ಹೈದರಾಬಾದ್: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.
ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.