Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟೀಂ ಇಂಡಿಯಾಗೆ ಈ ನಾಲ್ವರ ಕಮ್‍ಬ್ಯಾಕ್ ಕಷ್ಟ ಕಷ್ಟ!

Public TV
Last updated: June 12, 2020 3:20 pm
Public TV
Share
3 Min Read
Team India
SHARE

ನವದೆಹಲಿ: ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡಲು ಮಾಜಿ ನಾಯಕ ಎಂ.ಎಸ್.ಧೋನಿ ಸೇರಿದಂತೆ ಅನೇಕರು ಸರ್ವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ನಾಲ್ವರು ಮತ್ತೆ ರಾಷ್ಟ್ರೀಯ ತಂಡ ಸೇರುವುದು ಕಷ್ಟ ಎಂಬ ಮಾತುಗಳು ಕೇಳಿ ಬಂದಿವೆ.

ಭಾರತದ ಕ್ರಿಕೆಟ್ ತಂಡದ ಪರ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹರ್ಭಜನ್ ಸಿಂಗ್ ಇತ್ತೀಚೆಗೆ ತಂಡಕ್ಕೆ ಕಮ್‍ಬ್ಯಾಕ್ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಐಪಿಎಲ್ ಮೂಲಕ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡಲು ಎಂ.ಎಸ್.ಧೋನಿ ಮುಂದಾಗಿದ್ದರು. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಟೂರ್ನಿ ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

MS Dhoni Harbhajan Singh

ಹರ್ಭಜನ್ ಸಿಂಗ್ ಸುಮಾರು 11 ವರ್ಷಗಳ ಕಾಲ ರಾಷ್ಟ್ರೀಯ ತಂಡದಲ್ಲಿ ಪ್ರಮುಖ ಆಯ್ಕೆಯಾಗಿದ್ದರು. 2011ರ ವಿಶ್ವಕಪ್ ನಂತರ ಎಂ.ಎಸ್. ಧೋನಿ ಮತ್ತು ತಂಡದ ಆಡಳಿತ ಮಂಡಳಿ ಅವರನ್ನು ಕೈಬಿಟ್ಟು ಆರ್.ಅಶ್ವಿನ್‍ಗೆ ಮಣೆ ಹಾಕಿತು. ಹೀಗಾಗಿ ಮುಂದಿನ 6 ವರ್ಷಗಳವರೆಗೆ ಎಲ್ಲಾ ಸ್ವರೂಪಗಳಲ್ಲಿ ಸ್ಪಿನ್ ದಾಳಿಯನ್ನು ಆರ್.ಅಶ್ವಿನ್ ಮುನ್ನಡೆಸಿದರು.

ಸದ್ಯ ಐಪಿಎಲ್ ಮಾತ್ರ ಆಡುತ್ತಿರುವ ಹರ್ಭಜನ್ ಸಿಂಗ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಯ್ಕೆಯಾಗುವ ನಿರೀಕ್ಷೆಯಿಲ್ಲ. ಆದರೆ ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಹೊರತಾಗಿಯೂ ಐಪಿಎಲ್ ಅಥವಾ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ. ಇತ್ತ ಅಂಬಟಿ ರಾಯುಡು, ಸ್ಟುವರ್ಟ್ ಬಿನ್ನಿ, ಮನೋಜ್ ತಿವಾರಿ ಹಾಗೂ ಪಾರ್ಥಿವ್ ಪಟೇಲ್ ಅವರು ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡುವುದು ಭಾರೀ ಕಷ್ಟ ಎನ್ನಲಾಗುತ್ತಿದೆ.

