ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್.ಸುರೇಶ್ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶಿವಮೊಗ್ಗದ ನವಸಂಜೀವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸದ್ಯ ಹೋಮ್ ಐಸೋಲೇಶನ್ಗೆ ಒಳಗಾಗಿದ್ದಾರೆ.
- Advertisement 2
ಕಳೆದ ಸೋಮವಾರ ಬೆಂಗಳೂರಿಗೆ ಹೋಗಿ ಬಂದಿದ್ದ ಶಾಸಕ ಸುರೇಶ್, ಆರು ದಿನಗಳಿಂದ ಕ್ಷೇತ್ರದಲ್ಲೇ ಇದ್ದರು. ಹಬ್ಬ ಕಳೆದ ಮರುದಿನದಿಂದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇದೀಗ ಸುರೇಶ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸ್ವತಃ ಶಾಸಕ ಸುರೇಶ್ ಮನವಿ ಮಾಡಿದ್ದಾರೆ.
- Advertisement 3
- Advertisement 4
ಶುಕ್ರವಾರ ಅಜ್ಜಂಪುರ ತಾಲೂಕಿನಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ನನಗೆ ಸ್ವಲ್ಪ ಮೈ ಹುಷಾರಿಲ್ಲ ಎಂದು ಹೇಳಿದ್ದರಂತೆ. ಅಜ್ಜಂಪುರ ತಾಲೂಕಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 60-70 ಜನ ಭಾಗವಹಿಸಿದ್ದರು. ಇಂದು ಕೊರೊನಾ ಧೃಡಪಟ್ಟಿದ್ದು, ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲೇ ಐಸೋಲೇಶನ್ನಲ್ಲಿದ್ದಾರೆ. ಅವರ ಅಭಿಮಾನಿಗಳು ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ.