ಜೂನ್ 8ರಿಂದ ಕೆಲ ಷರತ್ತುಗಳೊಂದಿಗೆ ಮಾದಪ್ಪನ ದರ್ಶನ

Public TV
1 Min Read
male mahadeshwara 15

ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲೊಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಮುಕ್ತ ಮಾಡಲು ಅಭಿವೃದ್ಧಿ ಪ್ರಾಧಿಕಾರ ಸಕಲ ಸಿದ್ಧತೆ ಕೈಗೊಂಡಿದೆ.

ಜೂ.8ರಿಂದ ದೇಗುಲಕ್ಕೆ ಭಕ್ತರು ಬರಬಹುದಾಗಿದ್ದು ಕೋವಿಡ್-19 ಭೀತಿಯಲ್ಲಿ 1 ಮೀ. ಅಂತರದ ವೃತ್ತಗಳನ್ನು ಬರೆಯಲಾಗಿದೆ. ಈ ಮೂಲಕ ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು ಮಾದಪ್ಪನ ದರ್ಶನ ಪಡೆಯಬೇಕಿದೆ.

male mahadeshwara 12

ಈ ಹಿಂದೆ ಸಾವಿರಾರು ಮಂದಿ ಸಾಲುಗಟ್ಟಿ ನಿಲ್ಲಲು ಪ್ರಾಧಿಕಾರ ಬ್ರೇಕ್ ಹಾಕಿದ್ದು, ಒಮ್ಮೆಗೆ 180 ಮಂದಿ ಮಾತ್ರ ಸಾಲಿನಲ್ಲಿ ನಿಲ್ಲಬೇಕಿದೆ. ರಂಗ ಮಂಟಪದಲ್ಲಿ ಎಬಿಸಿಡಿ ಎಂಬ ನಾಲ್ಕು ವಿಭಾಗ ಮಾಡಿ ಒಂದೊಂದು ಬ್ಲಾಕ್ ನಲ್ಲಿ 200 ಮಂದಿ ಕುರ್ಚಿಯಲ್ಲಿ ಕೂರಲು ಅವಕಾಶ ಮಾಡಿಕೊಡಲಾಗುತ್ತಿದ್ದು, ದೇಗುಲ ಪ್ರವೇಶಕ್ಕೂ ಮುನ್ನ ಸಾನಿಟೈಸರ್ ಮಾಡುವ ಜೊತೆಗೆ ಸ್ಕ್ರೀನಿಂಗ್ ಮಾಡಲು ತಯಾರಿ ನಡೆದಿದೆ.

coronavirus test

ಕ್ಷೇತ್ರದ ಬಹುಮುಖ್ಯ ಸೇವೆಯಾದ ಚಿನ್ನದ ತೇರು ಮತ್ತಿತರ ರಥದ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದು, ಪರ ಮಾಡಲು ಕೂಡ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಬಸ್, ಕಾರು, ಬೈಕಿನಲ್ಲಿ ಬರುವ ಭಕ್ತರಿಗೆ ಮಾತ್ರ ಅವಕಾಶ ಇರಲಿದ್ದು ಈ ಹಿಂದೆ ಬರುತ್ತಿದ್ದಂತೆ ಗೂಡ್ಸ್ ಆಟೋ, ಟ್ರ್ಯಾಕ್ಟರ್ ಗಳಲ್ಲಿ ಬರುವಂತಿಲ್ಲ ಎಂದು ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

male mahadeshwara 13

ದಾಸೋಹ ಭವನದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ತಿಂಡಿ ವ್ಯವಸ್ಥೆ ಕಲ್ಪಿಸಲಿದ್ದು, ಒಟ್ಟಿಗೆ ಕುಳಿತು ತಿನ್ನಲು ಅವಕಾಶ ಇರುವುದಿಲ್ಲ. ಈಗಾಗಲೇ ಪ್ರಾಯೋಗಿಕವಾಗಿ 20 ಸಾವಿರ ಲಡ್ಡು ತಯಾರಿಸಲು ಅಗತ್ಯ ಕ್ರಮ ಕೈಗೊಂಡಿದ್ದು, ಹಲವು ಮುನ್ನೆಚ್ಚರಿಕೆ, ನಿರ್ಬಂಧಗಳ ನಡುವೆ ಜೂ.8 ರಿಂದ ಮಲೆ ಮಾದಪ್ಪ ಭಕ್ತರಿಗೆ ದರ್ಶನ ನೀಡಲು ಅಣಿಯಾಗಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *