ತಂದೆ ಬಿಎಸ್‍ವೈ ಆರೋಗ್ಯಕ್ಕಾಗಿ ಮಗ ರಾಘವೇಂದ್ರ ದೇವರಲ್ಲಿ ಪ್ರಾರ್ಥನೆ

Public TV
1 Min Read
SMG BSY

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆರೋಗ್ಯಕ್ಕಾಗಿ ರಾಜ್ಯದೆಲ್ಲೆಡೆ ಅಭಿಮಾನಿಗಳು ಪೂಜೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಸಿಎಂ ಪುತ್ರ ಬಿ.ವೈ ರಾಘವೇಂದ್ರ ಕೂಡ ತಂದೆ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ, ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಚ್ಚಿನ ಮುಖ್ಯಮಂತ್ರಿಗಳು ಸಾಧ್ಯವಾದಷ್ಟು ಶೀಘ್ರವಾಗಿ ಗುಣಮುಖರಾಗಿ ಪುನಃ ಸಕ್ರಿಯ ರಾಜಕಾರಣದಲ್ಲಿ ಮರಳಲೆಂದು ಹುಚ್ಚರಾಯಸ್ವಾಮಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆನು ಎಂದು ಬರೆದುಕೊಂಡಿದ್ದಾರೆ.

SMG 1 1

ನಿನ್ನೆ ರಾತ್ರಿ ಟ್ವೀಟ್ ಮಾಡಿರುವ ಬಿಎಸ್‍ವೈ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದರು.

ಸದ್ಯ ಎಚ್‍ಎಎಲ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ, ರಾಮಾಯಣ, ಮಹಾಭಾರತ ಪುಸ್ತಕಗಳನ್ನು ಓದುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *