Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಸಿಬಿ ಚಾಲಕನ ಮೇಲೆ ಹಲ್ಲೆ – ಪೊಲೀಸರಿಂದ ಮಾಜಿ ಶಾಸಕ ಬಂಡಿಸಿದ್ದೇಗೌಡ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೆಸಿಬಿ ಚಾಲಕನ ಮೇಲೆ ಹಲ್ಲೆ – ಪೊಲೀಸರಿಂದ ಮಾಜಿ ಶಾಸಕ ಬಂಡಿಸಿದ್ದೇಗೌಡ ಅರೆಸ್ಟ್

Districts

ಜೆಸಿಬಿ ಚಾಲಕನ ಮೇಲೆ ಹಲ್ಲೆ – ಪೊಲೀಸರಿಂದ ಮಾಜಿ ಶಾಸಕ ಬಂಡಿಸಿದ್ದೇಗೌಡ ಅರೆಸ್ಟ್

Public TV
Last updated: July 9, 2020 10:38 pm
Public TV
Share
3 Min Read
mnd ex mla
SHARE

– ರಸ್ತೆ ಅಗಲೀಕರಣಕ್ಕಾಗಿ ತೆರವು ಕಾರ್ಯಾಚರಣೆ ವೇಳೆ ಹಲ್ಲೆ
– ನ್ಯಾಯಾಲಯದಿಂದ ಜಾಮೀನು ಮಂಜೂರು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕೊರೊನಾ ನಡುವೆಯೂ ಹಾಲಿ, ಮಾಜಿ ಶಾಸಕರ ಪ್ರತಿಷ್ಠೆ ರಾಜಕೀಯ ಜೋರಾಗಿದೆ. ಉಭಯ ಮುಖಂಡರ ಬೆಂಬಲಿಗರು ಮಹಾಮಾರಿಯ ಆತಂಕವಿಲ್ಲದೇ ಗುಂಪು ಗಲಾಟೆ ಮಾಡಿಕೊಳ್ಳುತ್ತಾ ರಂಪಾಟ ಮಾಡುತ್ತಿದ್ದಾರೆ. ಇಂದು ರಸ್ತೆ ಅಗಲೀಕರಣಕ್ಕಾಗಿ ತೆರವು ಕಾರ್ಯಾಚರಣೆ ಮಾಡುತ್ತಿದ್ದ ಜೆಸಿಬಿ ಚಾಲಕನಿಗೆ ಮಾಜಿ ಶಾಸಕ ಹಲ್ಲೆ ಮಾಡಿ ದರ್ಪ ಮೆರೆದಿದ್ದಾರೆ.

ಕೊರೊನಾದಿಂದ ಇಡೀ ದೇಶವೇ ತತ್ತರಿಸುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲೂ ಮಹಾಮಾರಿ ರುದ್ರನರ್ತನ ಕಡಿಮೆಯಾಗುತ್ತಿಲ್ಲ. ಹೀಗಿದ್ದರೂ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಪ್ರತಿಷ್ಠೆಯ ರಾಜಕೀಯ ಜೋರಾಗಿದೆ. ಅಲ್ಲದೇ ಉಭಯ ಮುಖಂಡರ ಬೆಂಬಲಿಗರು ಕೊರೊನಾ ಆತಂಕವಿಲ್ಲದೇ ಗುಂಪು ಗುಂಪಾಗಿ ಜಗಳವಾಡಿಕೊಂಡು ರಂಪಾಟ ಮಾಡಿಕೊಳ್ಳಿತ್ತಿದ್ದಾರೆ. ಮೊನ್ನೆಯಷ್ಟೇ ಶ್ರೀರಂಗಪಟ್ಟಣ ಪಿಎಲ್‍ಡಿ ಬ್ಯಾಂಕ್ ಆವರಣದಲ್ಲಿ ಮಳಿಗೆ ಉದ್ಘಾಟನೆ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಇಂದು ರಸ್ತೆ ಅಗಲೀಕರಣದ ವಿಚಾರದಲ್ಲಿ ರಂಪಾಟ ನಡೆಸಿದ್ದಾರೆ.

mnd ex mla 2

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಮುಖ್ಯರಸ್ತೆ ಅಗಲೀಕರಣದ ವಿಚಾರದಲ್ಲಿ ಮಾಲಿ ಹಾಗೂ ಮಾಜಿ ಶಾಸಕರು ಪ್ರತಿಷ್ಠೆಗೆ ಬಿದ್ದಿದ್ದಾರೆ. 10 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಗ್ರಾಮದ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಹೀಗಾಗಿ ರಸ್ತೆ ಬದಿಯ ಮನೆ ಹಾಗೂ ಅಂಗಡಿಗಳನ್ನು ತೆರವುಗೊಳಿಸಲು ಇಂದು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಂದಿದ್ದಾರೆ. ಜೆಸಿಬಿ ಮೂಲಕ ಬಸ್ ನಿಲ್ದಾಣ ತೆರವು ಮಾಡುತ್ತಿದ್ದಂತೆ ಆಕ್ರೋಶಗೊಂಡ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಬೆಂಬಲಿಗರು ಕಲ್ಲು ತೂರಾಡಿದ್ದಾರೆ. ಈ ವೇಳೆ ರಮೇಶ್ ಬಂಡಿಸಿದ್ದೇಗೌಡ ಜೆಸಿಬಿ ಚಾಲಕನ್ನು ಎಳೆದಾಡಿ ಹಲ್ಲೆಗೆ ಮುಂದಾಗಿದ್ದಾರೆ. ಇದ್ರಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣೆ ನಿರ್ಮಾಣಗೊಂಡಿತ್ತು.

