ಧಾರವಾಡ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಗಳಿಸಿದ್ದು ಸಾರ್ವಜನಿಕರ ಹಣ. ಅವರ ಮೇಲೆ ಎಫ್ಐಆರ್ ದಾಖಲಿಸಬೇಕು. ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಹೇಳಿದರು.
- Advertisement 2
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮೇಲೆ ಎಫ್ಐಆರ್ ದಾಖಲಿಸಿ ಬೇರೆ ಯಾರೂ ಇಂತಹ ಕೆಲಸ ಮಾಡದಂತೆ ಮಾಡಬೇಕು. ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಯ ದಾಳಿ ಮಾಡಿರುವುದು ಬಹಳ ಮಹತ್ವದ ವಿಷಯ. ಅವರ ಪರವಾಗಿ ಈ ಕಾಂಗ್ರೆಸ್ಸಿನವರು ಪ್ರತಿಭಟನೆ ಮಾಡುವುದನ್ನು ಬಂದ್ ಮಾಡಬೇಕು ಎಂದರು.
- Advertisement 3
- Advertisement 4
ಸಚಿವ ಶ್ರೀರಾಮುಲು 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು? ನಾವು ಈಗಾಗಲೇ ಈ ರೀತಿ ಅಕ್ರಮ ಸಂಪಾದನೆ ಮಾಡಿದವರ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೆವೆ ಎಂದರು.