ಬೆಂಗಳೂರು: ದಕ್ಷಿಣ ಕರ್ನಾಟಕದ ಪ್ರವಾಸದ ಸಮಯದಲ್ಲಿ ಪ್ರವಾಸಿಗರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವೀಕ್ಷಿಸಲು ಅವಕಾಶ ಕಲ್ಪಿಸಿಕೊಡುವಂತೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ(ಕೆಎಸ್ಟಿಡಿಸಿ) ಅಧ್ಯಕ್ಷೆ ಶ್ರುತಿ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮವು ಆಯೋಜಿಸುತ್ತಿರುವ ವ್ಯವಸ್ಥಿತ ಪ್ರವಾಸಗಳ ಪೈಕಿ, ದಕ್ಷಿಣ ಕರ್ನಾಟಕ ಪ್ರವಾಸದ ಸಮಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಪ್ರಮುಖ ಕ್ಷೇತ್ರ ದರ್ಶನವಾಗಿದ್ದು, ಪ್ರವಾಸಿಗರಿಗೆ ಶ್ರೀ ಕ್ಷೇತ್ರ ದರ್ಶಿಸಲು ಶೀಘ್ರದರ್ಶನ ವ್ಯವಸ್ಥೆ ಕಲ್ಲಿಸಿಕೊಡುವಂತೆ ಕೋರಿ, ಕೆಎಸ್ಟಿಡಿಸಿ ಅಧ್ಯಕ್ಷೆ ಶ್ರುತಿ ಅವರು ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾರವರು ಉಪಸ್ಥಿತರಿದ್ದರು.