Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಟೆಲಿಕನ್ಸಲ್‍ಟೆನ್ಸಿಗೆ ಬಾರದ ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿಗಳ ಬಗ್ಗೆ ಡಿಸಿಎಂ ಗರಂ

Public TV
Last updated: May 25, 2021 9:34 pm
Public TV
Share
3 Min Read
FotoJet 5 31
SHARE

-ಸ್ಟೆಪ್‍ಡೌನ್ ವ್ಯವಸ್ಥೆಯನ್ನು ಅವಲೋಕನ ಮಾಡಿದ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್ ಹೋಮ್ ಐಸೋಲೇಷನ್ ವ್ಯವಸ್ಥೆಯಲ್ಲಿ ಟೆಲಿಕನ್ಸಲ್‍ಟೆನ್ಸಿ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸ್ಟೆಪ್‍ಡೌನ್ ವ್ಯವಸ್ಥೆಯನ್ನು ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವಲೋಕನ ಮಾಡಿದರು.

ಇದೇ ವೇಳೆ ಟೆಲಿಕನ್ಸಲ್‍ಟೆನ್ಸಿ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಾರದ, ಸೇವಾ ಮನೋಭಾವ ಮರೆತ ವೈದ್ಯಕೀಯ ವಿದ್ಯಾರ್ಥಿಗಳ ವರ್ತನೆಗೆ ಡಿಸಿಎಂ ಅತೀವ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ವರ್ಚುಯಲ್ ವೇದಿಕೆ ಮೂಲಕ ಸ್ಟೆಪ್‍ಡೌನ್ ವ್ಯವಸ್ಥೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮೊದಲ ಅಲೆ ಬಂದಾಗ ತೀವ್ರ ಆಕ್ಷೇಪಕ್ಕೆ ಗುರಿಯಾಗಿದ್ದ  ಆತಂಕಕ್ಕೂ ಕಾರಣವಾಗಿದ್ದ ಹೋಮ್ ಐಸೋಲೇಷನ್ ವ್ಯವಸ್ಥೆ ಎರಡನೇ ಅಲೆಯ ಹೊತ್ತಿಗೆ ಆಪ್ತರಕ್ಷಕನಂತೆ ಬದಲಾಗಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಸುಮಾರು 10,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ಹಾಗೂ 800ಕ್ಕೂ ಹೆಚ್ಚು ತಜ್ಞ ವೈದ್ಯರನ್ನು ಮನಸಾರೆ ಅಭಿನಂದಿಸುವೆ ಎಂದರು.

ashwathnarayan 4

ವೈದ್ಯ ಸೇವೆ ಎಂದರೆ ಸಂಕಷ್ಟ ಕಾಲದಲ್ಲಿ ಜನರ ಸೇವೆಗೆ ಧಾವಿಸುವುದೇ ಹೊರತು ಪಲಾಯನ ಮಾಡುವುದಲ್ಲ. ಕೋವಿಡ್ ಸೋಂಕಿತರಿಗೆ ಟೆಲಿಕನ್ಸಲ್‍ಟೆನ್ಸಿ ಮೂಲಕ ಸ್ಟೆಪ್‍ಡೌನ್ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಅಂತಿಮ ವರ್ಷದ ಎಲ್ಲ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡುವಂತೆ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರನ್ನು ಕೋರಲಾಗಿತ್ತು. ಆದರೆ, ಕಡಿಮೆ ಪ್ರಮಾಣದ ವಿದ್ಯಾರ್ಥಿಗಳು ಬಂದು ಕೆಲಸ ಮಾಡುತ್ತಿದ್ದಾರೆ. ದೊಡ್ಡ ಪ್ರಮಾಣದ ವಿದ್ಯಾರ್ಥಿಗಳು ಹೊರಗೆ ಉಳಿದಿದ್ದಾರೆ. ಇದು ಬೇಸರದ ಸಂಗತಿ ಎಂದು ಹೇಳಿದರು.

ಕೇವಲ ಸೋಂಕಿತರಿಗೆ ಕರೆ ಮಾಡಿ ವೈದ್ಯಕೀಯ ಸಲಹೆ ನೀಡಲು ಹಿಂದೆ-ಮುಂದೆ ನೋಡುತ್ತಿರುವ ವಿದ್ಯಾರ್ಥಿಗಳು ಸಮಾಜಕ್ಕೆ ಯಾವ ಸಂದೇಶ ನೀಡಲಿದ್ದಾರೆ. ನಮ್ಮ ಭವಿಷ್ಯದ ಕಥೆ ಏನು? ಎಂದು ಬೇಸರ ವ್ಯಕ್ತಪಡಿಸಿದರು.

ಹೋಮ್ ಐಸೋಲೇಷನ್ ಅತಿದೊಡ್ಡ ಪರಿಹಾರ: ಕೋವಿಡ್ ಸಂದರ್ಭದಲ್ಲಿ ಹೋಮ್ ಐಸೋಲೇಷನ್ ಎನ್ನುವುದು ಅತಿದೊಡ್ಡ ಪರಿಹಾರವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಎಲ್ಲರನ್ನೂ ಆಸ್ಪತ್ರೆಗೆ ಕರೆತಂದು ನಿರ್ವಹಣೆ ಮಾಡೋದು ಬಹಳ ಕಷ್ಟ ಎಂದ ಡಿಸಿಎಂ, ಈ ವ್ಯವಸ್ಥೆ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದರು.

ಎರಡನೇ ಅಲೆ ಬಂದ ಮೇಲೆ ಈವರೆಗೆ 3.6 ಲಕ್ಷ ಜನ ಸೋಂಕಿತರಿಗೆ ಸೇವೆ ಒದಗಿಸಲಾಗಿದೆ. ಇದುವರೆಗೆ 6 ಲಕ್ಷ ಮ್ಯಾನುಯಲ್ ಕಾಲ್‍ಗಳನ್ನು ಮಾಡಲಾಗಿದೆ. 5 ಲಕ್ಷಕ್ಕೂ ಹೆಚ್ಚು ಎಸ್ ಎಂಎಸ್ ಸಂದೇಶಗಳ ಮೂಲಕ ವೈದ್ಯಕೀಯ ಸಲಹೆ ನೀಡಲಾಗಿದೆ. 8,000 ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ  ರೆಫರ್ ಮಾಡಲಾಗಿದ್ದು, 4,700 ಸೋಂಕಿತರನ್ನು ಆಸ್ಪತ್ರೆಗಳಿಗೆ ಕಳಿಸಲಾಗಿದೆ. ಇನ್ನು ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ 1,000ಕ್ಕೂ ಹೆಚ್ಚು ಸೋಂಕಿತರನ್ನು ತಕ್ಷಣವೇ ಆಂಬುಲೆನ್ಸ್ ವ್ಯವಸ್ಥೆ ಮಾಡಿ ತುರ್ತಾಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

Doctor

ಈ ನೆಟ್‍ವರ್ಕ್‍ನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳ ಜತೆಗೆ 800ಕ್ಕೂ ಹೆಚ್ಚು ವೈದ್ಯರು ಕೆಲಸ ಮಾಡುತ್ತಿದ್ದಾರೆ. ವೈದ್ಯಕೀಯ ಮಾನವ ಸಂಪನ್ಮೂಲ ಹಾಗೂ ತಂತ್ರಜ್ಞಾನವನ್ನು ಒಟ್ಟಾಗಿಸಿಕೊಂಡು ಈ ಕೆಲಸ ಮಾಡಲಾಗುತ್ತಿದೆ. ಅನೇಕ ಜೀವಗಳನ್ನು ಉಳಿಸಿದ ತೃಪ್ತಿ ಸರಕಾರಕ್ಕಿದೆ. ಇದರ ಶ್ರೇಯಸ್ಸು ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳೂ ಉಳಿದೆಲ್ಲರಿಗೂ ಸಲ್ಲುತ್ತದೆ ಎಂದರು.

