Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜುಲೈ ಅಂತ್ಯಕ್ಕೆ ಯಶವಂತಪುರ ಸಂಪೂರ್ಣ ವ್ಯಾಕ್ಸಿನೇಟೆಡ್ ಕ್ಷೇತ್ರ: ಸಚಿವ ಸೋಮಶೇಖರ್ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜುಲೈ ಅಂತ್ಯಕ್ಕೆ ಯಶವಂತಪುರ ಸಂಪೂರ್ಣ ವ್ಯಾಕ್ಸಿನೇಟೆಡ್ ಕ್ಷೇತ್ರ: ಸಚಿವ ಸೋಮಶೇಖರ್ ಭರವಸೆ

Bengaluru City

ಜುಲೈ ಅಂತ್ಯಕ್ಕೆ ಯಶವಂತಪುರ ಸಂಪೂರ್ಣ ವ್ಯಾಕ್ಸಿನೇಟೆಡ್ ಕ್ಷೇತ್ರ: ಸಚಿವ ಸೋಮಶೇಖರ್ ಭರವಸೆ

Public TV
Last updated: June 6, 2021 10:05 pm
Public TV
Share
4 Min Read
Yeshwanthpur MLA Somashekar 5
SHARE

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಕಾರ್ಯಯೋಜನೆಯನ್ನು ರೂಪಿಸಿದ್ದು, ಜೂನ್ ಮಾಸಾಂತ್ಯದೊಳಗೆ ವ್ಯಾಕ್ಸಿನೇಶನ್ ಕಾರ್ಯವು ಒಂದು ಹಂತಕ್ಕೆ ಬರಲಿದೆ. ಜುಲೈ ಮಾಸಾಂತ್ಯದೊಳಗೆ ಯಶವಂತಪುರ ಕ್ಷೇತ್ರವು ಶೇಕಡಾ ನೂರು ವ್ಯಾಕ್ಸಿನೇಶನ್ ಪಡೆದ ಕ್ಷೇತ್ರವಾಗಲಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ ವೈಯಕ್ತಿಕವಾಗಿ ಕೊಡಮಾಡುವ 1 ಲಕ್ಷ ರೂಪಾಯಿ ಸಹಾಯಧನವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವ್ಯಾಕ್ಸಿನೇಶನ್‌ಗೆ ಸಂಬಂಧಪಟ್ಟಂತೆ ಗೊಂದಲಗಳು ಬಗೆಹರಿದಿವೆ. ಕೆಲವರು ವೃಥಾ ಆರೋಪಗಳನ್ನು ಮಾಡಿದರು, ಕೊರತೆ ಇದೆ ಎಂದೆಲ್ಲ ಹೇಳಿದರು. ಆದರೆ, ಎಲ್ಲವೂ ಸರಿ ಇದ್ದು, ನಾಳೆಯಿಂದಲೇ 1 ವಾರ್ಡ್ ಗೆ 1 ಸಾವಿರ ಜನರಿಗೆ ವ್ಯಾಕ್ಸಿನೇಶನ್ ಮಾಡುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 18ರಿಂದ 45 ವರ್ಷದವರಿಗೂ ಲಸಿಕೆ ಲಭ್ಯವಾಗಲಿದೆ ಎಂದರು.

Yeshwanthpur MLA Somashekar 3 medium

ವ್ಯಾಕ್ಸಿನೇಶನ್ ಬಗ್ಗೆಯ ತಪ್ಪು ಕಲ್ಪನೆ ದೂರ ಮಾಡಿಕೊಳ್ಳಿ: ವ್ಯಾಕ್ಸಿನೇಶನ್ ಬಗ್ಗೆ ಅನೇಕ ಗೊಂದಲಗಳು, ತಪ್ಪು ಕಲ್ಪನೆಗಳು ಮೂಡಿದ್ದು, ಇದನ್ನು ಎಲ್ಲರೂ ದೂರ ಮಾಡಿಕೊಳ್ಳಬೇಕು. ಜ್ವರ ಬರಲಿದೆ, ತಲೆನೋವು ಬರಲಿದೆ ಹೀಗೆ ಏನೆಲ್ಲ ಹೇಳಲಾಗುತ್ತದೆ. ಆದರೆ, ಇದು ಎಲ್ಲರಿಗೂ ಆಗುವುದಿಲ್ಲ. ಒಂದು ವೇಳೆ ಜ್ವರ ಬಂದರೂ ಸಹ ಅದಕ್ಕೆ ವೈದ್ಯರು ಮಾತ್ರೆಯನ್ನು ಕೊಟ್ಟು ಕಳುಹಿಸುತ್ತಾರೆ. ಇಂದು ದೇಶದಲ್ಲಿ ಕೋಟ್ಯಂತರ ಜನ ವ್ಯಾಕ್ಸಿನೇಶನ್ ಪಡೆದಿದ್ದಾರೆ. ಹಾಗಾಗಿ ಭಯ ಬೇಡ. ಇನ್ನು ವ್ಯಾಕ್ಸಿನೇಶನ್ ಸಿಗದು ಎಂಬ ಭಯ, ಆತಂಕ ಯಾರಿಗೂ ಬೇಡ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು. ಇದನ್ನೂ ಓದಿ: ‘ನುಡಿದಂತೆ ನಡೆದವನ ಅಡಿಗೆನ್ನ ನಮನ’ ವಾಕ್ಯ ಸೋಮಶೇಖರ್​ಗೆ ಅನ್ವರ್ಥ: ಕಟೀಲ್

ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ: ಕೊರೋನಾ ಎರಡನೇ ಅಲೆ ವಿಪರೀತವಾಗಿದೆ. ಇದರಿಂದ ಸಾವು-ನೋವಿನ ಪ್ರಮಾಣ ಹೆಚ್ಚಿವೆ. ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಸಹ ನಿಯಂತ್ರಣ ಕಷ್ಟವಾಗಿದೆ. ನನ್ನ ಕ್ಷೇತ್ರದಲ್ಲಿಯೇ ಸುಮಾರು ಏಳೂವರೆ ಸಾವಿರ ಸೋಂಕು ಪ್ರಕರಣಗಳು ದಾಖಲಾಗಿದ್ದವು. ಅವರಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಯಾರೂ ಧೈರ್ಯಗೆಡಬಾರದು ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ ಎಂದರು.

Yeshwanthpur MLA Somashekar 4 medium

ಸೋಂಕಿನ ಲಕ್ಷಣಗಳು ಕಂಡಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಸೋಂಕು ತಗುಲಿದ್ದರೆ, ಕೂಡಲೇ ಟ್ರಯಾಜ್ ಸೆಂಟರ್ ಗಳಿಗೆ ಭೇಟಿ ಕೊಟ್ಟರೆ, ಅಲ್ಲಿರುವ ವೈದ್ಯರು ಸೋಂಕಿನ ತೀವ್ರತೆ, ಯಾವ ರೀತಿಯ ಚಿಕಿತ್ಸೆ ಅವಶ್ಯಕತೆ ಇದೆ, ಮನೆಯಲ್ಲಿದ್ದರೆ ಸಾಕೇ? ಕೋವಿಡ್ ಕೇರ್ ಸೆಂಟರ್‌ಗೆ ಬರಬೇಕೇ? ಆಕ್ಸಿಜನ್ ಬೆಡ್ ಅವಶ್ಯಕತೆ ಇದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಕೊಡುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

ಮನೆಯತ್ತ ವೈದ್ಯರು: ಕೋವಿಡ್ ನಿಯಂತ್ರಣ ಮಾಡಲೇಬೇಕೆಂಬ ನಿಟ್ಟಿನಲ್ಲಿ ನಮ್ಮ ಕ್ಷೇತ್ರದಲ್ಲಿ ವೈದ್ಯರ ತಂಡದೊಂದಿಗೆ ಸಾಕಷ್ಟು ಶ್ರಮಿಸಲಾಗುತ್ತಿದೆ. ಹೀಗಾಗಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಹಳ್ಳಿಗಳ ಮನೆ ಮನೆಗೆ ಭೇಟಿ ನೀಡುತ್ತಿದ್ದು, ಲಕ್ಷಣಗಳು ಕಂಡು ಬಂದರೆ ಅಲ್ಲಿಯೇ ಟೆಸ್ಟ್ ಮಾಡಿ, ಚಿಕಿತ್ಸೆ ಕೊಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದರು.

