ಜ್ವರ ಇದ್ದರೂ ಪ್ರಚಾರ – ಬಿಎಸ್‍ವೈಯನ್ನು ಟೀಕಿಸಿ, ಶುಭ ಹಾರೈಸಿದ ಕಾಂಗ್ರೆಸ್

Public TV
1 Min Read
BSY CONGRESS

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಕಾಂಗ್ರೆಸ್ ಅವರನ್ನು ಟೀಕಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್‍ವೈ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಪ್ರಶ್ನಿಸಿ ಸಿಎಂ ಅವರಿಗೆ ಟ್ಯಾಗ್ ಮಾಡಿದೆ.

ಯಡಿಯೂರಪ್ಪನವರಿಗೆ ಸೋಮವಾರವೇ ಜ್ವರ ಕಾಣಿಸಿತ್ತು. ಆದರೆ ಮಾತ್ರೆ ತೆಗೆದುಕೊಂಡು ಉಪ ಚುನಾಚಣೆಯ ಪ್ರಚಾರಕ್ಕೆ ತೆರಳಿದ್ದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಇಂದು ಬೆಳಗ್ಗೆ ತುರ್ತು ಸಭೆಯ ಬಳಿಕ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಟೆಸ್ಟ್ ಮಾಡಿಸಿದ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೂಡಲೇ ಸಿಎಂ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆಯಷ್ಟೇ ಬೆಳಗಾವಿ ಚುನಾವಣಾ ಪ್ರಚಾರದ ಬ್ಯುಸಿಯಾಗಿದ್ದ ಸಿಎಂ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣ ವೈದ್ಯರು ಸಿಎಂ ಉಳಿದುಕೊಂಡಿದ್ದ ಹೋಟೆಲ್ ಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಆ ಬಳಿಕವೂ ಸಿಎಂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ನಂತರ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ಇಂದು ತುರ್ತು ಸಭೆ ಕರೆದಿದ್ದರು.

ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಮತ್ತೆ ಇಂದು ಆರೋಗ್ಯ ಕೈಕೊಟ್ಟ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *