ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

Public TV
2 Min Read
DARSHAN

ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಪ್ರಾಣಿಗಳನ್ನು ದತ್ತು ಸ್ವೀಕರಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದರು. ಅವರ ಮಾತಿನಂತೆ ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ ಎಂದು ದಾಸ ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ನಿರ್ಮಾಪಕಿ ಶೈಲಜಾ ನಾಗ್ ಮತ್ತು ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಒಂದು ಸಿಂಹವನ್ನು ದತ್ತು ಪಡೆದುಕೊಂಡಿದ್ದಾರೆ. ಹಾಗೂ ದರ್ಶನ್ ಮಾತಿಗೆ ಹಾಗೂ ಪ್ರಾಣಿಗಳ ಮೇಲಿರುವ ಪ್ರೀತಿಗೆ ಹಲವು ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ ಈ ಕುರಿತಾಗಿ ದರ್ಶನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡು ಧನ್ಯವಾದವನ್ನು ಹೇಳಿದ್ದಾರೆ. ಇದನ್ನೂ ಓದಿ: ಚಿರುವಿನ ಕೊನೆಯ ದಿನ ನಡೆದಿದ್ದು ಏನು? – ಬಹಿರಂಗ ಪಡಿಸಿದ ಮೇಘನಾ

ಲಾಕ್‍ಡೌನ್ ಇದರಿಂದಾಗಿ ಜನರು ಮಾತ್ರವಲ್ಲ, ಪ್ರಾಣಿಗಳು ಕೂಡ ಸಂಕಷ್ಟವನ್ನು ಎದುರಿಸುತ್ತಿವೆ. ರಾಜ್ಯದಲ್ಲಿರುವ 9 ಪ್ರಾಣಿ ಸಂಗ್ರಹಾಲಯಗಳು ಕೂಡ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಇದರಿಂದ ಆಹಾರಕ್ಕೂ ಸಮಸ್ಯೆಯಾಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ನಟ ದರ್ಶನ್ ನೆರವಿಗೆ ಧಾವಿಸಿದ್ದಾರೆ.

ಪರಿಸರ ದಿನಾಚರಣೆಯಂದು ವೀಡಿಯೋ ಮೂಲಕ ಅಭಿಮಾನಿ ಮತ್ತು ಆಪ್ತರ ಬಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡು ಸಹಕರಿಸಿ ಎಂದು ಮನವಿ ಮಾಡಿದ್ದರು. ಪ್ರಾಣಿ ಸಂಗ್ರಹಾಲಯದಲ್ಲಿರುವ ಇಷ್ಟವಾದ ಪ್ರಾಣಿಗಳನ್ನು ದತ್ತು ಪಡೆಯಬಹುದೆಂದು ಹೇಳಿದ್ದರು. ದರ್ಶನ್ ಅವರ ಮನವಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾತ್ರವಲ್ಲದೆ ಅನೇಕರಿಗೆ ಅದು ತಲುಪಿದೆ. ಇದನ್ನು ಗಮನಿಸಿದ ಅವರ ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಸ್ವೀಕರಿಸುತ್ತಿದ್ದಾರೆ.

ದರ್ಶನ್ ಹೇಳಿದ್ದೇ ತಡ ಅಭಿಮಾನಿಗಳು, ನಾ ಮುಂದು ತಾ ಮುಂದು ಎಂದು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುತ್ತಿದ್ದಾರೆ. ಈ ರೀತಿ ದತ್ತು ಪಡೆದುಕೊಂಡವರಿಗೆ ಮೃಗಾಲಯದ ವತಿಯಿಂದ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಆ ಪ್ರಮಾಣ ಪತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ದರ್ಶನ್, ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *