ಮೈಸೂರು: ಉನ್ನತ ಅಧಿಕಾರಿ ಜೊತೆ ಟಿಎಚ್ಓ ಡಾ. ನಾಗೇಂದ್ರ ಮಾತಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗಿದ್ದು, ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಆರೋಗ್ಯಾಧಿಕಾರಿ ನಾಗೇಂದ್ರ ಶುಕ್ರವಾರ ಬೆಳಗ್ಗೆ ತಮ್ಮ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ನಾಗೇಂದ್ರ ಕಾರ್ಯನಿರ್ವಹಿಸುತ್ತಿದ್ದರು.
ಡಾ. ನಾಗೇಂದ್ರ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಒತ್ತಡ ಇತ್ತು ಎನ್ನಲಾಗಿದೆ. ಕೊರೊನಾ ಟೆಸ್ಟ್ ಟಾರ್ಗೆಟ್ ಹೆಚ್ಚು ನೀಡಿ ಕಡ್ಡಾಯವಾಗಿ ಮಾಡಲೇಬೇಕೆಂದು ಒತ್ತಡ ಹಾಕಲಾಗಿದೆ. ಇಲಾಖೆಯಲ್ಲಿ ನೌಕರರ ಸಂಖ್ಯೆ ಬಹಳ ಕಡಮೆ ಇದ್ದರೂ ಹೆಚ್ಚುವರಿ ಕೆಲಸ ನೀಡುತ್ತಿದ್ದರು. ಜೊತೆಗೆ 6 ತಿಂಗಳಿಂದ ಒಂದು ದಿನವೂ ರೆಜೆ ನೀಡದೆ ಕೆಲಸ ಮಾಡಿಸಿಕೊಂಡಿದ್ದಾರೆ. ಈಗ ಉನ್ನತ ಅಧಿಕಾರಿ ಜೊತೆ ನಾಗೇಂದ್ರ ಮಾತಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗಿದ್ದು, ಕುಟುಂಬಸ್ಥರು ನ್ಯಾಯಕ್ಕಾಗಿ ಪಟ್ಟುಹಿಡಿದಿದ್ದಾರೆ.
ಆಡಿಯೋ ಸಂಭಾಷಣೆ ಇಲ್ಲಿದೆ: