ಹೈದರಾಬಾದ್: ದೇಶಾದ್ಯಂತ ಇಂಧನ ಬೆಲೆ ಗಗನಕ್ಕೆ ಏರಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ತೆಲಂಗಾಣದಲ್ಲಿ ಬೈಕ್ ಒಂದನ್ನು ಕೆರೆಗೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದೇಶದಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ತೆಲಂಗಾಣದಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿ ನಗರದ ಪಕ್ಕದಲ್ಲಿದ್ದ ಹುಸೇನ್ ಸಾಗರ್ ಕೆರೆಗೆ ಬೈಕ್ ಒಂದನ್ನು ಎಸೆದು ಆಕ್ರೋಶ ಹೊರಹಾಕಿದೆ. ಇದೀಗ ಈ ಬೈಕ್ ಎಸೆಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ರಾತ್ರೋರಾತ್ರಿ ಕೊರೊನಾ ದೇವಿ ದೇವಸ್ಥಾನ ನಿರ್ಮಾಣ, ಬೆಳಗ್ಗೆ ನೆಲಸಮ
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಎನ್, ಉತ್ತಮ್ ಕುಮಾರ್ ರೆಡ್ಡಿ, ಎ ರೇವಂತ್ ರೆಡ್ಡಿ, ಪೊನ್ನಮ್ ಪ್ರಭಾಕರ್, ಜಯಪ್ರಕಾಶ್ ರೆಡ್ಡಿ, ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, ಸ್ಥಳೀಯ ಪೆಟ್ರೋಲ್ ಬಂಕ್ನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ದೇಶದಲ್ಲಿ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಸೇರಿ ತೈಲ ಬೆಲೆ ಇಳಿಕೆಯಾಗಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Bizarre. So, this is how #Telangana #Congress youth workers/activists thought they should protest against the rising fuel prices- by throwing a bike into Hussain Sagar in #Hyderabad– a water body in the heart of the city. #Congress #PetrolDieselPriceHike pic.twitter.com/9mhRfz8mK1
— Rishika Sadam (@RishikaSadam) June 11, 2021
ಪೆಟ್ರೋಲ್ ಬೆಲೆ ವಿರೋಧಿಸಿ ಪ್ರತಿಭಟನೆಯಲ್ಲಿ ಬೈಕ್ನ್ನು ಎಸೆದ ವೀಡಿಯೋ ನೋಡಿದ ಸಾವಿರಾರು ಮಂದಿ ನೆಟ್ಟಿಗರು, ಈ ಪ್ರತಿಭಟನೆಯನ್ನು ಕಂಡು ಅಚ್ಚರಿ ವ್ಯಕ್ತಪಡಿಸಿ, ವಿವಿಧ ಬಗೆಯ ಕಾಮೆಂಟ್ ಮಾಡುತ್ತಿದ್ದಾರೆ.