ತಂದೆ ಶವ ಸಂಸ್ಕಾರಕ್ಕೆ ಹೂ ತರಲು ಹೋದ ಮಗ ದುರ್ಮರಣ

Public TV
1 Min Read
karwara accident

– ಬಸ್, ಬೈಕ್ ನಡುವೆ ಡಿಕ್ಕಿಯಿಂದ ಪ್ರಾಣ ಬಿಟ್ಟ ಯುವಕರು

ಕಾರವಾರ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ನಗರದ ಎಸ್‍ಬಿಐ ಸರ್ಕಲ್ ಬಳಿ ನಡೆದಿದೆ.

karwara accident3

ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತರಗಿದ್ದಾರೆ. ಇಬ್ಬರು ಯುವಕರು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಬಸ್ ಬಂದು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದಾರೆ.

karwara accident7

ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‍ನಲ್ಲಿದ್ದ ಯುವಕರಿಬ್ಬರು ಬಸ್ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *