ಚೆನ್ನೈ: ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ದೇಶ ನಲುಗುತ್ತಿದ್ದು, ಹಲವಾರು ಮಂದಿ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಚಿತ್ರರಂಗದ ಗಣ್ಯರು ಕೂಡ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ನಟ ಸೂರ್ಯ ಹಾಗೂ ಅವರ ಸಹೋದರ ತಮಿಳುನಾಡು ಸರ್ಕಾರಕ್ಕೆ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ.
- Advertisement 2
ಹೌದು. ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ತಮಿಳುನಾಡು ಮುಖ್ಯಮಂತ್ರಿ ಫಂಡ್ ಗೆ 1 ಕೋಟಿ ರೂ. ಚೆಕ್ ಹಸ್ತಾಂತರಿಸಿದ್ದಾರೆ.
- Advertisement 3
- Advertisement 4
ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಟ್ಯಾಲಿನ್ ಭೇಟಿ ಮಾಡಿರುವ ಸೂರ್ಯ ಹಾಗೂ ಕಾರ್ತಿ, ಜನರ ಪ್ರಾಣ ಉಳಿಸಲಿ ಸರ್ಕಾರ ಸಾಕಷ್ಟು ಪ್ರಯತ್ನ ಪಡುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಕಡೆಯಿಂದ ಸರ್ಕಾರಕ್ಕೆ ಸಣ್ಣ ಸಹಾಯ ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಅಂತೆಯೇ 1 ಕೋಟಿ ರೂ, ಚೆಕ್ ನೀಡಿ ಅವಶ್ಯಕತೆ ಇದ್ದವರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಿ ಎಂದು ಕೇಳಿಕೊಂಡಿದ್ದಾರೆ.
ಮೇ 11 ರಂದು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ಸಾರ್ವಜನಿಕರು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು. ಆ ಹಣವನ್ನು ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.