ಮಂಗಳೂರು: ಕೊರೊನಾ ಮಹಾಸಂಕಷ್ಟದ ಕಾಲದಲ್ಲಿ ಆಶಾ ಕಾರ್ಯಕರ್ತೆಯರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲೂ ಪ್ರತಿನಿತ್ಯ ನೂರಾರು ಅಡೆತಡೆಗಳನ್ನು ಎದುರಿಸಿ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಕುಗ್ರಾಮಗಳಿಗೆ ಭೇಟಿ ನೀಡಿ ಕೆಲಸ ಮಾಡುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಕ್ಸಲ್ ಪೀಡಿತ ಗ್ರಾಮ ಸುಲ್ಕೇರಿಯ ಕೊರಗ ಕಾಲೋನಿಗೆ ಆಶಾ ಕಾರ್ಯಕರ್ತೆಯರು ತೆರಳುವುದೇ ಮಹಾ ಸವಾಲು. ರಭಸದಿಂದ ಹರಿಯುವ ನದಿ ಒಂದೆಡೆಯಾದರೆ ಕೊರೊನಾ ಭೀತಿ ಇನ್ನೊಂದೆಡೆ. ಇಷ್ಟಾದರೂ ಜೀವ ಕೈಯಲ್ಲಿ ಹಿಡಿದು ಕಾಲು ಸೇತುವೆಯಲ್ಲಿ ನದಿ ದಾಟಿ ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ.
ಕೊರಗ ಕಾಲೋನಿಯಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಕೆಲ ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳೂ ಕಾಣಿಸಿಕೊಂಡಿದೆ. ಮಳೆಯ ನಡುವೆ ರಭಸದಿಂದ ಹರಿಯುವ ನದಿಯನ್ನು ದಾಟಿ ಚಿಕಿತ್ಸೆಗೆ ಹೋಗೋದು ಅಸಾಧ್ಯವಾಗಿರುವುದರಿಂದ ಆಶಾ ಕಾರ್ಯಕರ್ತೆಯರು ಪ್ರತಿದಿನ ಆ ಭಾಗಗಕ್ಕೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಆಶಾ ಕಾರ್ಯಕರ್ತಯರ ನಿಸ್ವಾರ್ಥ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.