Ambati Rayudu

ಅಂಬಟಿ ರಾಯುಡು:
2019ರ ವಿಶ್ವಕಪ್‍ಗೆ ಅಂಬಟಿ ರಾಯುಡು ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದ್ದು ಅಚ್ಚರಿ ಮೂಡಿಸಿತ್ತು. ಅಷ್ಟೇ ಅಲ್ಲದೆ ಟೂರ್ನಿ ನಡುವೆ ಆಟಗಾರರು ಗಾಯದಿಂದ ವಿಶ್ರಾಂತಿಗೆ ಜಾರಿದಾಗ ಎರಡು ಅವಕಾಶಗಳು ಇದ್ದಾಗಲೂ ಅವರನ್ನು ಕಡೆಗಣಿಸಲಾಗಿತ್ತು. ಬದಲಾಗಿ ರಿಷಬ್ ಪಂತ್ ಮತ್ತು ಮಾಯಾಂಕ್ ಅಗರ್ವಾಲ್ ಅವರಿಗೆ ಮಣೆ ಹಾಕಲಾಗಿತ್ತು. ಈ ಮೂಲಕ ಟೀಂ ಇಂಡಿಯಾದಲ್ಲಿ ಅಂಬಟಿ ರಾಯುಡು ಕಮ್‍ಬ್ಯಾಕ್ ಕಷ್ಟ ಎನ್ನುವ ಸಂದೇಶವನ್ನು ಬಿಸಿಸಿಐ ಪರೋಕ್ಷವಾಗಿ ರವಾನಿಸಿತ್ತು. ಶ್ರೇಯಸ್ ಅಯ್ಯರ್ ಉತ್ತಮ ಫಾರ್ಮ್ ನಲ್ಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದರಿಂದಾಗಿ ರಾಯುಡು ಅವರಿಗಿದ್ದ ಅವಕಾಶ ಕೈತಪ್ಪಿದೆ.

Stuart Binny A 1

ಸ್ಟುವರ್ಟ್ ಬಿನ್ನಿ:
2016ರಿಂದ ಟೀಂ ಇಂಡಿಯಾದಿಂದ ಹೊರಗುಳಿದ ನಂತರ ಸ್ಟುವರ್ಟ್ ಬಿನ್ನಿ ದೇಶೀಯ ಕ್ರಿಕೆಟ್‍ನಲ್ಲಿ ಮುಂದುವರಿದಿದ್ದಾರೆ. 2018ರಲ್ಲಿ ಅವರು ಕರ್ನಾಟಕ ತಂಡದಿಂದ ಹೊರಗುಳಿದಿದ್ದರು. 2019-20ರ ಮಧ್ಯೆ ನಾಗಾಲ್ಯಾಂಡ್ ತಂಡ ಸೇರಲು ಮುಂದಾಗಿದ್ದರು. ಐಪಿಎಲ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ತಂಡವು ಬಿನ್ನಿ ಅವರನ್ನು 13ನೇ ಆವೃತ್ತಿಗೆ ಕೈಬಿಟ್ಟಿದೆ. ಬಳಿಕ ನಡೆದ ಹರಾಜಿನಲ್ಲಿ ಸ್ಟುವರ್ಟ್ ಬಿನ್ನಿ ಅವರನ್ನು ಯಾವುದೇ ತಂಡ ಖರೀದಿಸಲು ಮುಂದೆ ಬರಲಿಲ್ಲ.

ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದಲ್ಲಿ ಆಲ್‍ರೌಂಡರ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ ಬಿನ್ನಿ ಕಮ್‍ಬ್ಯಾಕ್ ಕಷ್ಟ ಎಂದು ಹೇಳಲಾಗುತ್ತಿದೆ. 2015ರ ವಿಶ್ವಕಪ್ ತಂಡದ ಸದಸ್ಯರಾಗಿದ್ದ ಬಿನ್ನಿ 2014ರಿಂದ 2016ರವರೆಗೆ ಆರು ಟೆಸ್ಟ್, 14 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ.

Manoj Tiwary

ಮನೋಜ್ ತಿವಾರಿ:
ಎಂ.ಎಸ್.ಧೋನಿ ಹಾಗೂ ತಂಡದ ಆಯ್ಕೆ ಸಮಿತಿಯ ಒಂದು ಕಾಲದ ಮೊದಲ ಆಯ್ಕೆಯ ಆಟಗಾರ ಮನೋಜ್ ತಿವಾರಿ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪರದಾಡಿದರು. ಶತಕ ಗಳಿಸಿದ ನಂತರವೂ ಅವರು ಆಡುವ ಇಲೆವನ್ ತಂಡದಿಂದ ಹೊರಗುಳಿದರು. ಟೀಂ ಇಂಡಿಯಾ ಜೊತೆಗೆ ಪ್ರಪಂಚದಾದ್ಯಂತ ಪ್ರವಾಸ ಮಾಡಿದರು ಮನೋಜ್ ತಿವಾರಿ, 2008ರಿಂದ 2015ರವರೆಗೆ ಕೇವಲ 12 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅವರು 2018ರಿಂದ ಭಾರತ ಎ ಪರ ಆಡಿಲ್ಲ. ತಿವಾರಿ ದೇಶೀಯ ಕ್ರಿಕೆಟ್‍ನಲ್ಲಿ ಬಂಗಾಳ ಪರ ಆಡುವುದನ್ನು ಮುಂದುವರಿಸಿದ್ದಾರೆ. ಆದರೆ ರಾಷ್ಟ್ರೀಯ ತಂಡಕ್ಕೆ ಕರೆಸಿಕೊಳ್ಳುವ ಸಾಧ್ಯತೆಗಳು ವಿರಳ ಎನ್ನಲಾಗುತ್ತಿದೆ.

