ಜೀವನಕ್ಕಿಂತ ಜೀವ ಮುಖ್ಯ, ತಾಂತ್ರಿಕ ಸಮಿತಿ ಹೇಳಿದಂತೆ ಕೇಳಿ: ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

Public TV
1 Min Read
v r wala

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಹೇಳಿದ್ದಾರೆ.

v r wala 1

ಕೋವಿಡ್ ನಿಯಂತ್ರಣಕ್ಕೆ ಸರ್ವಪಕ್ಷಗಳ ಸದಸ್ಯರ ಜೊತೆ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಸರ್ವಪಕ್ಷಗಳ ಸದಸ್ಯರ ಮಾತುಗಳನ್ನು ವಿವರವಾಗಿ ಆಲಿಸಿದರು. ಎಲ್ಲ ಸದಸ್ಯರ ಮಾತಿನ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದರು.

Corona All Party Meeting A 4

ಜನರು ವಲಸೆ ಹೋಗ್ತಾರೆ ಎಂದು ಯೋಚನೆ ಮಾಡಬೇಡಿ, ವಲಸೆ ಹೋದವರು ವಾಪಸ್ ಬಂದಿದ್ದಾರೆ. ಊಟ ಸಿಗಲ್ಲ ಅಂತಾ ಯೋಚನೆ ಮಾಡಬೇಡಿ. ಆರೋಗ್ಯ ಕರ್ನಾಟಕ ನಮಗೆ ಬೇಕು ಎಂದು ಹೇಳಿದ ರಾಜ್ಯಪಾಲರು, ಸಾರ್ವಜನಿಕರು ಚಿಂತೆ ಮಾಡಬೇಡಿ. ಜೀವನಕ್ಕಿಂತ ಜೀವ ಮುಖ್ಯವಾಗಿದೆ. ತಾಂತ್ರಿಕ ಸಮಿತಿ ನಿರ್ಣಯದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಸಾರ್ವಜನಿಕರ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸಿಎಂ ಯಡಿಯೂರಪ್ಪ ತಾಂತ್ರಿಕ ಸಮಿತಿ ಜೊತೆ ಚರ್ಚೆ ಮಾಡಿ, ಆದಷ್ಟು ಶೀಘ್ರ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *