– 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ
ಬೆಂಗಳೂರು: ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬರುವಂತೆ ಸರ್ಕಾರಿ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ಜೊತೆ ಮಾತುಕತೆ ಪ್ರಶ್ನೆಯೇ ಇಲ್ಲ. ನಾನು ಹಠ ಮಾಡ್ತಿಲ್ಲ. 8 ಬೇಡಿಕೆ ಈಡೇರಿಸಿದ್ದೇವೆ. ಆದ್ರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಆದಾಯದಲ್ಲಿ ಶೇ.86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ರೇ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು. ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ ಎಂದು ಸಿಎಂ ಮತ್ತೊಮ್ಮೆ ಉಚ್ಚರಿಸಿದರು.
ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಈಗ್ಲಾದ್ರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ. ಯಾರ ಜೊತೆ ಮಾತನಾಡಬೇಕು, ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದರು.
ಇವತ್ತಿನಿಂದ ನಿಮ್ಮ ಬಸ್ಗಳನ್ನ ಓಡಾಡಿಸೋಕೆ ಶುರು ಮಾಡಿ. ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿರುವಾಗ ಈ ರೀತಿ ಹಠ ಮಾಡೋದು ಎಷ್ಟರ ಮಟ್ಟಿಗೆ ಸರಿ, ನೀವೇ ಯೋಚನೆ ಮಾಡಿ. ಮತ್ತೊಮ್ಮೆ ಮನವಿ ಮಾಡ್ತೀನಿ, ಹಠ ಬಿಟ್ಟು ಬನ್ನಿ. ಯಾರತ್ರಾ ಮಾತುಕತೆ ಮಾಡೋದು..? ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೋಡಿಹಳ್ಳಿ ನೇತೃತ್ವದ ಸಂಘಟನೆಯ ಜೊತೆ ಮಾತಾಡಲ್ಲ ಎಂದು ಸಿಎಂ ಹೇಳಿದರು.