ಸೋಂಕಿತರ ಸಂಖ್ಯೆ ಇಳಿಮುಖ: ಯಶವಂತಪುರ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಸಾವಿನ ಪ್ರಮಾಣದಲ್ಲೂ ಕಡಿಮೆಯಾಗುತ್ತಿದೆ. ಹೀಗಾಗಿ ಚಿಕಿತ್ಸೆ ಪಡೆದು ಎಲ್ಲರೂ ಗುಣಮುಖರಾಗಬೇಕು. ಜೊತೆಗೆ ವ್ಯಾಕ್ಸಿನೇಶನ್ ಪಡೆದುಕೊಳ್ಳಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಕಿವಿಮಾತು ಹೇಳಿದರು. ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್ ಸೇರಿದಂತೆ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Yeshwanthpur MLA Somashekar 2 medium

ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್: ಹೆಮ್ಮಿಗೆಪುರ ವಾರ್ಡ್ 198ರ ತಲಘಟ್ಟಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಅರುಣ್ ಕುಮಾರ್ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇದೇ ವೇಳೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ 198 ಹೆಮ್ಮಿಗೆಪುರ ವಾರ್ಡ್ ಪಡಿತರ ಕಿಟ್ ವಿತರಣೆಗೆ ಚಾಲನೆ ನೀಡಲಾಯ್ತು.

24 ಕುಟುಂಬಗಳಿಗೆ 1 ಲಕ್ಷ ರೂ. ಸಹಾಯಧನ ವಿತರಣೆ: ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಸಚಿವರಾದ ಸೋಮಶೇಖರ್ ಅವರು 1 ಲಕ್ಷ ರೂಪಾಯಿಗಳ ವೈಯಕ್ತಿಕ ಧನಸಹಾಯವನ್ನು ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ವಿತರಣೆ ಮಾಡಿದರು. ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಮಂದಿಗೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಮಂದಿ ಹಾಗೂ ನೆಲಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಮಂದಿಯ ಆರ್ಥಿಕವಾಗಿ ಹಿಂದುಳಿದವರ ಕುಟುಂಬ ವರ್ಗದವರಿಗೆ ಸಹಾಯಧನವನ್ನು ಸಚಿವರು ವಿತರಿಸಿದರು. ಈ ಮೂಲಕ ಒಟ್ಟು 24 ಕುಟುಂಬಗಳಿಗೆ ಭಾನುವಾರ ವೈಯಕ್ತಿಕವಾಗಿ 1 ಲಕ್ಷ ರೂಪಾಯಿಗಳ ಸಹಾಯಧನವನ್ನು ಸಚಿವರು ವಿತರಣೆ ಮಾಡಿದರು.

ಕೊರೋನಾ ವಾರಿಯರ್ಸ್ ಗಳಿಗೆ ಪ್ರೋತ್ಸಾಹಧನ ವಿತರಣೆ: ಸೋಮನಹಳ್ಳಿ, ತರಳು, ನೆಲಗುಳಿ ಗ್ರಾಮ ಪಂಚಾಯಿತಿಗಳ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಹಾಗೂ ವಾಟರ್ ಮನ್ ಗಳಿಗೆ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ಪ್ರೋತ್ಸಾಹಧನ ಮತ್ತು ಪಡಿತರ ಕಿಟ್ ವಿತರಣೆ ಮಾಡಲಾಯಿತು. ಕಗ್ಗಲಿಪುರ ಗ್ರಾಮ ಪಂಚಾಯಿತಿ ವತಿಯಿಂದ ಕೊರೋನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಆಸ್ಪತ್ರೆ ಸಿಬ್ಬಂದಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹಧನ, ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು.

ಪಟ್ಟರೆಡ್ಡಿಪಾಳ್ಯದಲ್ಲಿ ಮಕ್ಕಳಿಗೆ ಪ್ರೋತ್ಸಾಹಧನ: ಪಟ್ಟರೆಡ್ಡಿಪಾಳ್ಯದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವತಿಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಶಿಬಿರ ಕಚೇರಿಯಲ್ಲಿ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಇದೇ ವೇಳೆ, ಸದಸ್ಯರಿಗೆ ನಂದಿನಿ ತುಪ್ಪವನ್ನು ವಿತರಣೆ ಮಾಡಲಾಯಿತು.

TAGGED:covid warriorsKarnataka Minister SomashekarST SomashekarYeshwanthpur Assembly Constituencyತರಳುಪಟ್ಟರೆಡ್ಡಿಪಾಳ್ಯಯಶವಂತಪುರ ವಿಧಾನಸಭಾ ಕ್ಷೇತ್ರಸಚಿವ ಎಸ್.ಟಿ.ಸೋಮಶೇಖರ್ಹೆಮ್ಮಿಗೆಪುರ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
4 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
5 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
5 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?