– ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ತಿರುವನಂತಪುರಂ: ಎರಡು ದಿನಗಳ ಹಿಂದೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಳು. ಇದೀಗ ಆಕೆಯ ಕುಟುಂಬದವರು ಗೆಳೆಯ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದ್ದು, ಶುಕ್ರವಾರ ಅರಟ್ಟುಪುಳ ಮೂಲದ ಅರ್ಚನಾ (21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ. ಪ್ರೀತಿಸಿದ ಹುಡುಗ ಹೆಚ್ಚಿನ ವರದಕ್ಷಿಣೆ ಬೇಕೆಂದು ಕೇಳಿದ್ದನು. ಇದರಿಂದ ಮನನೊಂದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ಕೇಳಿದ್ದಾರೆ.
- Advertisement 2
- Advertisement 3
ಏನಿದು ಪ್ರಕರಣ?
ಅರ್ಚನಾ ಮತ್ತು ಯುವಕ ಕಳೆದ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಏಳು ತಿಂಗಳ ಹಿಂದೆ ಯುವಕ ಮತ್ತು ಅವನ ಕುಟುಂಬವು ಮದುವೆಯ ಪ್ರಸ್ತಾಪದೊಂದಿಗೆ ನಮ್ಮ ಮನೆಗೆ ಬಂದಿದ್ದರು. ಈ ವೇಳೆ 100 ಗ್ರಾ ಚಿನ್ನವನ್ನು ವರದಕ್ಷಿಣೆಯಾಗಿ ನೀಡುವಂತೆ ಒತ್ತಾಯಿಸುತ್ತಿದ್ದರು. ನನ್ನ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ನಾವು ಅಷ್ಟು ವರದಕ್ಷಿಣೆ ನೀಡಲು ಸಾಧ್ಯವಿಲ್ಲ ಮತ್ತು ಮದುವೆಗೆ ಕೇವಲ 30 ಗ್ರಾಂ ಚಿನ್ನವನ್ನು ಮಾತ್ರ ನೀಡಬಹುದು ಎಂದು ಹೇಳಿದೆವು. ಆದರೆ ಯುವಕನ ಮನೆಯವರು ಇದಕ್ಕೆ ಒಪ್ಪಿಕೊಂಡಿಲ್ಲ ಎಂದು ಅರ್ಚನಾಳ ಸಹೋದರಿ ತಿಳಿಸಿದ್ದಾಳೆ.
- Advertisement 4
ಕೆಲವು ವಾರಗಳ ಹಿಂದೆ ಯುವಕನ ಕುಟುಂಬದವರು ಬೇರೆ ಹುಡುಗಿಯೊಂದಿಗೆ ಅವನ ಮದುವೆಯನ್ನು ನಿಶ್ಚಯಿಸಿದ್ದರು. ಆತನಿಗೆ ನಿಶ್ಚಯ ಮಾಡಿದ್ದ ಹುಡುಗಿ ಕೂಡ ಅರ್ಚನಾ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದು, ಜೂನಿಯರ್ ವಿದ್ಯಾರ್ಥಿನಿಯಾಗಿದ್ದಳು. ಶುಕ್ರವಾರ ಯಾರೋ ಇಬ್ಬರಿಗೂ ವಿವಾಹ ನಿಶ್ಚಯ ಮಾಡುವ ಫೋಟೋವನ್ನು ಅರ್ಚನಾಗೆ ಕಳುಹಿಸಿದ್ದಾರೆ. ಅದೇ ದಿನ ಅವಳು ವಿಷ ಸೇವಿಸಿದ್ದು, ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೆವು. ಅಷ್ಟರಲ್ಲಿಯೇ ಅರ್ಚನಾ ಸಾವನ್ನಪ್ಪಿದ್ದಳು ಅರ್ಚನಾ ಚಿಕ್ಕಪ್ಪ ಶ್ರೀಕುಮಾರ್ ಹೇಳಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ. ಅರ್ಚನಾ ವಿಷ ಕುಡಿಯುವ ಮುನ್ನ ಸ್ನೇಹಿತರಿಗೆ ವಾಟ್ಸಪ್ ಆಡಿಯೋ ಸಂದೇಶವನ್ನು ರವಾನಿಸಿದ್ದಾಳೆ. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ನಾವು ಈ ಕುರಿತು ಎಲ್ಲ ಆಯಾಮಾಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕರಣದಲ್ಲಿ ಯಾರನ್ನೂ ಆರೋಪಿ ಎಂದು ಪರಿಗಣಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.