ತುಮಕೂರು ಜೆಡಿಎಸ್ ಪ್ರಮುಖ ನಾಯಕರೊಂದಿಗೆ ಹೆಚ್‍ಡಿಕೆ ವೀಡಿಯೋ ಸಂವಾದ

Public TV
0 Min Read
HDK

ಬೆಂಗಳೂರು: ಕೋವಿಡ್ 19  ಪರಿಸ್ಥಿತಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ತುಮಕೂರು ಜಿಲ್ಲೆ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪ್ರಮುಖ ನಾಯಕರೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಕೋವಿಡ್ 19 ಆರೈಕೆ ಕೇಂದ್ರಗಳ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇದೆ ಎಂಬುದನ್ನು ತುಮಕೂರು ಜಿಲ್ಲಾ ಜೆಡಿಎಸ್ ಜನಪ್ರತಿನಿಧಿಗಳು ಕುಮಾರಸ್ವಾಮಿ ಅವರ ಗಮನಸೆಳೆದರು. ಈ ಸಂಬಂಧ ಸರ್ಕಾರದೊಂದಿಗೆ  ಚರ್ಚಿಸಿ ಅಗತ್ಯ ಕ್ರಮ  ಕೈಗೊಳ್ಳುವಂತೆ  ಒತ್ತಡ ತರುವುದಾಗಿ ಕುಮಾರಸ್ವಾಮಿ ತಿಳಿಸಿದರು.

HDK 1

ನಿನ್ನೆ ಸೋಮವಾರ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಕೋವಿಡ್ 19 ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ್ದ ಬೆನ್ನಲ್ಲೇ ಇಂದು ತುಮಕೂರು ಜಿಲ್ಲೆಯ ಪಕ್ಷದ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *