Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ತೆರಿಗೆ ಕಟ್ಟಲು ಹಣವಿಲ್ಲ ಎಂದ ನಟ ದಳಪತಿ ವಿಜಯ್‍ಗೆ ಕೋರ್ಟ್ ಛೀಮಾರಿ

Public TV
Last updated: July 13, 2021 9:08 pm
Public TV
Share
2 Min Read
FotoJet 7 5
SHARE

ಚೆನ್ನೈ: ಕಾರಿಗೆ ಕೋಟಿ ಕೋಟಿ ಕೊಟ್ಟು, ತೆರಿಗೆ ಕಟ್ಟಲು ಹಣವಿಲ್ಲ ಎಂದ ತಮಿಳಿನ ಖ್ಯಾತ ನಟ ವಿಜಯ್ ಅವರಿಗೆ ಮದ್ರಾಸ್ ಹೈ ಕೋರ್ಟ್ ಶಾಕ್ ಕೊಟ್ಟಿದೆ. ಒಂದು ಲಕ್ಷ ದಂಡ ವಿಧಿಸುವುದರೊಂದಿಗೆ ಕಠಿಣ ಪದಗಳ ಮೂಲಕ ಟೀಕಿಸಿದೆ.

vijay medium

ವಿಜಯ್ ಅವರ ಬಳಿ ದುಬಾರಿ ಬೆಲೆಯ ಹಲವು ಕಾರುಗಳಿವೆ. ಅದಕ್ಕೆ ಇತ್ತೀಚೆಗೆ ಪ್ರತಿಷ್ಠಿತ ರೋಲ್ಸ್ ರಾಯ್ಸ್ ಕಾರು ಸೇರ್ಪಡೆಯಾಗಿತ್ತು. ಅದೂ ಸಹ ರೋಲ್ಸ್ ರಾಯ್ಸ್ ಘೋಸ್ಟ್ (Rolls Royce Ghost) ಮಾದರಿಯ ಕಾರು. ಆ ಕಾರನ್ನು ಇಂಗ್ಲೆಂಡ್‍ನಿಂದ ಆಮದು ಮಾಡಿಕೊಂಡಿದ್ದ ವಿಜಯ್‍ಗೆ ಭಾರತದಲ್ಲಿ ತೆರಿಗೆ ಕಟ್ಟಲು ಮನಸ್ಸಾಗಲಿಲ್ಲ. ಹಾಗಾಗಿ ಮದ್ರಾಸ್ ಹೈಕೋರ್ಟ್‍ಗೆ ವಿಜಯ್ ತೆರಿಗೆ ವಿನಾಯಿತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನಟನಿಗೆ ಛೀಮಾರಿ ಹಾಕಿದೆ. ಇದನ್ನೂ ಓದಿ: ಗಣಿಗಾರಿಕೆ ವೀಕ್ಷಣೆಗೆ ಜೆಡಿಎಸ್ ಶಾಸಕರು ಬರುವುದಾದರೆ ಸ್ವಾಗತ: ಸುಮಲತಾ

court

ಕೋರ್ಟ್ ಹೇಳಿದ್ದೇನು?

2012ರಲ್ಲಿ ನಟ ವಿಜಯ್ ಸಲ್ಲಿಸಿದ್ದ ತೆರಿಗೆ ವಿನಾಯಿತಿಯ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್‍ನ ನ್ಯಾ.ಎಸ್.ಎಮ್.ಸುಬ್ರಮಣಿಯಮ್ ಅವರಿದ್ದ ಪೀಠವು, ನಿಜವಾದ ಹೀರೋಗಳು ಸರಿಯಾದ ಸಮಯಕ್ಕೆ ತೆರಿಗೆ ಕಟ್ಟುತ್ತಾರೆ. ನೀವು ನಿಜ ಜೀವನದ ಹೀರೋಗಳಾಗಿ, ಬರಿಯ ತೆರೆಯ ಮೇಲಿನ ಹೀರೋಗಳಾಗಿ ಉಳಿಯಬೇಡಿ ಎಂದು ವಿಜಯ್ ಅವರಿಗೆ ಛಾಟಿ ಬೀಸಿದೆ. ಜೊತೆಗೆ ನ್ಯಾಯಾಲಯವು 1ಲಕ್ಷ ರೂ.ಗಳ ದಂಡವನ್ನೂ ವಿಜಯ್‍ಗೆ ವಿಧಿಸಿದ್ದು, ಅದನ್ನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾವತಿಸುವಂತೆ ತಿಳಿಸಿದೆ. ಇದನ್ನೂ ಓದಿ: ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ: ಡಿಕೆಶಿ

tamil actor vijay medium

ಇಂಗ್ಲೆಂಡ್‍ನಿಂದ ತರಿಸಿದ ರೋಲ್ಸ್ ರಾಯ್ಸ್ ಮಾದರಿಯ ಕಾರಿಗೆ ಭಾರತದಲ್ಲಿ ಆಮದು ಸುಂಕವನ್ನು ಕಟ್ಟದೇ ಅದರ ವಿರುದ್ಧವಾಗಿ ವಿಜಯ್ ಅವರು ಕೋರ್ಟ್‍ನ ಮೆಟ್ಟಿಲೇರಿದ್ದರು. ಅದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯವು, ವಿಜಯ್ ಅವರ ವರ್ತನೆಯು ಬಹಳ ಜನರನ್ನು ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿದೆ. ತಮಿಳುನಾಡಿನಂತಹ ರಾಜ್ಯದಲ್ಲಿ ಚಿತ್ರ ನಟರು ಬೇರೆಲ್ಲರಿಗಿಂತ ಹೆಚ್ಚು ಜನರನ್ನು ಪ್ರಭಾವಿಸುತ್ತಾರೆ. ನಟರೇ ಹೀಗೆ ಮಾಡಿದರೆ ತಪ್ಪು ಸಂದೇಶ ಹೋದಂತಾಗುತ್ತದೆ. ನಿಜವಾದ ನಾಯಕನಾದವನು ದೇಶಕ್ಕೆ ಕಟ್ಟಬೇಕಾದ ತೆರಿಗೆಯನ್ನು ತಪ್ಪದೇ ಕಟ್ಟುತ್ತಾನೆ ಎಂದಿದೆ.

tamil actor vijay4 medium

ರಿಟ್ ಅರ್ಜಿಯಲ್ಲಿ ವಿಜಯ್ ತಮ್ಮ ಉದ್ಯೋಗವನ್ನು ನಮೂದಿಸದೇ ಇದ್ದದ್ದನ್ನು ಗಮನಿಸಿದ ನ್ಯಾಯಾಲಯವು ಅದನ್ನೂ ಪ್ರಶ್ನಿಸಿದೆ. ಇಷ್ಟು ದೊಡ್ಡ ಹಿಂಬಾಲಕ ಗಡಣವನ್ನೇ ಹೊಂದಿದ್ದರೂ ನಿಮ್ಮ ಉದ್ಯೋಗದ ಕಾಲಂ ಅನ್ನು ಖಾಲಿ ಬಿಟ್ಟಿದ್ದಾರೆ. ಅಲ್ಲದೇ ರಿಟ್ ಅರ್ಜಿ ಸಲ್ಲಿಸಿ ಒಂಬತ್ತು ವರ್ಷಗಳ ಕಾಲ ನ್ಯಾಯಾಲಯದ ಸಮಯವನ್ನೂ ವ್ಯರ್ಥ ಮಾಡಿದ್ದೀರಿ. ಆಮದು ಸುಂಕ ಕಟ್ಟಿದ್ದೀರೋ, ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಿಲ್ಲ ಎಂದು ವಿಜಯ್ ಮೇಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.

tamil actor vijay5 medium

ನಟರು ತೆರೆಯ ಮೇಲೆ ಭ್ರಷ್ಟಾಚಾರ ವಿರೋಧಿಗಳಾಗಿ, ನ್ಯಾಯ ಪರಿಪಾಲಕರಾಗಿ ದುಷ್ಟರನ್ನು ಸದೆಬಡಿಯುತ್ತಾರೆ. ಬೆಳ್ಳಿತೆರೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವವರೇ ಇವರು ಎಂಬಂತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ. ಆದರೆ ನಿಜ ಜೀವನಕ್ಕೆ ಬಂದಾಗ ತೆರಿಗೆಯನ್ನು ವಂಚಿಸುವುದು ಅವರ ವ್ಯಕ್ತಿತ್ವಕ್ಕೆ ತಕ್ಕುದಾದ ನಡವಳಿಕೆಯಲ್ಲ. ಸಂವಿಧಾನದಲ್ಲಿ ಸೂಚಿಸಲಾಗಿರುವ ಅಸಮಾನತೆಯನ್ನು ತಗ್ಗಿಸುವ ಕಾರ್ಯದಲ್ಲಿ ಸರಿಯಾದ ಸಮಯಕ್ಕೆ ತೆರಿಗೆಯನ್ನು ಕಟ್ಟುವುದೂ ಕೂಡಾ ಸೇರಿದೆ ಎಂದು ನ್ಯಾಯಾಲಯವು ಕಿವಿಮಾತು ಹೇಳಿದೆ.

