ಜುಲೈ 3ರಿಂದ ಸಂಜೆ 6 ಗಂಟೆಗೆ ಮೈಸೂರು ಜಿಲ್ಲೆಯಲ್ಲಿ ಎಲ್ಲ ವ್ಯಾಪಾರ ಬಂದ್: ಸೋಮಶೇಖರ್

Public TV
2 Min Read
mys st somashekhar

– ಶುಕ್ರವಾರದಿಂದ ಮಾಸ್ಕ್ ಧರಿಸದಿದ್ರೆ 200 ರೂ. ದಂಡ

ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಸಂಜೆ 6 ಗಂಟೆಯ ನಂತರ ಮೈಸೂರು ಜಿಲ್ಲಾದ್ಯಂತ ಎಲ್ಲ ವ್ಯಾಪಾರ-ವಹಿವಾಟು ಬಂದ್ ಆಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳ ಜೊತೆ ಸುಮಾರು ಒಂದು ಗಂಟೆಯ ಕಾಲ ಚರ್ಚೆ ಮಾಡಿದ್ದೇವೆ. ಶುಕ್ರವಾರದಿಂದ ಸಂಜೆ 6 ಗಂಟೆಯ ನಂತರ ಎಲ್ಲ ತರಹದ ವ್ಯವಹಾರಗಳನ್ನು ಕ್ಲೋಸ್ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ ಎಂದರು.

coronavirusnew

ಇಷ್ಟು ದಿನ 7.30ರ ನಂತರ ಅಂಗಡಿಗಳನ್ನು ಮುಚ್ಚಬೇಕು ಎಂದು ಹೇಳಲಾಗಿತ್ತು. ಆದರೆ ಈಗ 6 ಗಂಟೆಯಿಂದ ಎಲ್ಲ ವ್ಯಾಪಾರವನ್ನು ಬಂದ ಮಾಡಲಾಗುತ್ತದೆ. ಕೋವಿಡ್ ನಿಯಂತ್ರಣ ಮಾಡಲು, ಜನರ ಓಡಾಟ ನಿಯಂತ್ರಣ ಮಾಡುವ ಸಲುವಾಗಿ ಈ ಕ್ರಮಗೊಳ್ಳಲಾಗಿದೆ. ಶುಕ್ರವಾರದಿಂದಲೇ ಈ ಆದೇಶ ಜಾರಿಯಾಗಲಿದೆ ಎಂದು ಜಿಲ್ಲಾಡಳಿತದ ಜೊತೆಗಿನ ಸಭೆ ಬಳಿಕ ಸೋಮಶೇಖರ್ ಹೇಳಿದರು.

ಎಲ್ಲ ಎಪಿಎಂಸಿ ಹಾಗೂ ಮಾರುಕಟ್ಟೆಗಳಲ್ಲಿ ಬೆಳಗ್ಗೆ ಬರುವ ಗ್ರಾಹಕರಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಜೊತೆಗೆ ಅಂತರ ಕಾಯುಕೊಳ್ಳಬೇಕು. ಇನ್ನೂ ಶುಕ್ರವಾರದಿಂದ ಮಾಸ್ಕ್ ಧರಿಸದಿದ್ದರೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ. ಗ್ರಾಮಾಂತರ ಭಾಗದಲ್ಲಿ 100 ರೂಪಾಯಿ ದಂಡ ಹಾಕಲಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ ಪೊಲೀಸರಿಗೆ ನೆಗಡಿ, ಜ್ವರ ಬಂದಿದ್ದರೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಮಹಾನಗರ ಪಾಲಿಕೆ ಸಿಬ್ಬಂದಿಗೂ ಟೆಸ್ಟ್ ಕಡ್ಡಾಯವಾಗಿದೆ ಎಂದು ತಿಳಿಸಿದರು.

MYS 1

ಒಂದು ವಾರದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗದಿದ್ದರೆ ಐದಾರು ಜನರು ಗುಂಪಲ್ಲಿ ನಿಂತು ಮಾತನಾಡುವವರಿಗೆ ದಂಡ ವಿಧಿಸುವ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರು, ತಮಿಳುನಾಡು, ರಾಜಸ್ಥಾನ, ಆಂಧ್ರ ಪ್ರದೇಶದಿಂದ ಮೈಸೂರಿಗೆ ಬಂದವರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಈಗ ಬೆಂಗಳೂರಿನಿಂದ ಹೆಚ್ಚಾಗಿ ಮೈಸೂರಿಗೆ ಬರುತ್ತಿಲ್ಲ ಎಂದು ಸೋಮಶೇಖರ್ ಹೇಳಿದರು.

ಈ ಕೊರೊನಾ ಸೋಂಕು ಸಮುದಾಯಕ್ಕೆ ಇನ್ನೂ ಹರಡಿಲ್ಲ. ಒಂದೇ ತಂಡದಲ್ಲಿ ಪೊಲೀಸರು ಕೆಲಸ ಮಾಡಿದ್ದರು. ಹೀಗಾಗಿ ಮೈಸೂರಿನಲ್ಲಿ ಅವರಿಗೆ ಕೊರೊನಾ ಬಂದಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕಡಿಮೆ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಇನ್ನೂ ಎರಡು ದಿನಗಳಲ್ಲಿ ಆರೋಗ್ಯ ಸಿಬ್ಬಂದಿ ಹೆಚ್ಚಿಸುವ ಕಡೆ ಗಮನ ಕೊಡಲಾಗುವುದು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *