ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರನಗರ ಸಿಗ್ನಲ್ ಬಳಿ ರೌಡಿಶೀಟರ್ ವಿಜಯ್ ಕುಮಾರ್ ಗೊಣ್ಣೆವಿಜಿ ಕಾಲಿಗೆ ಗುಂಡೇಟು ನೀಡಲಾಗಿದೆ.
ಗೊಣ್ಣೆವಿಜಿ ಕೊಲೆ ಕೊಲೆಯತ್ನ, ಧಮ್ಕಿ, ದರೋಡೆ ಸೇರಿ 18 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತ ಕಳೆದ ಒಂದು ವಾರದ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರಬಂದ ಕೂಡಲೇ 307 ಕೇಸ್ ಮಾಡಿದ್ದ. ಗಿರಿನಗರದಲ್ಲಿ ವ್ಯಕ್ತಿಯೊಬ್ಬರಿಗೆ ಡ್ಯಾಗರ್ ನಿಂದ ಹಲ್ಲೆ ಮಾಡಿದ್ದ.
ರಾತ್ರಿ ಆರೋಪಿ ವೀರಭದ್ರನಗರ ಬಳಿ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವಿನಯ್ & ಟೀಂ ಮೇಲೆ ದಾಳಿ ಮಾಡಿದ್ದ. ಈ ವೇಳೆ ಶರಣಾಗುವಂತೆ ಆರೋಪಿ ವಿಜಿಗೆ ಪೊಲೀಸರು ತಿಳಿಸಿದರು. ಸರೆಂಡರ್ ಆಗದೇ ಪೊಲೀಸ್ ಕಾನ್ಸ್ ಟೇಬಲ್ ಎಡಭುಜಕ್ಕೆ ಡ್ಯಾಗರ್ ನಿಂದ ಹಲ್ಲೆ ಮಾಡಿದ.
ಕಡೆಗೆ ಆತ್ಮರಕ್ಷಣೆಗೆ ಪಿ.ಎಸ್.ಐ ವಿನಯ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಕಾನ್ಸ್ ಟೇಬಲ್ ಮಧು ಹಾಗೂ ಗುಂಡೇಟು ತಿಂದ ಆರೋಪಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.