Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಬಿಟಿ ಮೊಬೈಲ್ ಅಪ್ಲಿಕೇಷನ್‍ಗೆ ಮುಖ್ಯಮಂತ್ರಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಬಿಟಿ ಮೊಬೈಲ್ ಅಪ್ಲಿಕೇಷನ್‍ಗೆ ಮುಖ್ಯಮಂತ್ರಿ ಚಾಲನೆ

Bengaluru City

ಡಿಬಿಟಿ ಮೊಬೈಲ್ ಅಪ್ಲಿಕೇಷನ್‍ಗೆ ಮುಖ್ಯಮಂತ್ರಿ ಚಾಲನೆ

Public TV
Last updated: June 10, 2021 12:03 pm
Public TV
Share
3 Min Read
BSY 3
SHARE

– 12 ಸಾವಿರ ಕೋಟಿ ರೂ.ಗೂ ಅಧಿಕ ನೆರವು ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ ‘ಡಿ.ಬಿ.ಟಿ’ ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದರು.

BSY 1 1 medium

ರಾಜ್ಯದಲ್ಲಿ ಈವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.

BSY 1 4 medium

ಕೋವಿಡ್-19ರ ಮೊದಲನೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್‍ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿಬಿಟಿ ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

BSY 1 2 medium

ಈ ವೇದಿಕೆಯು ಫಲಾನುಭವಿಯನ್ನು ಆಧಾರ್ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಯ ಆಧಾರ್ ಅನ್ನು ಆರ್ಥಿಕ ವಿಳಾಸವಾಗಿ (Financial Address) ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು. ಬ್ಯಾಂಕ್ ಖಾತೆಗೆ ಆಧಾರ್ ಜೋಡನೆ ಮಾಹಿತಿಯು ಯು.ಐ.ಡಿ.ಐ. ಜಾಲತಾಣದಲ್ಲಿ ಮಾತ್ರ ಲಭ್ಯವಿದ್ದು ನಾಗರಿಕರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ ಬಗ್ಗೆ ತಿಳಿದುಕೊಳ್ಳಲು ಕಷ್ಟವಾಗಿತ್ತು. ನಾಗರಿಕರ ಆಧಾರ್ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ ಇದ್ದಲ್ಲಿ ರಾಜ್ಯ ಸರ್ಕಾರವು ನಗದು ಸೌಲಭ್ಯ ವರ್ಗಾವಣೆಗೆ ಬಳಸುತ್ತಿರುವ ಆಧಾರ್ ಆಧಾರಿತ ನಗದು ವರ್ಗಾವಣೆ ವ್ಯವಸ್ಥೆ (Aadhaar Based Payment System) ಮೂಲಕ ಹಣ ಪಡೆಯಲು ಸಾಧ್ಯವಾಗುವುದಿಲ್ಲ.

BSY 1 3 medium

ಬಹಳಷ್ಟು ನಾಗರಿಕರಿಗೆ ತಮ್ಮ ಯಾವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಇದರಿಂದ ಸರ್ಕಾರವು ಯಾವ ಬ್ಯಾಂಕ್ ಖಾತೆಗೆ ನಗದು ಸೌಲಭ್ಯವನ್ನು ಜಮೆ ಮಾಡಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲು ಇವರುಗಳಿಗೆ ಬಹಳ ಕಷ್ಟವಾಗುತ್ತದೆ. ಅಲ್ಲದೆ ಇತ್ತೀಚೆಗೆ ರಾಜ್ಯ ಸರ್ಕಾರವು ನಾಗರಿಕರಿಂದ ಯಾವುದೇ ಅರ್ಜಿ ಪಡೆಯದೇ ಅರ್ಹತೆ ಆಧಾರದ ಮೇಲೆ ನಗದು ವರ್ಗಾವಣೆಯನ್ನು ಮಾಡುತ್ತಿರುವುದರಿಂದ ಇವರುಗಳಿಗೆ ಹಣ ಬ್ಯಾಂಕ್ ಖಾತೆಯಲ್ಲಿ ಜಮೆಯಾಗುವ ಬಗ್ಗೆಯು ಮಾಹಿತಿ ಲಭ್ಯ ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಡಿ.ಬಿ.ಟಿ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಆ್ಯಪ್ ಅನ್ನು ನಾಗರೀಕರು ಹೆಚ್ಚು-ಹೆಚ್ಚಾಗಿ ಬಳಸಿದಾಗ ಪಾರದರ್ಶಕತೆ ಇರುವ ಸರ್ಕಾರದ ಉದ್ದೇಶ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ನಾಗರೀಕರು ಈ ಆ್ಯಪ್‍ನ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ವರ್ಗಾವಣೆಯಾಗಿರುವ ನಗದು ವಿವರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

f6ecefa8 8a39 42ec 8ccb 0fd84362a061 medium

ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಇ-ಆಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಡಿಬಿಟಿ ಯೋಜನಾ ನಿರ್ದೇಶಕ ಶ್ರೀವತ್ಸ, ಎನ್.ಐ.ಸಿ ಉಪ ನಿರ್ದೇಶಕರಾದ ಜಯಂತಿ ಮತ್ತಿತರರು ಉಪಸ್ಥಿತರಿದ್ದರು.

ಡಿ.ಬಿ.ಟಿ ಅಪ್ಲಿಕೇಷನ್ ಬಗ್ಗೆ: ಈ ಆ್ಯಪ್‍ನ್ನು ಗೂಗಲ್ ಪ್ಲೇ-ಸ್ಟೋರ್ನ ಮೂಲಕ ಡೌನ್‍ಲೋಡ್ ಮಾಡಿಕೊಂಡು, ಆಧಾರ್ e-ಕೆವೈಸಿ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಆ್ಯಪ್ NPCI (National Payment Corporation of India) ಗೆ ಸಂಪರ್ಕಿಸಿ ಆಧಾರ್ ಬ್ಯಾಂಕ್ ಸೀಡಿಂಗ್ನ ಪ್ರಸ್ತುತ ಸ್ಥಿತಿಯನ್ನು ನೀಡುತ್ತದೆ. ಡಿ.ಬಿ.ಟಿ ಮೊಬೈಲ್ ಆಪ್ ಯೋಜನೆವಾರು ವಿವಿಧ ಕಂತುಗಳಲ್ಲಿ ವರ್ಗಾಹಿಸಿದ ಪಾವತಿ ಮೊತ್ತ, ಪಾವತಿ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಯು.ಟಿ.ಆರ್ ಸಂಖ್ಯೆಯನ್ನು ಒದಗಿಸುತ್ತದೆ.

TAGGED:bengalurubs yeddyurappamobile applicationPublic TVWBTಡಿಬಿಟಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಮೊಬೈಲ್ ಅಪ್ಲಿಕೇಷನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
38 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
1 hour ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
1 hour ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?