ಚೆನ್ನೈ: ಟಯರ್ ಸ್ಫೋಟಗೊಂಡು ಜೀವ ಉಳಿಸಬೇಕಾದ ಅಂಬುಲೆನ್ಸ್ ಮರಕ್ಕೆ ಹೊಡೆದ ಪರಿಣಾಮ ತುಂಬು ಗರ್ಭಿಣಿ ಸೇರಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಕಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಗರ್ಣಿಣಿ ಜಯಲಕ್ಷ್ಮಿ(26), ಅತ್ತೆ ಸೆಲ್ವಿ(55) ಹಾಗೂ ನಾದಿನಿ ಅಂಬಿಕಾ (30) ಎಂದು ಗುರುತಿಸಲಾಗಿದೆ. ಸೊರಪುಟ್ಟ ಗ್ರಾಮದ ನಿವಾಸಿ ಜಯಲಕ್ಷ್ಮಿ ಅವರು 9 ತಿಂಗಳ ಗರ್ಭಿಣಿ. ಇವರಿಗೆ ಗುರುವಾರ ನಸುಕಿನ ಜಾವ 2.30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಜಯಲಕ್ಷ್ಮಿ ಪತಿ 108 ಗೆ ಕರೆ ಮಾಡಿದ್ದಾರೆ. ಹೀಗಾಗಿ ಜಯಲಕ್ಷ್ಮಿ ಅತ್ತೆ ಹಾಗೂ ಅವರ ಮಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಲೆಂದು ಅಂಬುಲೆನ್ಸ್ ಹತ್ತಿದ್ದಾರೆ.
ಹೀಗೆ ಅಂಬುಲೆನ್ಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಅಂಬುಲೆನ್ಸ್ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತ್ತ ಅಂಬುಲೆನ್ಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಂಡೀಪುರ ಸಂರಕ್ಷಿತಾರಣ್ಯದಲ್ಲಿ ಹುಲಿ ಸಾವು
ಘಟನೆ ಸಂಬಂಧಿಸಿಂದತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮೃತ ಜಯಲಕ್ಷ್ಮಿ ಕುಟುಂಬಕ್ಕೆ 5 ಲಕ್ಷ ಹಾಗೂ ಅವರ ತ್ತೆ ಹಾಗೂ ನಾದಿನಿ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.