Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಯಿ, ಮಗನ ಕೊಲೆ ಪ್ರಕರಣ ಬೇಧಿಸಿದ ಸಾಗರ ಪೊಲೀಸರು- ಆರೋಪಿ ಮೇಲೆ ಫೈರಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಾಯಿ, ಮಗನ ಕೊಲೆ ಪ್ರಕರಣ ಬೇಧಿಸಿದ ಸಾಗರ ಪೊಲೀಸರು- ಆರೋಪಿ ಮೇಲೆ ಫೈರಿಂಗ್

Crime

ತಾಯಿ, ಮಗನ ಕೊಲೆ ಪ್ರಕರಣ ಬೇಧಿಸಿದ ಸಾಗರ ಪೊಲೀಸರು- ಆರೋಪಿ ಮೇಲೆ ಫೈರಿಂಗ್

Public TV
Last updated: October 20, 2020 8:10 pm
Public TV
Share
2 Min Read
SMG MURDER copy
SHARE

ಶಿವಮೊಗ್ಗ: ಜಿಲ್ಲೆಯ ಪೊಲೀಸರ ಗನ್ ಮತ್ತೆ ಸದ್ದು ಮಾಡಿದೆ. ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಬಲಗಾಲಿಗೆ ಗುಂಡು ಹೊಡೆದಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿ ಸಮೀಪ ನಡೆದಿದೆ.

ಪೊಲೀಸರ ಗುಂಡೇಟಿಗೆ ಒಳಗಾದ ಆರೋಪಿ ಭರತ್ ಇದೀಗ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

smg double murder

ಪ್ರಕರಣದ ವಿವರ: ಅ.11 ರಂದು ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ತಾಯಿ ಬಂಗಾರಮ್ಮ (60) ಹಾಗೂ ಆಕೆಯ ಪುತ್ರ ಪ್ರವೀಣ್ (35)ನನ್ನು ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಕೊಲೆ ಮಾಡಲಾಗಿತ್ತು. ಅಂದು ಮೃತ ಪ್ರವೀಣನ ಪತ್ನಿ ಹಾಗೂ 10 ತಿಂಗಳ ಮಗುವಿನ ಎದುರಿನಲ್ಲಿಯೇ ಇಬ್ಬರನ್ನು ಕೊಲೆ ಮಾಡಲಾಗಿತ್ತು. ಆದರೆ ಕೊಲೆಗೆ ನಿಖರ ಕಾರಣ ಗೊತ್ತಾಗಿರಲಿಲ್ಲ.

ಘಟನೆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ಹಾಗೂ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಈ ಘಟನೆ ಪೊಲೀಸರಿಗೆ ತಲೆ ನೋವಾಗಿತ್ತು. ಕೊಲೆ ಏಕೆ ನಡೆದಿದೆ ಎಂಬ ಅನುಮಾನ ಕಾಡಲಾರಂಭಿಸಿತ್ತು. ಕೊಲೆಯಾದವರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು. ಅಷ್ಟೊಂದು ಸ್ಥಿತಿವಂತರಲ್ಲ. ಜೊತೆಗೆ ಕೊಲೆ ಮಾಡಿದ ನಂತರ ಮನೆಯಿಂದ ಯಾವ ವಸ್ತುವನ್ನು ತೆಗೆದುಕೊಂಡು ಹೋಗಿಲ್ಲ. ಅಲ್ಲದೇ ಮನೆಯಲ್ಲಿಯೇ ಇದ್ದ ಹತ್ಯೆಯಾದ ಪ್ರವೀಣನ ಪತ್ನಿ ಹಾಗೂ ಆತನ ಮಗುವನ್ನು ಏನು ಮಾಡಿಲ್ಲ.

