Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಡಿಕೆಶಿ ಅವರೇ ಯಾಕೆ ಜಮೀರ್ ಮನೆ ಮೇಲೆ ದಾಳಿ ಮಾಡಿಸಿರಬಾರದು: ಎಸ್‍ಟಿಎಸ್

Public TV
Last updated: August 6, 2021 11:33 am
Public TV
Share
2 Min Read
DKSHI STS
SHARE

– ಬೆಂಗಳೂರು ಉಸ್ತುವಾರಿ ಆಸೆ ಬಿಚ್ಚಿಟ್ಟ ಸಚಿವರು
– ಡಿಕೆಶಿಗೆ ಇಡಿ, ಐಟಿಯ ಲಿಂಕ್ ಜಾಸ್ತಿ ಬೆಳೆದಿದೆ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಯಾಕೆ ಶಾಸಕ ಜಮೀರ್ ಅಹ್ಮದ್ ಅವರ ಮನೆ ಮೇಲೆ ಇಡಿ ದಾಳಿ ಮಾಡಿಸಿರಬಾರದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದ್ದಾರೆ.

ಇಡಿ ದಾಳಿ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಅವರು ಪದೇ ಪದೇ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎನ್ನುತ್ತಿದ್ದರು. ಇದು ಡಿಕೆ ಶಿವಕುಮಾರ್ ಅವರಿಗೆ ಅಜೀರ್ಣವಾಗಿರಬೇಕು. ಅದು ಅಲ್ಲದೆ ಡಿಕೆಶಿ ಅವರಿಗೆ ಇಡಿ- ಐಟಿಯ ಲಿಂಕ್ ಜಾಸ್ತಿ ಬೆಳೆದಿದೆ. ಅವರೇ ಯಾಕೆ ಜಮೀರ್ ಅವರ ಮನೆ ಮೇಲೆ ದಾಳಿ ಮಾಡಿಸಿರಬಾರದು. ಬಿಜೆಪಿ ಇಂತಹ ದಾಳಿ ಮಾಡಿಸುತ್ತಿದೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. ನಾವು ಡಿಕೆ ಶಿವಕುಮಾರ್ ಅವರ ಮೇಲೆಯೇ ಹೀಗೆ ಬೆರಳು ಮಾಡಬಹುದಲ್ವಾ? ಎಂದು ಹೇಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ZAMEER 1

ಐಟಿ ಮತ್ತು ಇಡಿ ಅವರ ಕೆಲಸ ಅವರು ಮಾಡುತ್ತಾರೆ. ವ್ಯವಹಾರಗಳು ಸರಿಯಿದ್ದಾಗ ಯಾರು ಅದಕ್ಕೆ ಹೆದರುವ ಅಗತ್ಯವಿಲ್ಲ. ಐಟಿ, ಇಡಿ ಕೇಳುವ ದಾಖಲೆ ಕೊಟ್ಟರೆ ಮುಗಿಯಿತು. ಅದನ್ನು ಬಿಟ್ಟು ಇವರು ಬೇರೆ ರೀತಿಯೇ ಮಾತನಾಡುತ್ತಿದ್ದಾರೆ. ಇವರನ್ನು ನೋಡಿದರೆ ಏನೋ ವ್ಯವಹಾರ ಸರಿಯಿಲ್ಲ ಎನಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬಿಎಸ್‍ಪಿಯಿಂದ ನನಗೆ ಮೋಸವಾಗಿದೆ, ನನ್ನಿಂದ ಬಿಎಸ್‍ಪಿಗೆ ಮೋಸ ಆಗಿಲ್ಲ: ಎನ್. ಮಹೇಶ್

ಇದೇ ವೇಳೆ ಮೈಸೂರಿನ ಪ್ರವಾಸಿ ತಾಣಗಳು ತೆರದಿರಬೇಕೋ ಅಥವಾ ಮುಚ್ಚಬೇಕೋ ಎಂಬ ವಿಚಾರವಾಗಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನದೊಳಗೆ ಸಂಪೂರ್ಣ ವರದಿ ಕೊಡುವಂತೆ ಜಿಲ್ಲಾಡಳಿತವನ್ನು ಕೇಳಿದ್ದೇನೆ. ನಾಳೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತಿಳಿಸುತ್ತೇವೆ. ಜನರಿಗೂ ತೊಂದರೆ ಆಗದಂತೆ, ವ್ಯಾಪಾರಸ್ಥರಿಗೆ ಅನಾನುಕೂಲವಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಲಾಕ್‍ಡೌನ್‍ನಿಂದ ಸಾಕಷ್ಟು ನಷ್ಟವಾಗಿವೆ. ಹೀಗಾಗಿ ಏಕಾಏಕಿ ಸಂಪೂರ್ಣ ಮುಚ್ಚುವುದು ಸಹ ಕಷ್ಟವಗುತ್ತೆ. ನಾಳೆ ಇದೆಲ್ಲವನ್ನು ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

STS e1628229763613

ಬೆಂಗಳೂರು ಉಸ್ತುವಾರಿ ಖಾತೆ ಬಗ್ಗೆ ಮಾತನಾಡಿದ ಅವರು, ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ, ಬೆಂಗಳೂರು ಉಸ್ತುವಾರಿ ಬೇಕು. ಸ್ಥಳೀಯ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಈ ಖಾತೆ ನನಗೆ ಅಗತ್ಯವಿದೆ. ಸಿಎಂ ನಿನಗೆ ಯಾವ ಖಾತೆ ಬೇಕು ಎಂದು ನನಗೆ ಕೇಳಿದರೆ ನಾನು ಬೆಂಗಳೂರು ಖಾತೆ ಬೇಕು ಎಂದು ಹೇಳುತ್ತೇನೆ. ಆದರೆ ಅವರು ಕೇಳುವುದಿಲ್ಲ, ನಾನು ಹೇಳುವುದಿಲ್ಲ ಎಂದು ಗೊತ್ತಿದೆ. ನೀವು ಕೇಳುತ್ತಿದ್ದಿರಿ, ನಾನು ಹೇಳುತ್ತಿದ್ದೇನೆ ಅಷ್ಟೇ ಎಂದು ತಮ್ಮ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

TAGGED:bengaluruED raidmysurupoliticsPublic TVST somashekharಇಡಿ ದಾಳಿಎಸ್ ಟಿ ಸೋಮಶೇಖರ್ಪಬ್ಲಿಕ್ ಟಿವಿಬೆಂಗಳೂರು ಉಸ್ತುವಾರಿ ಖಾತೆಮೈಸೂರುರಾಜಕೀಯ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
22 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 minutes ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
30 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
1 hour ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
1 hour ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
2 hours ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?