ಮೊದಲ ಅಲೆ ಬಂದಾಗ ಹೋಮ್ ಐಸೋಲೇಷನ್‍ಗೆ ಅವಕಾಶ ಕೊಡಬೇಕೋ ಬೇಡವೋ ಎಂಬ ಗೊಂದಲವಿತ್ತು. ಅದಕ್ಕೆ ಆಕ್ಷೇಪವೂ ಇತ್ತು. ಎರಡನೇ ಅಲೆಯಲ್ಲಿ ಈ ವ್ಯವಸ್ಥೆ ಅತ್ಯುತ್ತವಾಗಿ ಕೆಲಸ ಮಾಡಿದೆ. ಸ್ಟೆಪ್ ಒನ್ ಅನ್ನುವ ಸಂಸ್ಥೆ ಮುಂದೆ ಬಂದು ಇಡೀ ವ್ಯವಸ್ಥೆಯನ್ನು ಅತ್ಯುತ್ತಮವಾಗಿ ರೂಪಿಸಿದೆ ಎಂದು ನುಡಿದರು.

swab1 1280p

ಹಳ್ಳಿ ಕಡೆ ಹೋಮ್ ಐಸೋಲೇಷನ್ ಇಲ್ಲ: ಗ್ರಾಮೀಣ ಭಾಗದಲ್ಲಿ ಈಗ ಹೋಮ್ ಐಸೋಲೇಷನ್ ವ್ಯವಸ್ಥೆಯನ್ನೂ ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಎಲ್ಲರನ್ನೂ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಶಿಫ್ಟ್ ಮಾಡಬೇಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಕೋವಿಡ್ ಕೇರ್ ಸೆಂಟರ್‍ಗಳನ್ನು ಮಾಡಲಾಗಿದೆ. ಕೋವಿಡ್ ನಿರ್ವಹಣೆ ವ್ಯವಸ್ಥೆಯನ್ನು ವಿಕೇಂದ್ರೀಕರಣ ಮಾಡಿ ತಾಲೂಕು ಮಟ್ಟದಲ್ಲಿಯೇ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಸನಿಹದಲ್ಲಿ ಅಥವಾ ಅವರ ತಾಲೂಕಿನಲ್ಲಿಯೇ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವರ್ಚುಯಲ್ ಸಭೆಯಲ್ಲಿ ಹೋಮ್ ಹೈಸೋಲೇಷನ್ ಉಸ್ತುವಾರಿ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರು ಸ್ಟೆಪ್‍ಡೌನ್ ವ್ಯವಸ್ಥೆಯಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿರುವ 10 ವೈದ್ಯರು ಮತ್ತು 10 ವೈದ್ಯ ವಿದ್ಯಾರ್ಥಿಗಳ ಹೆಸರುಗಳನ್ನು ಓದಿದರು. ಅವರ ಸೇವೆಯನ್ನು ಡಿಸಿಎಂ ಶ್ಲಾಘಿಸಿದರು.

TAGGED:BangaloreCoronaCovid 19Medical studentsPublic TVಕೊರೊನಾಕೋವಿಡ್ 19ಡಿಸಿಎಂ ಅಶ್ವತ್ಥ ನಾರಾಯಣಪಬ್ಲಿಕ್ ಟಿವಿ DCM Ashwaththa Narayanaಬೆಂಗಳೂರುವೈದ್ಯ ವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

You Might Also Like

Ayatollah Ali Khamenei 1
Latest

ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಇಸ್ರೇಲ್ ತಯಾರಿ

Public TV
By Public TV
26 minutes ago
ACP Chandan Aishwarya Gowda 2
Bengaluru City

ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Public TV
By Public TV
31 minutes ago
FASTAG
Latest

ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Public TV
By Public TV
33 minutes ago
Gold Suresh
Districts

ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ

Public TV
By Public TV
36 minutes ago
ranya rao 4
Bengaluru City

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಜುಲೈ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿಕೆ

Public TV
By Public TV
51 minutes ago
northrop b 2 spirit stealth bomber 1
Latest

ಇರಾನಿನ ಪರಮಾಣು ಘಟಕದ ಮೇಲೆ ಅಮೆರಿಕ 14 ಸಾವಿರ ಕೆಜಿ ತೂಕದ ಬಾಂಬ್‌ ಹಾಕುತ್ತಾ?

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?