mnd ex mla 4

ಗಲಾಟೆಗೆ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ದ್ವೇಷದ ರಾಜಕಾರಣವೇ ಕಾರಣ ಎಂದು ರಮೇಶ್ ಬಂಡಿಸಿದ್ದೇಗೌಡ ಆರೋಪಿಸಿದ್ದಾರೆ. ಗ್ರಾಮದಲ್ಲಿ ರಸ್ತೆ ಅಗಲೀಕರಣ ಅವಶ್ಯಕತೆ ಇರಲಿಲ್ಲ. ರಸ್ತೆ ಬದಿಯಲ್ಲಿ ನಮ್ಮ ಬೆಂಬಲಿಗರ ಮನೆಗಳು ಇರುವುದರಿಂದ ಅವರಿಗೆ ತೊಂದರೆ ಕೊಡಬೇಕೆಂದೇ ಅಗಲೀಕರಣ ಕಾಮಗಾರಿಕ್ಕೆ ಕೈಹಾಕಿದ್ದಾರೆ. ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್ ಯಾವುದೇ ಕಟ್ಟಡ ತೆರವು ಮಾಡದಂತೆ ಸೂಚನೆ ನೀಡಿದ್ದರು. ಅದರೂ ಶಾಸಕರ ಪ್ರಭಾವದಿಂದ ಬಸ್ ನಿಲ್ದಾಣ ಒಡೆದಿದ್ದಾರೆ. ನಾನು ಜೆಸಿಬಿ ಚಾಲಕನ್ನು ಹಿಡಿದುಕೊಂಡಿದ್ದು ತಪ್ಪು. ಅವರು ಬಸ್ ನಿಲ್ದಾಣ ಒಡಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

mnd ex mla 5

ಒಂದೆಡೆ ಮಾಜಿ ಶಾಸಕ ಹಾಗೂ ಅವರ ಬೆಂಬಲಿಗರು ತೆರವು ಕಾರ್ಯಾಚರಣೆ ತಡೆದಿದ್ದರೆ, ಇನ್ನೊಂದೆಡೆ ಕಾರ್ಯಾಚರಣೆ ಮುಂದುವರೆಸುವಂತೆ ಹಾಲಿ ಶಾಸಕರ ಬೆಂಬಲಿಗರು ಘೋಷಣೆ ಕೂಗಲು ಆರಂಭಿಸಿದರು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಅರಿತ ಅಧಿಕಾರಿಗಳು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ತೆರವುಗೊಳಿಸುವ ಬಗ್ಗೆ ನಿರ್ಧರಿಸಲು ಚಿಂತನೆ ನಡೆಸಿದ್ದಾರೆ.

mnd ex mla 3

ಅರಕೆರೆ ಗ್ರಾಮದಲ್ಲಿ ಈವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಹಲವರು ಕ್ವಾರಂಟೈನ್‍ನಲ್ಲಿದ್ದಾರೆ. ಪರಿಸ್ಥಿತಿ ಹೀಗಿದ್ರೂ ಮಾಜಿ ಹಾಲಿ ಶಾಸಕರು ಗುಂಪುಗಟ್ಟಿಕೊಂಡು ರಂಪಾಟ ಮಾಡುತ್ತಿರುವುದು ವಿಪರ್ಯಾಸವೇ ಸರಿ. ಸಂಜೆ ವೇಳೆಗೆ ಲೋಕೋಪಯೋಗಿ ಎಇಇ ಮಹೇಶ್ ಸರ್ಕಾರಿ ಕಾಮಗಾರಿಗೆ ಅಡ್ಡಿ ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆ ನಡೆಸಿರುವುದರ ಬಗ್ಗೆ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ವಿರುದ್ಧ ಅರಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ದೂರಿನ ಅನ್ವಯ ಪೊಲೀಸರು ರಮೇಶ್ ಬಾಬು ಬಂಡಿಸಿದ್ದೇಗೌಡ ಅವರನ್ನು ಬಂಧಿಸಿ, ಶ್ರೀರಂಗಪಟ್ಟಣದ ಜೆಎಂಎಫ್‍ಸಿ ಕೊರ್ಟ್‍ನ ನ್ಯಾಯಾಧೀಶರ ಮುಂದೆ ನಿಲ್ಲಿಸಿದರು. ನಂತರ ನ್ಯಾಯಾಧೀಶರು ರಮೇಶ್ ಬಾಬು ಬಂಡಿಸಿದ್ದೇಗೌಡರಿಗೆ ಷರತ್ತು ಬದ್ಧ ಜಾಮೀನು ನೀಡಿ, ಇದೇ ತಿಂಗಳ 15ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

TAGGED:bailFormer MLAmandyapolicepoliticsPublic TVRoad Wideningಜಾಮೀನುಪಬ್ಲಿಕ್ ಟಿವಿಪೊಲೀಸ್ಮಂಡ್ಯಮಾಜಿ ಎಂಎಲ್‍ಎರಸ್ತೆ ಅಗಲೀಕರಣರಾಜಕೀಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
14 minutes ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
20 minutes ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
23 minutes ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
26 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
34 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?