Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತುಂಬಿ ಹರಿದ ಸೀತಾನದಿ- ಬ್ರಹ್ಮಾವರದಲ್ಲಿ ಅಣೆಕಟ್ಟು ಜಲಾವೃತ

Public TV
Last updated: September 20, 2020 4:19 pm
Public TV
Share
2 Min Read
UDP Rain Flood
SHARE

-ಕೊಡಗಿನಲ್ಲಿ ಮತ್ತೆ ಪ್ರವಾಹದ ಆತಂಕ

ಉಡುಪಿ/ಕೊಡಗು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ಕೊಡಗಿನ ಜನತೆಗೆ ಆಗಸ್ಟ್ ನಲ್ಲಿ ಸಂಭವಿಸಿದ ಪ್ರವಾಹ ಮತ್ತೆ ಮರುಕಳಿಸಿದರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಕೊಡಗು ಭಾಗದಲ್ಲಿ ಮಳೆಯಾಗುತ್ತಿದ್ದು, ಜನ ಪ್ರವಾಹದ ಆತಂಕದಲ್ಲಿದ್ದಾರೆ.

UDP Rain 6

ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಬ್ರಹ್ಮಾವರ ತಾಲೂಕಿನ ಸೀತಾನದಿ ವಿಪರೀತ ಮಟ್ಟ ತಲುಪಿದ್ದು ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿಯುತ್ತಿದೆ. ಸುತ್ತಮುತ್ತಲಿನ ಮನೆ ಕೃಷಿ ಭೂಮಿ ಭತ್ತದ ಬೇಸಾಯದ ಗದ್ದೆಗಳಿಗೆ ನೀರು ನುಗ್ಗಿದೆ. ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು ಮುಳುಗಡೆಯಾದ ಪ್ರದೇಶಗಳ ಜನರ ರಕ್ಷಣೆ ಮಾಡಲಾಗಿದೆ. ಸ್ಥಳೀಯ ನಾಡದೋಣಿ ಮೀನುಗಾರಿಕೆ ,ಮರಳುಗಾರಿಕೆ ನಡೆಸುವವರ ದೋಣಿ ಬಳಸಿ ಜನರನ್ನು ಎತ್ತರ ಪ್ರದೇಶಗಳಿಗೆ ಕರೆದುಕೊಂಡು ಬರಲಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಓ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿಕೊಟ್ಟು ಜನರಿಗೆ ಶಾಲೆ ದೇವಸ್ಥಾನಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.

UDP RAIN 3 1

ತುಂಬಿದ ನದಿಗಳು: ಉಡುಪಿ ತಾಲೂಕಲ್ಲಿ ಕಳೆದ 24 ತಾಸುಗಳಲ್ಲಿ 316 ಮಿಲಿ ಮೀಟರ್ ಮಳೆ ಬಿದ್ದಿದೆ. ಉಡುಪಿ ತಾಲೂಕು ಒಂದರಲ್ಲಿಯೇ ಇಷ್ಟು ಪ್ರಮಾಣದ ಮಳೆ ಸುರಿದಿದೆ. ಶನಿವಾರ ಮಧ್ಯಾಹ್ನದಿಂದ ಉಡುಪಿಯಲ್ಲಿ ಹನಿ ನಿಲ್ಲದೆ ಮಳೆಯಾಗಿದೆ. ನಿರಂಂತರವಾಗಿ ಸುರಿದ ಮಳೆಗೆ ಉಡುಪಿ ನಗರವೂ ಸೇರಿದಂತೆ, ಸುತ್ತಮುತ್ತಲ ಗ್ರಾಮಗಳಲ್ಲಿ ತೀವ್ರ ನೆರೆ ಏರಿದೆ.ಸ್ವರ್ಣಾ, ಸೀತಾ, ಮಡಿಸಾಲು, ಉದ್ಯಾವರ, ಶಾಂಭವಿ, ಪಾಪನಾಶಿನಿ, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ನಗರದ ಮಧ್ಯಭಾಗದಲ್ಲಿ ಹರಿಯುವ ಇಂದ್ರಾಣಿ ನದಿಯೂ ಅಪಾಯದ ಮಟ್ಟವನ್ನು ಮೀರಿದೆ. ಉಡುಪಿ, ಕಾರ್ಕಳ ಭಾಗದಲ್ಲಿ ಮುಸಲಧಾರೆ ಮುಂದುವರಿದಿದೆ.

