Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

Public TV
Last updated: June 17, 2020 3:30 pm
Public TV
Share
2 Min Read
rmg hdk 2 1
SHARE

– ನಮ್ಮ ದೇಶದ ಸೈನಿಕರು ಸಮರ್ಥರು
– ಎರಡು ದೇಶಗಳ ಪ್ರಧಾನಿಗಳಲ್ಲಿ ಮನವಿ

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ ನಡೆಯುವಂತ ವಾತಾವರಣ ನಿರ್ಮಾಣವಾಗಿದೆ. ಇದು ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದರು.

Army india china

ಭಾರತ ಹಾಗೂ ಚೀನಾ ಎರಡು ದೇಶದ ಪ್ರಧಾನಮಂತ್ರಿಗಳಿಗೆ  ನಾನು ಮನವಿ ಮಾಡುತ್ತೇನೆ. ಅದೇನೆಂದರೆ ಇಂತಹ ಸನ್ನಿವೇಶದಲ್ಲಿ ಪರಸ್ಪರ ಅವಿಶ್ವಾಸದ ಹಿನ್ನೆಲೆಯಲ್ಲಿ ಅಥವಾ ಬೇರೆ ಬೇರೆ ಕಾರಣದಿಂದ ಯುದ್ಧದ ವಾತಾವರಣ ನಿರ್ಮಾಣ ಮಾಡುವುದು ಬೇಡ. ಇದರಿಂದ ಒಂದು ಕಡೆ ಅಮಾಯಕ ಯೋಧರ ಬಲಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಎರಡು ದೇಶಗಳ ನಡುವಿನ ಸಾಮರಸ್ಯ ಹಾಳುಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು.

india china ladakh border conflict

45 ವರ್ಷಗಳ ನಂತರ ಯುದ್ಧದ ವಾತಾವರಣ ಮೊದಲ ಬಾರಿಗೆ ಆಗಿದೆ. 1967ರ ಯುದ್ಧದ ನಂತರ ಎರಡು ದೇಶಗಳ ನಡುವೆ ಸಾಮರಸ್ಯ ಇರಲಿಲ್ಲ. 35 ವರ್ಷಗಳ ನಂತರ ಚೀನಾದ ಪ್ರಧಾನಿ ದೆಹಲಿಗೆ ಬಂದಿದ್ದು ದೇವೇಗೌಡರು ಪ್ರಧಾನಿ ಆದಾಗ. ಮೊದಲನೇ ಬಾರಿಗೆ ಎಚ್.ಡಿ. ದೇವೇಗೌಡರು ಪ್ರಧಾನಿ ಆದಾಗ ಒಪ್ಪಂದ ಆಗಿದೆ. ಆದರೆ ಅಂದು ದೊಡ್ಡ ಮಟ್ಟದ ಪ್ರಚಾರ ಸಿಗಲಿಲ್ಲ. ಕನ್ನಡಿಗ ಪ್ರಧಾನಿ ಪ್ರಚಾರ ಪಡೆಯದೆ, ದೇಶವನ್ನು ರಕ್ಷಣೆ ಮಾಡುವಲ್ಲಿ ಮಾಡಿದ ಕೆಲಸ ನೆನೆಪಿಸಿಕೊಳ್ಳುವ ಕೆಲಸ ಯಾರೂ ಮಾಡಿಲ್ಲ. ಆದರೆ ಅದು ಇತಿಹಾಸ, ಆಗ ನಾನು ಎಂಪಿ ಆಗಿದ್ದೆ ಎಂದು ಹೇಳಿದರು.

vlcsnap 2020 06 17 15h08m05s155

ಈಗ ನಮ್ಮ ದೇಶದ ಪ್ರಧಾನಿ ಇಡೀ ವಿಶ್ವದಲ್ಲೇ ಬಲಾಢ್ಯ ಪ್ರಧಾನಿ ಅಂತ ಚರ್ಚೆಯಾಗುತ್ತಿದೆ. ಇವತ್ತು ಬಲಾಢ್ಯತೆ ಹೊಂದುವುದು ಬೇರೆ. ಶಾಂತಿಯುತವಾಗಿ ಅಕ್ಕಪಕ್ಕದ ದೇಶಗಳ ಜೊತೆ ವಿಶ್ವಾಸ ಮೂಡಿಸಿಕೊಂಡು ಕೆಲಸ ಮಾಡಬೇಕು. ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ನಮ್ಮ ದೇಶದ ಸೈನಿಕರು ಎಲ್ಲ ರೀತಿಯಲ್ಲಿ ಸಮರ್ಥರಿದ್ದಾರೆ. ನಮ್ಮ ದೇಶದ ಸೈನಿಕರ ಸಾಹಸ ಬೇರೆ ದೇಶಗಳ ಸೈನಿಕರಿಗೆ ಏನು ಕಡಿಮೆಯಿಲ್ಲ. ನಮ್ಮ ದೇಶದ ರಕ್ಷಣಾ ವ್ಯವಸ್ಥೆಯನ್ನ ಚೀನಾ ಹುಡುಗಾಟಿಕೆ ಅಂತ ಪರಿಗಣಿಸೋದು ಬೇಡ ಎಂದರು.

ಈಗಾಗಲೇ ಕೊರೊನಾದಿಂದ ಜಗತ್ತಲ್ಲಿ ಸಾವು ಸಂಭವಿಸುತ್ತಿವೆ. ಹೀಗಾಗಿ ಪರಸ್ಪರ ಶಾಂತಿಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳೋಣ. ಚರ್ಚೆಯ ಹಂತದಲ್ಲೇ ಈ ರೀತಿಯ ಯೋಧರ ಹತ್ಯೆಯಾಗಿರೋದು ಖಂಡನೀಯ. ಚೀನಾ ದೇಶದ ನಡುವಳಿಕೆ ಸಹ ಸರಿಯಲ್ಲ. ಇದನ್ನು ಇಲ್ಲಿಗೆ ಸ್ಥಗಿತಗೊಳಿಸಿ ಹೊಂದಾಣಿಕೆ ಮೂಲಕ ಪರಿಹರಿಸಿಕೊಳ್ಳಬೇಕು. ಸಾವು-ನೋವುಗಳು ಆಗದಂತೆ ತಡೆಯಬೇಕು. ಜವಾಬ್ದಾರಿಯುತ ಸ್ಥಾನಮಾನದಲ್ಲಿರುವವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.

TAGGED:bengaluruchinahd kumaraswamyindiaprime ministerPublic TVwarriorsಎಚ್ ಡಿ ಕುಮಾರಸ್ವಾಮಿಚೀನಾಪಬ್ಲಿಕ್ ಟಿವಿಪ್ರಧಾನಿಬೆಂಗಳೂರುಭಾರತಯೋಧರು
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
7 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
22 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
26 minutes ago
01 NEW 1
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 1

Public TV
By Public TV
40 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 2

Public TV
By Public TV
40 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?