ಬೆಂಗಳೂರು: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ನವೀನ್ ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ನವೀನ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಗಲಭೆಗೆ ಪ್ರಚೋದನೆ ನೀಡಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ನವೀನ್ ಬಂಧನವಾಗಿತ್ತು.
ಆರೋಪಿಯ ಜೀವಕ್ಕೆ ಅಪಾಯವಿದೆ ಅನ್ನೋ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತೆ. ಬಂಧನದಲ್ಲಿಡೋದು ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಬಿ.ಎ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವೀನ್ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಸಂಬಂಧಿಯಾಗಿದ್ದಾನೆ. ಇದನ್ನೂ ಓದಿ: ಗಲಭೆಗೆ ಪ್ರಚೋದಿಸಿದ್ದ ನವೀನ್ಗೆ ಹಿಂದೂ ಹಿರಿಯರೇ ಬುದ್ಧಿ ಹೇಳಬೇಕಲ್ಲಾ?-ಸಿದ್ದರಾಮಯ್ಯ
ನವೀನ್ ಮೆಸೇಜ್ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ. ರಾಜಕೀಯವಾಗಿ ಕಕ್ಷಿದಾರರನ್ನ ಟಾರ್ಗೆಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ವಾದ ಮಂಡಿಸಿದ್ದರು. ನವೀನ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67, ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ನವೀನ್ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ?-ಸಿದ್ದರಾಮಯ್ಯ
ಯಾರು ಈ ನವೀನ್?: ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತ ಈ ನವೀನ್. ಫೇಸ್ಬುಕ್ ಪೋಸ್ಟ್ ನಲ್ಲಿ ಒಂದು ಸಮುದಾಯದ ಬಗ್ಗೆ ನವೀನ್ ಅವಹೇಳನಕಾರಿಯಾಗಿ ಬರೆದುಕೊಂಡಿದ್ದರಿಂದ ಉದ್ರಿಕ್ತಗೊಂಡ ಗುಂಪು ಕಾವಲಬೈರಸಂದ್ರದಲ್ಲಿರುವ ಶಾಸಕರ ಮನೆಯ ಮೇಲೆ ದಾಳಿ ನಡೆಸಿತ್ತು. ಇದೀಗ ಸಿದ್ದರಾಮಯ್ಯ ಗಲಭೆಗೆ ಪ್ರಚೋದನೆ ನೀಡಿದ್ದು ನವೀನ್ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಇದನ್ನೂ ಓದಿ: ಮತಾಂಧ ಮುಸ್ಲಿಮರಿಗೆ ಡಿಕೆಶಿ ಬೆಂಬಲ ಇದೆ ಅನ್ನಿಸುತ್ತೆ: ಸಚಿವ ಕೆ.ಎಸ್.ಈಶ್ವರಪ್ಪ