vlcsnap 2020 10 11 17h21m22s154

ಕೊಲೆ ಏಕೆ ನಡೆದಿದೆ ಎಂಬುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿತ್ತು. ಈಗಾಗೀ ಪ್ರಕರಣ ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ಅವರು ಪ್ರಕರಣದ ತನಿಖೆ ನಡೆಸಲು ವಿಶೇಷ ಪೊಲೀಸ್ ತಂಡ ರಚಿಸಿದ್ದರು. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಮೊದಲಿಗೆ ಹತ್ಯೆಯಾದ ಪ್ರವೀಣನ ಪತ್ನಿ ಮೇಲೆಯೇ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಈಕೆಗೆ ಏನಾದರೂ ಬೇರೆ ಸಂಬಂಧ ಇದೆಯಾ? ಇದಕ್ಕಾಗಿ ಏನಾದರೂ ಕೊಲೆ ನಡೆದಿದೆಯಾ? ಎಂದು ವಿಚಾರಣೆ ನಡೆಸಿದ್ದರು. ಆದರೆ ಪೊಲೀಸರ ಮೊದಲ ಅನುಮಾನಕ್ಕೆ ತನಿಖೆ ವೇಳೆ ಯಾವುದೇ ಪೂರಕ ಸಾಕ್ಷಿ ಲಭಿಸಿರಲಿಲ್ಲ.

vlcsnap 2020 10 11 17h21m49s155

ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಕೊಲೆ ಬೇರೆಯದ್ದೆ ವಿಷಯ ಇದೆ ಎಂಬ ಮಾಹಿತಿ ದೊರೆಯಿತು. ಕೊಲೆಯಾದ ಪ್ರವೀಣನಿಗೆ ಈ ಹಿಂದೆ ಬೇರೆ ಯುವತಿ ಜೊತೆ ಪ್ರೀತಿ ಇತ್ತು. ಆದರೆ ಪ್ರವೀಣ ಆಕೆಗೆ ಕೈಕೊಟ್ಟು ರೋಹಿಣಿಯನ್ನು ವಿವಾಹವಾಗಿ ಸಂಸಾರ ನಡೆಸುತ್ತಿದ್ದ. ಇದಕ್ಕೆ ಮಾಜಿ ಪ್ರೇಯಸಿ ಪ್ರವೀಣನ ವಿರುದ್ಧ ಕೋಪಗೊಂಡಿದ್ದಳು ಎನ್ನಲಾಗಿದೆ. ಈಗಾಗಿ ತನ್ನ ಮತ್ತೊಬ್ಬ ಪ್ರಿಯಕರ ಭರತ್‍ನನ್ನು ಬಳಸಿಕೊಂಡು ಪ್ರವೀಣ ಹಾಗೂ ಆತನ ತಾಯಿ ಬಂಗಾರಮ್ಮ ಇಬ್ಬರನ್ನು ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ.

vlcsnap 2020 10 11 17h22m08s104

ಈಗಾಗಿ ಆರೋಪಿ ಭರತ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆದಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಇಂದು ಆರೋಪಿ ಭರತ್ ನನ್ನು ಮಹಜರ್ ನಡೆಸಲು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಮಹಜರ್ ನಡೆಸಿ ವಾಪಸ್ ಬರುವ ವೇಳೆ ಆರೋಪಿ ಭರತ್ ಮೂತ್ರ ವಿಸರ್ಜನೆ ಮಾಡುವುದಾಗಿ ಪೊಲೀಸರ ಬಳಿ ಹೇಳಿ ಜೀಪಿನಿಂದ ಕೆಳಗಡೆ ಇಳಿದು ಹೋಗಿದ್ದಾನೆ. ಪೊಲೀಸ್ ಕಾನ್ಸ್‍ಟೇಬಲ್ ಒಬ್ಬರು ಸಹ ಈತನನ್ನು ಹಿಂಬಾಲಿಸಿದ್ದರು. ಆರೋಪಿ ಭರತ್ ಪೊಲೀಸರನ್ನು ತಳ್ಳಿ ಹಲ್ಲೆ ಮಾಡಲು ಯತ್ನಿಸಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿಯೇ ಇದ್ದ ಡಿಸಿಆರ್ ಬಿ ಇನ್ಸ್ ಪೆಕ್ಟರ್ ಕುಮಾರ್ ಸ್ವಾಮಿ ಅವರು ಆರೋಪಿ ಭರತ್‍ನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಿಂದ ಗಾಯಗೊಂಡಿರುವ ಆರೋಪಿ ಭರತ್‍ನನ್ನು ಸಾಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Police Jeep

TAGGED:firinghospitallovepolicePublic TVSagara Rural Policeshivamoggaಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಪ್ರೀತಿಫೈರಿಂಗ್ಶಿವಮೊಗ್ಗಸಾಗರ ಗ್ರಾಮಾಂತರ ಪೊಲೀಸ್
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
52 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?