UDP RAIN 1 1

ದಾಖಲೆ ಮಳೆ: ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 197 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ ಅತ್ಯಧಿಕ 315.3 ಮಿ.ಮೀ. ಮಳೆ ದಾಖಲಾಗಿದೆ. ಮಲೆನಾಡಿನ ತಪ್ಪಲಿನಲ್ಲಿರುವ ಕಾರ್ಕಳ ತಾಲೂಕಿನಲ್ಲಿ 256.5 ಮಿ.ಮೀ. ಮಳೆ ಬಿದ್ದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದ ಕುಂದಾಪುರ ತಾಲೂಕಿನಲ್ಲಿ ಕನಿಷ್ಠ 54.5 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಬಿದ್ದ ಮಳೆ ಪ್ರಮಾಣದ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

UDP RAIN 7

ಕೊಡಗಿನಲ್ಲಿ ಪ್ರವಾಹ ಆತಂಕ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ತಲಕಾವೇರಿ ಮತ್ತು ಭಾಗಮಂಡಲ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದು, ತ್ರಿವೇಣಿ ಸಂಗಮ ಬಹುತೇಕ ಮುಳುಗಡೆ ಆಗಿದೆ. ಪರಿಣಾಮವಾಗಿ ಭಾಗಮಂಡಲ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ.

UDP RAIN 8

ನಾಪೋಕ್ಲು ರಸ್ತೆ ಮೇಲೆ 4 ಅಡಿಯಷ್ಟು ನೀರು ಹರಿಯುತ್ತಿದ್ದು, ನೆಲಜಿ, ಅಯ್ಯಂಗೇರಿ, ಸಣ್ಣಪುಲಿಕೋಟು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ವಾಹನಗಳ ಸಂಚಾರವಿಲ್ಲದ ಪರಿಣಾಮ ಜನರು ಪ್ರವಾಹದ ನೀರಿನಲ್ಲೇ ನದಿ ದಾಟುತ್ತಿದ್ದಾರೆ. ಮಳೆ ಹೀಗೆ ಮುಂದುವರೆದಲ್ಲಿ ಮತ್ತೆ ಪ್ರವಾಹ ಉಕ್ಕಿ ಹರಿಯುವ ಸಾಧ್ಯತೆ ಇದೆ. ನಾಳೆ ಬೆಳಗ್ಗೆಯವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಏನಾಗುವುದೋ ಎಂಬ ಆತಂಕದಲ್ಲಿ ಜನರಿದ್ದಾರೆ.

TAGGED:floodKarnataka TainsKodaguPuPublic TVrainudupiಉಡುಪಿಕರ್ನಾಟಕ ಮಳೆಕೊಡಗುಪಬ್ಲಿಕ್ ಟಿವಿಪ್ರವಾಹಮಳೆ
Share This Article
Facebook Whatsapp Whatsapp Telegram

You Might Also Like

bridge collapsed in Vadodara
Latest

ವಡೋದರಾ ಸೇತುವೆ ಕುಸಿದು 13 ಮಂದಿ ಸಾವು ಕೇಸ್‌ – ನಾಲ್ವರು ಎಂಜಿನಿಯರ್‌ಗಳು ಅಮಾನತು

Public TV
By Public TV
3 hours ago
big bulletin 10 July 2025 part 1
Big Bulletin

ಬಿಗ್‌ ಬುಲೆಟಿನ್‌ 10 July 2025 ಭಾಗ-1

Public TV
By Public TV
3 hours ago
big bulletin 10 July 2025 part 2
Big Bulletin

ಬಿಗ್‌ ಬುಲೆಟಿನ್‌ 10 July 2025 ಭಾಗ-2

Public TV
By Public TV
3 hours ago
mysuru attack
Latest

ಮೈಸೂರು| ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ, ವ್ಯಕ್ತಿ ಮೇಲೆ ಡೆಡ್ಲಿ ಅಟ್ಯಾಕ್‌

Public TV
By Public TV
3 hours ago
big bulletin 10 July 2025 part 3
Big Bulletin

ಬಿಗ್‌ ಬುಲೆಟಿನ್‌ 10 July 2025 ಭಾಗ-3

Public TV
By Public TV
3 hours ago
R Ashok 1
Bengaluru City

ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ – ಆರ್.ಅಶೋಕ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?