Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ

Bengaluru City

ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ

Public TV
Last updated: February 26, 2021 8:20 pm
Public TV
Share
3 Min Read
sdpi
SHARE

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕೇಂದ್ರದ ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಸಲ್ಲಿಸಿರುವ ಚಾರ್ಜ್‍ಶೀಟ್ ಪೂರ್ವ ನಿರ್ದೇಶಿತ ಮತ್ತು ಎಸ್​​ಡಿಪಿಐ ಪಕ್ಷವನ್ನು ಗುರಿಯಾಗಿಸಿ ರಚಿಸಿರುವುದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್ ಆರೋಪಿಸಿದ್ದಾರೆ.

DJ Halli Bengaluru Riots

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಜೀದ್ ಖಾನ್, ಈ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸಂಘಪರಿವಾರದ ಒತ್ತಡದಿಂದ ಕೇಂದ್ರ ಬಿಜೆಪಿ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐ ಎ ಯನ್ನು ಕಳುಹಿಸಿತ್ತು. ಬಿಜೆಪಿ ಸರಕಾರದ ನಿರ್ದೇಶನದಂತೆ ಎನ್‍ಐಎ ದೆಹಲಿಯಿಂದಲೇ ಎಸ್ ಡಿಪಿಐ ವಿರುದ್ಧ ಎಫ್ ಐಆರ್ ದಾಖಲಿಸಿ ಬಂದಿತ್ತು. ಈ ಬಗ್ಗೆ ಕಳೆದ ಆರು ತಿಂಗಳಿನಲ್ಲಿ 2000ಕ್ಕೂ ಹೆಚ್ಚು ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿತ್ತು. ಈ ಪೈಕಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್, ಜೆಡಿಎಸ್ ಮತ್ತಿತರ ಪಕ್ಷಗಳ ಮುಖಂಡರುಗಳು ನೇರ ಹೊಣೆಗಾರರು ಹಾಗೂ ಇದರಲ್ಲಿ ರಾಜಕೀಯ ಷಡ್ಯಂತ್ರ ಇದೆ ಎಂದು ಸ್ವತಃ ಅಲ್ಲಿಯ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ತನಿಖೆ ನಡೆಸಿದ ಸಿಸಿಬಿ ಹೇಳಿಕೆ ನೀಡಿರುವುದು ವರದಿಯಾಗಿದ್ದರೂ ತಪ್ಪಿತಸ್ಥರು ಸುಲಭವಾಗಿ ಜಾಮೀನಿನಲ್ಲಿ ಬಿಡುಗಡೆ ಹೊಂದಿರುವುದನ್ನು ಗಮನಿಸಿದರೆ ಅಮಾಯಕರನ್ನು ಸಿಲುಕಿಸಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ಸ್ಪಷ್ಟವಾಗುತ್ತದೆ ಎಂದಿದ್ದಾರೆ.

DJ HALLI 1 1 medium

ಜಾಗತಿಕವಾಗಿ ತುಂಬಾ ಗೌರವಿಸಲ್ಪಡುವ ಪ್ರವಾದಿ ಮೊಹಮ್ಮದ್(ಸ.ಅ)ರವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಘಪರಿವಾರದ ಕಾರ್ಯಕರ್ತ ನವೀನ್ ಎಂಬಾತನ ಕೃತ್ಯದಿಂದ ಈ ಹಿಂಸಾಚಾರ ನಡೆದಿತ್ತು ಎಂಬುದು ವಾಸ್ತವ. ಆದರೂ ನವೀನ್ ನ ಮೇಲೆ ದುರ್ಬಲ ಕೇಸು ಹಾಕುವ ಮೂಲಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಮಾಜಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಫೈರೋಜ್ ಎಂಬಾತನನ್ನು ಯುಎಪಿಎ ಕೇಸಿನಲ್ಲಿ ಮುಖ್ಯ ಆರೋಪಿ ಮಾಡಲಾಗಿದೆ. ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಧಾರ್ಮಿಕ ಭಾವನೆಗಳ ಬಗ್ಗೆ ಆರೋಪ-ಪ್ರತ್ಯಾರೋಪ ಹಾಕಿ ಕೊಂಡವರಾಗಿದ್ದಾರೆ. ಒಟ್ಟು ಹಿಂಸಾಚಾರದ ಮುಖ್ಯ ಕಾರಣ ಈ ಫೇಸ್ಬುಕ್ ಪೋಸ್ಟ್ ಗಳು ಎಂದು ತನಿಖಾಧಿಕಾರಿಗಳು ವರದಿ ಮಾಡಿದ್ದಾರೆ. ಆದರೆ ಇಲ್ಲಿ ಧರ್ಮಧಾರಿತ ತಾರತಮ್ಯ ನಡೆದಿರುವುದು ಕಾನೂನು ಬಾಹಿರವಾಗಿದೆ ಎಂದು ವಾಗ್ದಾಲಿ ನಡೆಸಿದ್ದಾರೆ.

