ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಕೊರೊನಾ ವೈರಸ್ ತಾಂಡವಾಡುತ್ತಿದ್ದು, ಪ್ರತಿ ದಿನ ಅನೇಕ ಮಂದಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಅಣ್ಣನ ಮಗ ಕೂಡ ಮಾಹಾಮಾರಿಗೆ ಬಲಿಯಾಗಿದ್ದಾರೆ.
ವಿನೋದ ಪರಪ್ಪ ಸವದಿ(36) ಕೊರೊನಾಗೆ ಬಲಿಯಾದವರು. ಇವರು ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಪುತ್ರ.
ಕಳೆದ ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನೋದ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.