tamil actor vijay2 medium

ನ್ಯಾ.ಸುಬ್ರಮಣಿಯಮ್ ಈ ಕುರಿತು ತೀರ್ಪಿನಲ್ಲಿ ಸ್ಪಷ್ಟವಾದ ನಿಲುವನ್ನು ದಾಖಲಿಸಿ, ತಾತ್ವಿಕವಾಗಿ ನೋಡುವುದಿದ್ದರೂ ಭಾರತದಂತಹ ಸಾಂಸ್ಕೃತಿಕ ಹಾಗೂ ಮೌಲ್ಯಗಳನ್ನೇ ಪ್ರಧಾನವಾಗಿ ಹೊಂದಿರುವ ದೇಶದಲ್ಲಿ ವಿಶ್ವದ ಶ್ರೇಷ್ಠ ಕಾರು ಉತ್ತಮವಾದ ಜೀವನಕ್ಕೆ ಸಹಕಾರಿಯಾಗಬಲ್ಲದು ಎಂಬುದನ್ನು ಒಪ್ಪಲಾಗದು. ದೇಶದ ಬಡ ಜನರ ರಕ್ತ ಹಾಗೂ ಕಠಿಣ ಶ್ರಮದ ಫಲದಿಂದಾಗಿ ಶ್ರೀಮಂತ ವ್ಯಕ್ತಿಗಳಲ್ಲಿ ಹಣವು ಶೇಖರಣೆಯಾಗಿದೆಯೇ ವಿನಃ, ಆಕಾಶದಿಂದ ಹಣ ಉದುರಿದ ಕಾರಣದಿಂದಲ್ಲ ಎಂದು ಹೇಳಿದೆ.

TAGGED:actor Vijayhighcourttamil actor vijayಕೋರ್ಟ್ತೆರಿಗೆದಳಪತಿ ವಿಜಯ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

janhvi kapoor 4
ಟೈಗರ್ ಶ್ರಾಫ್ ಜೊತೆ ಜಾನ್ವಿ ಕಪೂರ್ ಡ್ಯುಯೆಟ್
16 minutes ago
pawan kalyan 2
ನಿಧಿ ಜೊತೆ ಪವನ್ ಕಲ್ಯಾಣ್ ಮಸ್ತ್ ಡ್ಯಾನ್ಸ್- ‘ಹರಿ ಹರ ವೀರ ಮಲ್ಲು’ ಚಿತ್ರದ ಸಾಂಗ್ ರಿಲೀಸ್
1 hour ago
TEJA SAJJA 1 1
ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್
1 hour ago
urvashi rautela aishwarya rai
ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ
3 hours ago

You Might Also Like

Raichuru Protest
Crime

ರಾಯಚೂರು | ಭಾವಚಿತ್ರ ಸುಟ್ಟು ಕಮಲ್ ಹಾಸನ್ ವಿರುದ್ಧ ಆಕ್ರೋಶ

Public TV
By Public TV
9 minutes ago
Chikkamagaluru KEERTHI
Chikkamagaluru

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 10 ಬಾರಿ ಇರಿದು ಕೊಂದ ಪತಿ

Public TV
By Public TV
13 minutes ago
raft found in kumta coastal area
Latest

ಕಾರವಾರ: ಕಡಲ ತೀರಕ್ಕೆ ತೇಲಿಬಂದ ಹಡಗಿನ ರಾಫ್ಟ್‌ – ಕೇರಳ ಕೊಚ್ಚಿಯಲ್ಲಿ ಮುಳುಗಿದ್ದ ಹಡಗಿನದ್ದಾ?

Public TV
By Public TV
25 minutes ago
Mock drill 1
Latest

ಭಾರತ – ಪಾಕ್‌ ಗಡಿಯಲ್ಲಿರೋ 4 ರಾಜ್ಯಗಳಲ್ಲಿ ನಾಳೆ ಮಾಕ್‌ ಡ್ರಿಲ್

Public TV
By Public TV
42 minutes ago
Bidar Rain 1
Bidar

ಧಾರಾಕಾರ ಮಳೆಗೆ ಜಮೀನುಗಳು ಜಲಾವೃತ – ಲಕ್ಷಾಂತರ ಮೌಲ್ಯದ ಬೆಳೆ ನಾಶ, ರೈತರು ಕಂಗಾಲು

Public TV
By Public TV
50 minutes ago
Abdul Rahims funeral procession stones thrown at showroom bc road kaikamba
Dakshina Kannada

ರಹೀಂ ಶವ ಮೆರವಣಿಗೆ| ಶೋರೂಂ ಮೇಲೆ ಕಲ್ಲು – ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?