KJ HALLI

ಎನ್ ಐಎ ತನಿಖಾಧಿಕಾರಿಗಳು ಈ ಪ್ರಕರಣದಲ್ಲಿ ಆರಂಭದಿಂದಲೂ ನೇರವಾಗಿ ಎಸ್ ಡಿಪಿಐ ಯನ್ನು ಸಿಲುಕಿಸಲು ಪ್ರಯತ್ನಪಟ್ಟಿದ್ದಾರೆ. ಇದೇ ರೀತಿ ಭೀಮಾಕೋರೆಗಾವ್ ಹೋರಾಟ ಮಾಡಿದ ದಲಿತ ಹಾಗೂ ಪ್ರಗತಿಪರರ ಮೇಲೆ ಕೇಸು ಜಡಿಯಲಾಗಿತ್ತು. ದೆಹಲಿಯಲ್ಲಿ ಸಿಎಎ ಹಾಗೂ ಎನ್ ಆರ್ ಸಿ ಪ್ರತಿಭಟನೆ ಮಾಡಿದ ನೂರಾರು ವಿದ್ಯಾರ್ಥಿಗಳನ್ನು ದೇಶದ್ರೋಹ ಕಾನೂನಿನಡಿ ಬಂಧಿಸಲಾಗುತ್ತಿದೆ. ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು ಮತ್ತು ಆರ್ ಎಸ್ ಎಸ್ ನ ಫ್ಯಾಸಿಸ್ಟ್ ಸಿದ್ಧಾಂತದ ವಿರುದ್ಧ ಧ್ವನಿ ಎತ್ತುತ್ತಿರುವ ಪ್ರಗತಿಪರರನ್ನು, ರೈತರನ್ನು, ವಿದ್ಯಾರ್ಥಿಗಳನ್ನು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಳೆದ ಆರು ವರ್ಷಗಳಿಂದ ಮೋದಿ ಸರಕಾರ ಯುಎಪಿಎ, ಎನ್ ಎಸ್ ಎ ಹಾಗೂ ದೇಶದ್ರೋಹದಂತಹ ಕರಾಳ ಕೇಸುಗಳನ್ನು ಹಾಕಿ ಹಿಂಸಿಸುತ್ತಿರುವುದು ಖಂಡನೀಯ. ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ನುಡಿದರು.

KJ HALLI 6

ಬೆಂಗಳೂರು ಹಿಂಸಾಚಾರದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‍ರವರು ಬಿಡುಗಡೆಗೊಳಿಸಿದ ಸ್ವತಂತ್ರ ಬುದ್ಧಿಜೀವಿಗಳ ಸತ್ಯಶೋಧನಾ ವರದಿಯಲ್ಲಿ ರಾಜ್ಯ ಸರಕಾರದ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ಹಿಂಸಾಚಾರ ನಡೆದಿದೆ ಹಾಗೂ ತನಿಖಾ ಸಂಸ್ಥೆಗಳು ಎಸ್ ಡಿಪಿಐ ಪಕ್ಷವನ್ನು ಮತ್ತು ನಿರ್ದಿಷ್ಟ ಸಮುದಾಯವನ್ನು ಗುರಿ ಪಡಿಸುತ್ತಿರುವುದು ಸರಿಯಲ್ಲ ಎಂದು ಉಲ್ಲೇಖಿಸಲಾಗಿದೆ. ಆದರೆ ಸಂಘಪರಿವಾರ ಪ್ರಾಯೋಜಿತ ಸತ್ಯಶೋಧನಾ ವರದಿಯನ್ನೇ ಎನ್ ಐಎ ಆರೋಪಪಟ್ಟಿಯಲ್ಲಿ ನಕಲಿಸಲಾಗಿದೆ. ಈ ಬಗ್ಗೆ ಹಿಂಸಾಚಾರ ನಡೆದ ಮರುದಿನವೇ ಎಸ್ ಡಿಪಿಐ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಎನ್ ಐಎ ತನಿಖೆಯನ್ನು ಗಮನಿಸಿದರೆ ಕೆಲವು ನಿಷ್ಪಕ್ಷ ತನಿಖಾಧಿಕಾರಿಗಳ ಮೇಲೆ ನಿರ್ದಿಷ್ಟ ಪಕ್ಷ ಮತ್ತು ಸಮುದಾಯವನ್ನು ತೇಜೋವಧೆ ಮಾಡುವ ರೀತಿಯಲ್ಲಿ ವರದಿ ಮಾಡುವಂತೆ ಒತ್ತಡ ಹೇರಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿರಪರಾಧಿಗಳ ಪರ ಕಾನೂನಾತ್ಮಕ ಹೋರಾಟದಲ್ಲಿ ಮುಂಚೂಣಿಯಲ್ಲಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

TAGGED:BangalorebjpDJ hallikg halliPublic TVSDPIಎಸ್ ಡಿಪಿಐಕೆಜಿ ಹಳ್ಳಿಡಿಜೆ ಹಳ್ಳಿಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
17 minutes ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
22 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
51 minutes ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
1 hour ago
Raichur Mother Murder By Son copy
Crime

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

Public TV
By Public TV
2 hours ago
Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?