಿದೆ.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಅವರ ಕುಟುಂಬ ಮತ್ತು ಅಭಿಮಾನಿಗಳ‌ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/rQtd8NtxUj

— Siddaramaiah (@siddaramaiah) July 17, 2021

ತಮ್ಮ ಬದುಕಿನ ಕೊನೆಯವರೆಗೂ ಕ್ರಿಯಾಶೀಲರಾಗಿದ್ದ ಮಾದೇಗೌಡರು, ಜಿಲ್ಲೆಯ ರೈತರ ಹಿತಕ್ಕೆ ದಕ್ಕೆ ಬಂದಾಗೆಲ್ಲ ಪ್ರತಿಭಟನೆಯ ಧ್ವನಿಯಾಗಿದ್ದರು. ಅಗತ್ಯ ಬಿದ್ದಾಗಲೆಲ್ಲಾ ಸರ್ಕಾರಕ್ಕೆ ಸಲಹೆಗಳನ್ನೂ ನೀಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮೈಷುಗರ್ ಕಾರ್ಖಾನೆಯ ಖಾಸಗೀಕರಣದ ಪ್ರಸ್ತಾಪದ ವಿರುದ್ಧ ನಿರಂತರವಾಗಿ ಹೋರಾಟಗಾರರ ಜೊತೆ ನಿಂತಿದ್ದರು ಮತ್ತು ಇಳಿ ವಯಸ್ಸಿನಲ್ಲಿಯೂ ಅನೇಕ ಪ್ರತಿಭಟನೆಗಳಲ್ಲಿ ಖುದ್ದು ಭಾಗವಹಿಸಿದ್ದರು.

ಹಿಡಿದ ಕೆಲಸವನ್ನು ಸಾಧಿಸುವ ಹಠವಾದಿಯಾಗಿದ್ದ ಮಾದೇಗೌಡರು, ಕೆ.ಎಂ.ದೊಡ್ಡಿಯಲ್ಲಿ ಭಾರತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ತಮ್ಮ ನೆಲೆಯಲ್ಲೇ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದ್ದರು. ಸದಾ ಜಿಲ್ಲೆಯ ರೈತರ ಧ್ವನಿಯಾಗಿದ್ದ ಮಾದೇಗೌಡರ ಸಾವು ಜಿಲ್ಲೆಯ ಜನಪರ ಹೋರಾಟಗಳಿಗೆ ಮತ್ತು ರಾಜಕಾರಣಕ್ಕೆ ಆದ ಬಹುದೊಡ್ಡ ನಷ್ಟ. ಇವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತಲೇ ಜಿಲ್ಲೆಯ ರೈತ ಸಮುದಾಯಕ್ಕೆ, ಕುಟುಂಬವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

g madegowda 2 medium

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಹ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ ಜಿ.ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF

— H D Kumaraswamy (@hd_kumaraswamy) July 17, 2021

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಹ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದಶಕಗಳ ಜನಪರ ಚಳುವಳಿಗಳ ಮೂಲಕ ಮಂಡ್ಯ ಜಿಲ್ಲೆಯ, ಕಾವೇರಿ ನದಿಯ ಹಾಗೂ ರಾಜ್ಯದ ಅಸ್ಮಿತೆ ಎತ್ತಿ ಹಿಡಿಯುವ ಕಾರ್ಯವನ್ನು ಜಿ.ಮಾದೇಗೌಡರು ಮಾಡಿದ್ದರು. ಅದರಲ್ಲೂ ಕಾವೇರಿ ನದಿ ನೀರು ಹೋರಾಟಗಳಲ್ಲಿ ಅವರ ಪಾತ್ರ ಮಹತ್ವದ್ದು. ಅವರ ಅಕಾಲಿಕ ನಿಧನದಿಂದ ರಾಜ್ಯ ಮತ್ತು ದೇಶ ಜನಪರ ಕಾಳಜಿಯ ನಾಯಕರನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಅಪಾರ ಬಂಧುಗಳಿಗೆ ಹಾಗೂ ಕುಟುಂಬ ವರ್ಗದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

jagadesh shettar medium

ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಹ ತೀವ್ರ ಶೋಕ ವ್ಯಕ್ತಪಡಿಸಿದ್ದು, ಮಂಡ್ಯ ನೆಲದ ಅಪ್ಪಟ ಹೋರಾಟಗಾರ ಜಿ.ಮಾದೇಗೌಡರು, ತಮ್ಮ ಜನಪರ ಹೋರಾಟಗಳಿಂದ ಸಾಮಾಜಿಕ ಜೀವನದಲ್ಲಿ ಅಪಾರ ಗೌರವ ಗಳಿಸಿದವರು. ದಶಕಗಳ ನಿರಂತರ ಹೋರಾಟ, ಅಭಿವೃದ್ಧಿ ಬಗ್ಗೆ ಚಿಂತನೆ, ಜನಪರ ಚಳುವಳಿಗಳ ಮೂಲಕ ಬದುಕು ಸಾರ್ಥಕಗೊಳಿಸಿ ಕೊಂಡ ಮಾದೇಗೌಡರು, ಗಾಂಧಿವಾದವನ್ನು ನಂಬಿದವರು ಹಾಗೂ ಬದುಕಿನುದ್ದಕ್ಕೂ ಅದನ್ನು ಪಾಲಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ, ಗಾಂಧಿ ಗ್ರಾಮ, ಗುಡಿ ಕೈಗಾರಿಕೆ, ವಾಚನಾಲಯ ಸ್ಥಾಪನೆಗೆ ಕಾರಣರಾದವರು.

aravinda limbavali

ಆರು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ, ಒಂದು ಬಾರಿ ಸಚಿವರಾಗಿ ಅಗಾಧ ಅನುಭವ ಪಡೆದವರು. ರೈತರ ಸಂಕಷ್ಟಕ್ಕೆ ಸದಾ ಮಿಡಿಯುತ್ತಿದ್ದರು. ರೈತ ಚಳುವಳಿ ಹಾಗೂ ಕಾವೇರಿ ಹೋರಾಟಗಳಲ್ಲಿ ಅವರು ವಹಿಸಿದ ಪಾತ್ರ ಇತಿಹಾಸದಲ್ಲಿ ಉಳಿಯುವಂತಹದ್ದು, ಅವರ ನಿಧನದಿಂದ ಕರ್ನಾಟಕ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅದ್ಭುತ ಜನಪರ ನಾಯಕನನ್ನು ಕಳೆದುಕೊಂಡಿದೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share This Article
Facebook Whatsapp Whatsapp Telegram
Previous Article DK SHIVAKUMAR 4 small ಮೋದಿ ಚಪ್ಪಾಳೆ, ತಟ್ಟೆ ಹೊಡೆಯೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿಕೆಶಿ
Next Article FotoJet 4 16 ಬಿಗ್‍ಬಾಸ್ ಮನೆಯಿಂದ ಪ್ರಿಯಾಂಕಾ ಔಟ್

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

33 minutes ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

1 hour ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

2 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

2 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?