Parthiv Patel b

ಪಾರ್ಥಿವ್ ಪಟೇಲ್:
ಎಂ.ಎಸ್.ಧೋನಿ ಅವರ ಎಂಟ್ರಿ ಪಾರ್ಥಿವ್ ಪಟೇಲ್ ಅವರನ್ನು ಟೀಂ ಇಂಡಿಯಾದಿಂದ ದೂರವಾಗುವಂತೆ ಮಾಡಿತು ಎನ್ನಲಾಗುತ್ತಿದೆ. 2018-19ರಲ್ಲಿ ನಡೆದ ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಅವರು ಟೆಸ್ಟ್ ತಂಡದ ಭಾಗವಾಗಿದ್ದರು. ಆದರೆ ರಿಷಬ್ ಪಂತ್ ಅವರು ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರಿಂದ ಅವಕಾಶ ಸಿಗಲಿಲ್ಲ. ಪಾರ್ಥಿವ್ ಪಟೇಲ್ ಐಪಿಎಲ್ ಮತ್ತು ದೇಶೀಯ ಕ್ರಿಕೆಟ್ ಆಡುವುದನ್ನು ಮುಂದುವರಿಸಿದ್ದಾರೆ. ಆದರೆ ವೃದ್ಧಿಮಾನ್ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

TAGGED:Ambati RayuduManoj TiwaryParthiv PatelPublic TVStuart BinnyTeam Indianಅಂಬಟಿ ರಾಯುಡುಕಮ್‍ಬ್ಯಾಕ್ಟೀಂ ಇಂಡಿಯಾಪಬ್ಲಿಕ್ ಟಿವಿಪಾರ್ಥಿವ್ ಪಟೇಲ್ಮನೋಜ್ ತಿವಾರಿಸ್ಟುವರ್ಟ್ ಬಿನ್ನಿ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Ind vs Eng
Cricket

Ind vs Eng 4th Test | ಇಂದಿನಿಂದ ಪಂದ್ಯ ಶುರು – ಸರಣಿ ಗೆಲ್ಲುವ ತವಕದಲ್ಲಿ ಇಂಗ್ಲೆಂಡ್‌, ತಿರುಗೇಟು ನೀಡಲು ಭಾರತ ಸಜ್ಜು

Public TV
By Public TV
20 minutes ago
Biklu Shiva Murder Case 1
Bengaluru City

ಬಿಕ್ಲು ಶಿವ ಕೊಲೆ ಕೇಸ್; ಆರೋಪಿ ಜಗ್ಗನ ಮೇಲೆ ಲುಕ್‌ಔಟ್ ನೋಟಿಸ್‌ಗೆ ಸಿದ್ಧತೆ

Public TV
By Public TV
42 minutes ago
byrathi basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

Public TV
By Public TV
45 minutes ago
Shubhanshu Shukla Learns To Walk
Latest

ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

Public TV
By Public TV
1 hour ago
Mandya Egg Fight
Districts

ಮಂಡ್ಯದಲ್ಲಿ ಮೊಟ್ಟೆ ವಿವಾದ – ಮೊಟ್ಟೆ ಕೊಟ್ರೆ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದ ಪೋಷಕರು

Public TV
By Public TV
1 hour ago
milk sale bandh
Bengaluru City

ಇಂದು, ನಾಳೆ ಹಾಲು ಮಾರಾಟ ಬಂದ್ – ಟೀ, ಕಾಫಿ ಇಲ್ಲ.. ಓನ್ಲಿ ಲೆಮನ್, ಬ್ಲ್ಯಾಕ್ ಟೀ ಸಿಗುತ್ತೆ ಅಂತ ಬೋರ್ಡ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?